ನೊಬೆಲ್ ಶಾಂತಿ ಪ್ರಶಸ್ತಿಗೆ ಆಲ್ಟ್ ನ್ಯೂಸ್ನ ಮೊಹಮ್ಮದ್ ಜುಬೇರ್, ಪ್ರತೀಕ್ ಸಿನ್ಹಾ ಸ್ಪರ್ಧೆ
ನವದೆಹಲಿ, ಅಕ್ಟೋಬರ್ 5: ಭಾರತದ ಫ್ಯಾಕ್ಟ್ ಚೆಕ್ಕರ್ ಮತ್ತು ಪರ್ಯಾಯ ಮಾಧ್ಯಮ ವೇದಿಕೆಯ ಸಂಸ್ಥಾಪಕರಾದ ಆಲ್ಟ್ ನ್ಯೂಸ್ ಮೊಹಮ್ಮದ್ ಜುಬೈರ್ ಮತ್ತು ಪ್ರತೀಕ್ ಸಿನ್ಹಾ ಅವರು 2022ರ ನೊಬೆಲ್ ಶಾಂತಿ ಪ್ರಶಸ್ತಿಯ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ ಸ್ಪರ್ಧೆಯಲ್ಲಿರುವವರ ಪಟ್ಟಿಯ ಪ್ರಕಾರ, ನಾರ್ವೇಜಿಯನ್ ತೀರ್ಪುಗಾರರ ಮೂಲಕ ನಾಮನಿರ್ದೇಶನಗಳು, ಬುಕ್ಮೇಕರ್ಗಳಿಂದ ಫೀಚರ್ಗಳು ಮತ್ತು ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ ಓಸ್ಲೋದ ಆಯ್ಕೆಗಳ ಆಧಾರದ ಮೇಲೆ ಫ್ಯಾಕ್ಟ್ಚೆಕ್ನ ಈ ಜೋಡಿಯು ಅದರಲ್ಲಿ ಕಾಣಿಸಿಕೊಂಡಿದೆ.
ಇವರೊಂದಿಗೆ ಇತರ ಪ್ರಬಲ ಸ್ಪರ್ಧಿಗಳಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯಾದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಲ್ನಿ ಮತ್ತು ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಕೂಡ ಸೇರಿದ್ದಾರೆ. 2022ರ ನೊಬೆಲ್ ಶಾಂತಿ ಪ್ರಶಸ್ತಿಯ ಫಲಿತಾಂಶಗಳನ್ನು ನಾರ್ವೆಯ ಓಸ್ಲೋದಲ್ಲಿ ಶುಕ್ರವಾರ ಸ್ಥಳೀಯ ಸಮಯ 11 ಗಂಟೆಗೆ ಪ್ರಕಟಿಸಲಾಗುತ್ತದೆ.

ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದ ಹಿಂದೂ ದೇವತೆಯ ವಿರುದ್ಧ 2018ರಲ್ಲಿ ಟ್ವೀಟ್ ಮಾಡಿದ್ದ ಜುಬೈರ್ ಅವರನ್ನು ಈ ವರ್ಷ ಜೂನ್ 27 ರಂದು ದೆಹಲಿ ಪೊಲೀಸರು ಬಂಧಿಸಿದ್ದರು. ಅವರು ಸುಮಾರು ಒಂದು ತಿಂಗಳ ಕಾಲ ಪೊಲೀಸ್ ಮತ್ತು ನ್ಯಾಯಾಂಗ ಬಂಧನದಲ್ಲಿದ್ದರು. ಫ್ಯಾಕ್ಟ್ ಚೆಕ್ಕರ್ ತಮ್ಮ ಟ್ವೀಟ್ಗಾಗಿ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಅವರ ವಿರುದ್ಧ ಹಲವು ಎಫ್ಐಆರ್ಗಳು ದಾಖಲಾಗಿದ್ದವು. ಆರೋಪಗಳ ತನಿಖೆಗಾಗಿ ಯುಪಿ ಪೊಲೀಸರು ವಿಶೇಷ ತನಿಖಾ ತಂಡವನ್ನು ಸಹ ರಚಿಸಿದ್ದರು.

ವಿಶ್ವದಾದ್ಯಂತ ಪತ್ರಕರ್ತರು ಬಂಧನವನ್ನು ಖಂಡಿಸಿದ ನಂತರ ಈ ಘಟನೆಯು ಅಂತಾರಾಷ್ಟ್ರೀಯ ಗಮನವನ್ನು ಸೆಳೆದಿತ್ತು. ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಜುಲೈ 20 ರಂದು ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತು. ಬಿಜೆಪಿ ನೇತೃತ್ವದ ಯುಪಿ ಸರ್ಕಾರವು ಭವಿಷ್ಯದಲ್ಲಿ ಟ್ವೀಟ್ ಮಾಡದಂತೆ ಜುಬೈರ್ ಅವರನ್ನು ತಡೆಯಲು ಸುಪ್ರೀಂ ಕೋರ್ಟ್ ನಿರಾಕರಿಸಿತು.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications