Rain Alert: ಭಾರೀ ಮಳೆಗೆ ರಸ್ತೆಗಳು ಜಲಾವೃತ, ಹೈದರಾಬಾದ್ ಬಳಿಕ ಈ ನಗರಗಳಲ್ಲಿ ಪ್ರವಾಹ: Video
Rain Alert: ಹವಾಮಾನದಲ್ಲಿನ ಬದಲಾವಣೆಯಿಂದಾಗಿ ಆಂಧ್ರ ಪ್ರದೇಶ ಹಾಗೂ ವಿಜಯವಾಡದಲ್ಲಿ ಭಾರಿ ಮಳೆ ಆಗಿದೆ. ಕಳೆದ ಕೆಲವು ವಾರಗಳ ಹಿಂದೆ ಮೇಲ್ಸೇತುವೆ ಮೇಲೆ ಮಳೆ ನೀರು ನಿಂತು ವಾಹನಗಳಿಗೆ ಸಮಸ್ಯೆ ಉಂಟಾಗಿದೆ. ಅಲ್ಲಿನ ಪ್ರವಾಹ ಸುದ್ದಿ ದೇಶವ್ಯಾಪಿ ಸುದ್ದಿಯಾಗಿತ್ತು. ಇದೀಗ ವಿಜಯವಾಡದಲ್ಲಿ ಅಂಥದ್ದೇ ಸ್ಥಿತಿ ಉಂಟಾಗಿದೆ. ಅಡಿಗಳಷ್ಟು ನೀರು ರಸ್ತೆ ಮೇಲೆ ನಿಂತಿದ್ದು, ಅದರಲ್ಲಿಯೇ ವಾಹನಗಳು ಸಂಚಾರ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಬಂಗಾಳಕೊಲ್ಲಿಯ ಪಶ್ಚಿಮ-ಮಧ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ವಾಯುವ್ಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ಉಂಟಾಗಿದೆ. ಬುಧವಾರ (ಆಗಸ್ಟ್ 13) ಮತ್ತಷ್ಟು ಮಳೆ ಉಂಟಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದ ಸುರಿದ ಮಳೆ ಪೈಕಿ ಮಂಗಳವಾರ ವ್ಯಾಪಕ ಮಳೆ ಆಗಿದೆ. ಇದರಿಂದ ಪ್ರಮುಖ ರಸ್ತೆಗಳೇ ಜಲಾವೃತಗೊಂಡಿವೆ. ನಂದ್ಯಾಲ್, ಪ್ರಕಾಶಂ, ಪಲ್ನಾಡು, ಬಾಪಟ್ಲಾ, ಗುಂಟೂರು, ಕೃಷ್ಣ, ಎನ್ಟಿಆರ್, ಪಶ್ಚಿಮ ಗೋದಾವರಿ ಸೇರಿದಂತೆ ಅನೇಕ ಕಡೆಗಳಲ್ಲಿ ಭಾರೀ ಮಳೆ ಆಗಿದ್ದರಿಂದ ಸಂಚಾರ, ಜನ ಜೀವನ ಅಸ್ತವ್ಯಸ್ಥವಾಗಿದೆ. ವಿಧಿ ಇಲ್ಲದೇ ಭಯದಲ್ಲೇ ಕೆರೆಯಂತಾದ ರಸ್ತೆಗಳಲ್ಲಿ ಜೀವ ಕೈಲಿ ಹಿಡಿದು ವಾಹನಗಳು ಓಡಾಡಿವೆ.

ಅಮರಾವತಿ, ಗುಂಟೂರು-ವಿಜಯವಾಡ ಪ್ರದೇಶದಲ್ಲಿ ರಾತ್ರಿಯಿಡೀ ಭಾರೀ ಮಳೆ ಆಗಿದೆ. ದುಗ್ಗಿರಾಳದಲ್ಲಿ 190 ಮಿ.ಮೀ, ತಲ್ಲೂರು 167 ಮಿ.ಮೀ, ಅಮರಾವತಿ 166 ಮಿ.ಮೀ, ಗುಂಟೂರು ಇಎಸ್ಐ ಆಸ್ಪತ್ರೆ 160 ಮಿ.ಮೀ, ಪೆಡಕಾಕನಿ 157 ಮಿ.ಮೀ. ಹಾಗೂ ಎಸ್ಆರ್ಎಂ ವಿಶ್ವವಿದ್ಯಾಲಯ (ಮಂಗಳಗಿರಿ) 138 ಮಿ.ಮೀಟರ್ ಮಳೆ ದಾಖಲಾಗಿದೆ. ಇನ್ನೂ ಸೋಮವಾರ ಬೆಳಗ್ಗೆಯಿಂದ ಮಂಗಳವಾರ ಬೆಳಗ್ಗೆ ವರೆಗೆ ಇಲ್ಲಿನ ಪಾರ್ವತಿಪುರಂ ಮಾನ್ಯಂ, ಬಾಪಟ್ಲ, ಪಲ್ನಾಡು, ಅನ್ನಮಯ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಕೊಮರಡದಲ್ಲಿ ರಾಜ್ಯದ ಅತಿ ಹೆಚ್ಚು 10 ಸೆಂ.ಮೀ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Amaravathi, Guntur - Vijayawada region received very heavy rain ☔️ over night.
— Naveen Reddy (@navin_ankampali) August 13, 2025
Duggirala - 190 mm
Thullur - 167 mm
Amaravathi - 166 mm
Guntur ESI Hospital - 160 mm
Pedakakani - 157 mm
SRM University(Mangalagiri) - 138 mm
VC - Vishnu pic.twitter.com/P1XxpaUmNA
ಈ ನಿರಂತರ ಮಳೆಯಿಂದಾಗಿ ವಿಜಯಪವಾಡ, ಅಮರಾವತಿ, ತಲ್ಲೂರು ಭಾಗದಲ್ಲಿ ಪ್ರವಾಸ ಸ್ಥಿತಿ ನಿರ್ಮಾಣವಾಗಿದೆ. ಬಂಗಾಳಕೊಲ್ಲಿ ಭಾಗದ ಹವಾಮಾನ ವೈಪರೀತ್ಯಗಳಾದ ವಾಯುಭಾರ ಕುಸಿತ ತೀವ್ರಗೊಳ್ಳುವ ಸೂಚನೆ ಇದೆ. ಮುಂದಿನ ಎರಡು ದಿನ 50 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಇದೇ ವಿಜಯವಾಡ, ಅಮರಾವತಿ ಭಾಗಗಳಲ್ಲಿ ಹೆಚ್ಚಿನ ಮಳೆ ಆಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ಕೊಡಲಾಗಿದೆ.
-
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications