ಜನಸೇನಾ ಪಕ್ಷ ಅಧಿಕಾರಕ್ಕೆ ಬಂದರೆ ಅಮರಾವತಿ ಆಂಧ್ರದ ರಾಜಧಾನಿಯಾಗಿ ಉಳಿಯಲಿದೆ: ಪವನ್ ಕಲ್ಯಾಣ್
ಅಮರಾವತಿ, ಜೂನ್. 16: 2024 ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿಯಾಗಿ ಉಳಿಸಿಕೊಳ್ಳಲಾಗುವುದು ಎಂದು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಘೋಷಿಸಿದ್ದಾರೆ.
ರಾಜ್ಯದಲ್ಲಿ ವಾರಾಹಿ ಯಾತ್ರೆ ನಡೆಸುತ್ತಿರುವ ಪವನ್ ಕಲ್ಯಾಣ್, ರಾಜಧಾನಿ ಅಮರಾವತಿಗಾಗಿ ತಮ್ಮ ಭೂಮಿಯನ್ನು ಬಿಟ್ಟುಕೊಟ್ಟ ಕನಿಷ್ಠ 185 ರೈತರು ವೈಎಸ್ಆರ್ಸಿಪಿ ಸರ್ಕಾರದ ನಂತರವೂ ಸಂಕಷ್ಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಮೂರು ರಾಜಧಾನಿಗಳನ್ನು ಸ್ಥಾಪಿಸುವ ಸರ್ಕಾರದ ಕ್ರಮಗಳಿಗೆ ಟಕ್ಕರ್ ನೀಡಿದ್ದಾರೆ.

" ಜಗನ್ ಮೋಹನ್ ರೆಡ್ಡಿ ಅವರು ವಿರೋಧ ಪಕ್ಷದಲ್ಲಿದ್ದಾಗ ಈ ವಿಷಯದ ಬಗ್ಗೆ ಏಕೆ ಮೌನವಾಗಿದ್ದರು..? ಅವರು ಅಮರಾವತಿಗೆ ಇನ್ನೂ 5,000 ಎಕರೆಗಳನ್ನು ಬಯಸಿ ಅಧಿಕಾರಕ್ಕೆ ಬಂದ ನಂತರ ಈ ವಿಷಯದಲ್ಲಿ ತಮ್ಮ ನಿಲುವನ್ನು ಬದಲಾಯಿಸಿದರು" ಎಂದು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಸಿಎಂ ವಿರುದ್ಧ ಆರೋಪಿಸಿದ್ದಾರೆ.
ಅವಿಭಜಿತ ಆಂಧ್ರಪ್ರದೇಶದ ಸೈಬರಾಬಾದ್ನಲ್ಲಿ ನಡೆದಂತೆ ರಾಜ್ಯದ ಪ್ರತಿಯೊಂದು ಪ್ರದೇಶದ ಜನರನ್ನು ಅಮರಾವತಿಗೆ ಆಕರ್ಷಿಸುವ ನೀತಿಯನ್ನು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ತರಬೇಕಿತ್ತು. ಬದಲಿಗೆ ಮುಖ್ಯಮಂತ್ರಿ ಮೂರು ರಾಜಧಾನಿಗಳ ನಾಟಕ ಆಡುತ್ತಿದ್ದಾರೆ ಎಂದು ಜಗನ್ ವಿರುದ್ದ ಕಿಡಿಕಾರಿದ್ದಾರೆ.
ದಲಿತರ ಕಲ್ಯಾಣದ ಬಗ್ಗೆ ಪ್ರಸ್ತಾಪಿಸಿದ ಪವನ್ ಕಲ್ಯಾಣ್, ಜಗನ್ ಮೋಹನ್ ರೆಡ್ಡಿ ಅವರು ದಲಿತರಿಗಾಗಿ 18 ಕಲ್ಯಾಣ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ''ದಲಿತರ ಕಲ್ಯಾಣ ಯೋಜನೆಗಳನ್ನು ರದ್ದುಗೊಳಿಸಿ 100 ಅಡಿ ಎತ್ತರದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಿಸುವುದರಲ್ಲಿ ಅರ್ಥವೇನಿದೆ..?" ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಿಎಂ ಜಗನ್ ಮೋಹನ್ ರೆಡ್ಡಿ ಅವರು ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಪವನ್ ಕಲ್ಯಾಣ್, "ಚುನಾವಣೆಯು ನವೆಂಬರ್ ಅಥವಾ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆಯಿದೆ. ಯುವಕರು ಪ್ರಜ್ಞಾವಂತಿಕೆಯಿಂದ ಮತದಾನ ಮಾಡಬೇಕು. ಕಾಪು ಸಮುದಾಯಕ್ಕೆ ಮೀಸಲಾತಿ ನಿರಾಕರಿಸಿದ ಮುಖ್ಯಮಂತ್ರಿಯ ಪರವಾಗಿ ಮತ ಹಾಕಬೇಕೇ ಎಂಬುದನ್ನು ನಿರ್ಧರಿಸಬೇಕು" ಎಂದಿದ್ದಾರೆ.
ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸುಳಿವು ನೀಡಿದ ಪವನ್ ಕಲ್ಯಾಣ್, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ವರ್ಗಕ್ಕೆ ಸೇರಿದ ಕುಟುಂಬಗಳಿಗೆ ಉಚಿತವಾಗಿ ಮರಳು ಸರಬರಾಜು ಮಾಡಲು ಮತ್ತು ಜೆಎಸ್ಪಿಯನ್ನು ಅಧೀಕಾರಕ್ಕೆ ತಂದರೆ ಸ್ಥಳೀಯ ಸಂಸ್ಥೆಗಳಿಗೆ ಸಂಪೂರ್ಣವಾಗಿ ಅನುದಾನ ಬಿಡುಗಡೆ ಮಾಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ.
ಇತ್ತ, ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮೊದಲ ಬಾರಿಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್ಆರ್ಸಿಪಿ) 2024 ರ ಸಾರ್ವತ್ರಿಕ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬೆಂಬಲವನ್ನು ಹೊಂದಿಲ್ಲದಿರಬಹುದು ಎಂಬ ಸುಳಿವು ನೀಡಿದ್ದಾರೆ. ತೆಲುಗು ದೇಶಂ ಪಕ್ಷದ (ಟಿಡಿಪಿ) ವಿರುದ್ಧ ಏಕಾಂಗಿಯಾಗಿ ರಾಜಕೀಯ ಹೋರಾಟ ನಡೆಸುತ್ತಿದ್ದೇನೆ . ಪ್ರಮುಖ ವಿರೋಧ ಪಕ್ಷಕ್ಕೆ ಜೆಎಸ್ಪಿ ಅಧ್ಯಕ್ಷ ಪವನ್ ಕಲ್ಯಾಣ್ ಮತ್ತು ಕೆಲವು ಮಾಧ್ಯಮಗಳ ಬೆಂಬಲವಿದೆ. ಆದರೆ, ವೈಎಸ್ಆರ್ಸಿಪಿಗೆ ಬಿಜೆಪಿಯಿಂದ ಉತ್ತಮ ಬೆಂಬಲ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications