Get Updates
Get notified of breaking news, exclusive insights, and must-see stories!

ಜನಸೇನಾ ಪಕ್ಷ ಅಧಿಕಾರಕ್ಕೆ ಬಂದರೆ ಅಮರಾವತಿ ಆಂಧ್ರದ ರಾಜಧಾನಿಯಾಗಿ ಉಳಿಯಲಿದೆ: ಪವನ್ ಕಲ್ಯಾಣ್

ಅಮರಾವತಿ, ಜೂನ್. 16: 2024 ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿಯಾಗಿ ಉಳಿಸಿಕೊಳ್ಳಲಾಗುವುದು ಎಂದು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಘೋಷಿಸಿದ್ದಾರೆ.

ರಾಜ್ಯದಲ್ಲಿ ವಾರಾಹಿ ಯಾತ್ರೆ ನಡೆಸುತ್ತಿರುವ ಪವನ್ ಕಲ್ಯಾಣ್, ರಾಜಧಾನಿ ಅಮರಾವತಿಗಾಗಿ ತಮ್ಮ ಭೂಮಿಯನ್ನು ಬಿಟ್ಟುಕೊಟ್ಟ ಕನಿಷ್ಠ 185 ರೈತರು ವೈಎಸ್‌ಆರ್‌ಸಿಪಿ ಸರ್ಕಾರದ ನಂತರವೂ ಸಂಕಷ್ಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಮೂರು ರಾಜಧಾನಿಗಳನ್ನು ಸ್ಥಾಪಿಸುವ ಸರ್ಕಾರದ ಕ್ರಮಗಳಿಗೆ ಟಕ್ಕರ್ ನೀಡಿದ್ದಾರೆ.

Amaravati will remain capital of Andhra Pradesh if JSP Elected: Pawan Kalyan

" ಜಗನ್ ಮೋಹನ್ ರೆಡ್ಡಿ ಅವರು ವಿರೋಧ ಪಕ್ಷದಲ್ಲಿದ್ದಾಗ ಈ ವಿಷಯದ ಬಗ್ಗೆ ಏಕೆ ಮೌನವಾಗಿದ್ದರು..? ಅವರು ಅಮರಾವತಿಗೆ ಇನ್ನೂ 5,000 ಎಕರೆಗಳನ್ನು ಬಯಸಿ ಅಧಿಕಾರಕ್ಕೆ ಬಂದ ನಂತರ ಈ ವಿಷಯದಲ್ಲಿ ತಮ್ಮ ನಿಲುವನ್ನು ಬದಲಾಯಿಸಿದರು" ಎಂದು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಸಿಎಂ ವಿರುದ್ಧ ಆರೋಪಿಸಿದ್ದಾರೆ.

ಅವಿಭಜಿತ ಆಂಧ್ರಪ್ರದೇಶದ ಸೈಬರಾಬಾದ್‌ನಲ್ಲಿ ನಡೆದಂತೆ ರಾಜ್ಯದ ಪ್ರತಿಯೊಂದು ಪ್ರದೇಶದ ಜನರನ್ನು ಅಮರಾವತಿಗೆ ಆಕರ್ಷಿಸುವ ನೀತಿಯನ್ನು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ತರಬೇಕಿತ್ತು. ಬದಲಿಗೆ ಮುಖ್ಯಮಂತ್ರಿ ಮೂರು ರಾಜಧಾನಿಗಳ ನಾಟಕ ಆಡುತ್ತಿದ್ದಾರೆ ಎಂದು ಜಗನ್ ವಿರುದ್ದ ಕಿಡಿಕಾರಿದ್ದಾರೆ.

ದಲಿತರ ಕಲ್ಯಾಣದ ಬಗ್ಗೆ ಪ್ರಸ್ತಾಪಿಸಿದ ಪವನ್ ಕಲ್ಯಾಣ್, ಜಗನ್ ಮೋಹನ್ ರೆಡ್ಡಿ ಅವರು ದಲಿತರಿಗಾಗಿ 18 ಕಲ್ಯಾಣ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ''ದಲಿತರ ಕಲ್ಯಾಣ ಯೋಜನೆಗಳನ್ನು ರದ್ದುಗೊಳಿಸಿ 100 ಅಡಿ ಎತ್ತರದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಿಸುವುದರಲ್ಲಿ ಅರ್ಥವೇನಿದೆ..?" ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಿಎಂ ಜಗನ್ ಮೋಹನ್ ರೆಡ್ಡಿ ಅವರು ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಪವನ್ ಕಲ್ಯಾಣ್, "ಚುನಾವಣೆಯು ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಯುವಕರು ಪ್ರಜ್ಞಾವಂತಿಕೆಯಿಂದ ಮತದಾನ ಮಾಡಬೇಕು. ಕಾಪು ಸಮುದಾಯಕ್ಕೆ ಮೀಸಲಾತಿ ನಿರಾಕರಿಸಿದ ಮುಖ್ಯಮಂತ್ರಿಯ ಪರವಾಗಿ ಮತ ಹಾಕಬೇಕೇ ಎಂಬುದನ್ನು ನಿರ್ಧರಿಸಬೇಕು" ಎಂದಿದ್ದಾರೆ.

ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸುಳಿವು ನೀಡಿದ ಪವನ್ ಕಲ್ಯಾಣ್, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ವರ್ಗಕ್ಕೆ ಸೇರಿದ ಕುಟುಂಬಗಳಿಗೆ ಉಚಿತವಾಗಿ ಮರಳು ಸರಬರಾಜು ಮಾಡಲು ಮತ್ತು ಜೆಎಸ್‌ಪಿಯನ್ನು ಅಧೀಕಾರಕ್ಕೆ ತಂದರೆ ಸ್ಥಳೀಯ ಸಂಸ್ಥೆಗಳಿಗೆ ಸಂಪೂರ್ಣವಾಗಿ ಅನುದಾನ ಬಿಡುಗಡೆ ಮಾಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಇತ್ತ, ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮೊದಲ ಬಾರಿಗೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) 2024 ರ ಸಾರ್ವತ್ರಿಕ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬೆಂಬಲವನ್ನು ಹೊಂದಿಲ್ಲದಿರಬಹುದು ಎಂಬ ಸುಳಿವು ನೀಡಿದ್ದಾರೆ. ತೆಲುಗು ದೇಶಂ ಪಕ್ಷದ (ಟಿಡಿಪಿ) ವಿರುದ್ಧ ಏಕಾಂಗಿಯಾಗಿ ರಾಜಕೀಯ ಹೋರಾಟ ನಡೆಸುತ್ತಿದ್ದೇನೆ . ಪ್ರಮುಖ ವಿರೋಧ ಪಕ್ಷಕ್ಕೆ ಜೆಎಸ್‌ಪಿ ಅಧ್ಯಕ್ಷ ಪವನ್ ಕಲ್ಯಾಣ್ ಮತ್ತು ಕೆಲವು ಮಾಧ್ಯಮಗಳ ಬೆಂಬಲವಿದೆ. ಆದರೆ, ವೈಎಸ್‌ಆರ್‌ಸಿಪಿಗೆ ಬಿಜೆಪಿಯಿಂದ ಉತ್ತಮ ಬೆಂಬಲ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+