ಮಾರ್ಚ್ 1ರಿಂದ ಅಮರನಾಥ ಯಾತ್ರೆಗೆ ನೋಂದಣಿ ಆರಂಭ
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ಮಾರ್ಚ್ 1 ರಿಂದ ನೋಂದಣಿ ಕಾರ್ಯ ಆರಂಭ. ಕಣಿವೆ ರಾಜ್ಯದ ಬಾಲ್ಟಲ್ ಹಾಗೂ ಚಂದನ್ ವಾರಿ ಮಾರ್ಗದಲ್ಲಿ ಮೊದಲಿಗೆ ಪಯಣ.
ಶ್ರೀನಗರ, ಫೆಬ್ರವರಿ 26 : ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ಮಾರ್ಚ್ 1 ರಿಂದ ನೋಂದಣಿ ಕಾರ್ಯ ಆರಂಭ. ಕಣಿವೆ ರಾಜ್ಯದ ಬಲ್ತಾಲ್ ಹಾಗೂ ಚಂದನ್ ವಾರಿ ಮಾರ್ಗದಲ್ಲಿ ಮೊದಲಿಗೆ ಪಯಣ ಸಾಗಲಿದೆ ಎಂದು ಆಡಳಿತಾಧಿಕಾರಿಗಳು ಹೆಳೀದ್ದಾರೆ.
ಕಾಶ್ಮೀರದ ಚಂದನ್ ವಾರಿ ಮತ್ತು ಉತ್ತರ ಕಾಶ್ಮೀರದ ಬಲ್ತಾಲ್ ಮಾರ್ಗಗಳಲ್ಲಿ ಮೊದಲಿಗೆ ಯಾತ್ರೆ ಸಾಗಲಿದೆ. ಎರಡೂ ಮಾರ್ಗಗಳ ಉದ್ದಕ್ಕೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಲಾಗಿದ್ದು ಯಾತ್ರಾರ್ಥಿಗಳ ಹಿತ ಕಾಪಾಡುವ ಕಾರ್ಯ ನಿರ್ವಹಿಸಲಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.

ದೇಶದ ಹಲವೆಡೆ ಇರುವ ಪಂಜಾಬ್ ನ್ಯಾಷನಲ್ ಬ್ಯಾಂಕಿನ 433 ಬ್ರ್ಯಾಂಚ್ ಗಳು ಹಾಗೂ ಜಮ್ಮು ಮತ್ತು ಕಾಶ್ಮೀರ್ ಬ್ಯಾಂಕ್, ಯೆಸ್ ಬ್ಯಾಂಕ್ ನಲ್ಲಿ ಅಮರನಾಥ್ ಯಾತ್ರೆಗೆ ನೋಂದಣಿ ಮಾಡಿಸಿಕೊಳ್ಳಬಹುದು.
ಎರಡು ಮಾರ್ಗಗಳಲ್ಲಿ ಏಕಕಾಲಕ್ಕೆ ಜೂನ್ 29 ರಿಂದ ಆರಂಭಗೊಂಡು ಆಗಸ್ಟ್ 7 ರ ರಕ್ಷಾಬಂಧನ್ ದಿನದಂದು ಮುಕ್ತಾಯವಾಗಲಿದೆ. ಫೆಬ್ರವರಿ 10 ರ ನಂತರ ಸಂಪೂರ್ಣ ವೈದ್ಯಕೀಯ ಪರೀಕ್ಷೆ ಪ್ರಮಾಣ ಪತ್ರ ಪಡೆದಿರಬೇಕು. 13 ವರ್ಷವಯಸ್ಸಿಗಿಂತ ಚಿಕ್ಕವರು, 75 ವರ್ಷಕ್ಕೂ ಅಧಿಕ ವಯಸ್ಸಿನ ಹಿರಿಯರು, 6 ತಿಂಗಳ ಗರ್ಭಿಣಿಯರಿಗೆ ನೋಂದಣಿ ನಿರ್ಬಂಧಿಸಲಾಗಿದೆ ಎಂದು ಅಮರನಾಥ್ ಯಾತ್ರೆ ಮಂಡಳಿಯ ಸಿಇಒ ಪಿಕೆ ತ್ರಿಪಾಠಿ ಹೇಳಿದ್ದಾರೆ.
ಯಾತ್ರಿಕರ ಸುರಕ್ಷತೆಗಾಗಿ ಸೇನೆ, ಅರೆ ಸೇನಾಪಡೆ ಮತ್ತು ರಾಜ್ಯ ಪೊಲೀಸ್ ಪಡೆಗಳಿಂದ ಮೂರು ಹಂತಗಳ ಭದ್ರತೆ ಒದಗಿಸಲಾಗುತ್ತದೆ. ಮಾತ್ರವಲ್ಲದೆ ರಾಜ್ಯ ಮತ್ತು ಕೇಂದ್ರ ವಿಪತ್ತು ನಿರ್ವಹಣಾ ತಂಡಗಳನ್ನೂ ನಿಯೋಜಿಸಲಾಗುತ್ತದೆ. ಸುಮಾರು ಎರಡು ತಿಂಗಳ ಕಾಲ ನಡೆಯಲಿರುವ ಯಾತ್ರೆಯಲ್ಲಿ ಸಾವಿರಾರು ಜನ ಭಕ್ತರು ಪಾಲ್ಗೊಳ್ಳುತ್ತಾರೆ. ಭಕ್ತರು ಹಿಮಲಿಂಗದ ದರ್ಶನ ಪಡೆದು ಪುನೀತರಾಗುತ್ತಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications