ಜಮ್ಮು: ಅಮರನಾಥ ಯಾತ್ರೆಗೆ ತೆರಳಿರುವ ಕನ್ನಡಿಗರಿಗೆ ಸಂಕಷ್ಟ
ಶ್ರೀನಗರ, ಜುಲೈ 10: ಹಿಝ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಕಾಶ್ಮೀರಿ ಯುವಕರನ್ನುಅ ಸೇರಿಸುತ್ತಿದ್ದ 22 ವರ್ಷದ ಬುರ್ಹಾನ್ ವಾನಿ ಹತ್ಯೆ ಬಳಿಕ ಕಣಿವೆ ರಾಜ್ಯ ಪ್ರಕ್ಷುಬ್ಧಗೊಂಡಿದೆ. ಜಮ್ಮುವಿನಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ಎರಡನೇ ದಿನವೂ ಕೂಡಾ ಅಮರನಾಥ್ ಯಾತ್ರೆ ರದ್ದುಗೊಳಿಸಲಾಗಿದೆ.
ಶ್ರೀನಗರ, ಅನಂತ್ ನಾಗ್ ಜಿಲ್ಲೆ, ಅಮರನಾಥ್ ಯಾತ್ರೆ ಬೇಸ್ ಕ್ಯಾಂಪ್ ಬಳಿ ತುರ್ತು ಪ್ರಹಾರ ದಳ, ಅಶ್ರುವಾಯು ದಳ, ಸಿಆರ್ ಪಿಎಫ್ ಯೋಧರು, ಅರೆಸೇನಾ ಯೋಧರ ಪಡೆ ಗಸ್ತು ತಿರುಗುತ್ತಿದ್ದಾರೆ.[ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದಿನ್ ಕಮಾಂಡರ್ ಹತ್ಯೆ]

ಭಾಗ್ವತಿ ನಗರ ಯಾತ್ರಿ ನಿವಾಸ್ ನಿಂದ ಕಾಶ್ಮೀರ ಕಣಿವೆ ಕಡೆಗೆ ಅಥವಾ ಅಲ್ಲಿಂದ ಜಮ್ಮುವಿನ ಕಡೆಗೆ ಯಾರಿಗೂ ಪ್ರವೇಶ ಅನುಮತಿ ನೀಡಿಲ್ಲ.
ಜಮ್ಮು ಮತ್ತು ಕಾಶ್ಮೀರದ ನಾಲ್ಕು ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆ ಸಂಪೂರ್ಣ ಸ್ಥಗಿತಗೊಂಡಿದ್ದು, ಮೊಬೈಲ್ ನೆಟ್ ವರ್ಕ್ ಸೇವೆ ಕೂಡ ಸ್ಥಗಿತವಾಗಿದೆ. ಹೀಗಾಗಿ ಅಮರನಾಥ್ ಯಾತ್ರೆಗಳಿಗೆ ಭಾರಿ ತೊಂದರೆಯಾಗಿದೆ.

ಕನ್ನಡಿಗರ ಪರದಾಟ: ಕಳೆದ ಮೂರು ದಿನಗಳಿಂದ ಬಾಲ್ಟೊರ್ ಬೇಸ್ ಕ್ಯಾಂಪ್ ನಲ್ಲಿರುವ ಸುಮಾರು 150 ಕ್ಕೂ ಹೆಚ್ಚು ಕರ್ನಾಟಕ ಮೂಲದ ಯಾತ್ರಿಗಳು ಆತಂಕದಲ್ಲಿದ್ದಾರೆ. ಅಮರನಾಥ ಯಾತ್ರೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.[ಅಮರನಾಥ ಯಾತ್ರೆಗೆ ಉಗ್ರರ ದಾಳಿ ಭೀತಿ: ಬಿಎಸ್ ಎಫ್]
Amarnath Yatra from Jammu base camp suspended for 2nd consecutive day (In Pic: Pilgrims stranded in Jammu) pic.twitter.com/gSW8LGWs3B
— ANI (@ANI_news) July 10, 2016
ಮುಂಜಾಗ್ರತಾ ಕ್ರಮವಾಗಿ ರೈಲು ಸೇವೆಗಳನ್ನು ಕೂಡ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಬಿಟ್ಟರೆ ಇಲ್ಲಿಂದ ಯಾವಾಗ ಮುಕ್ತಿ ಎಂಬುದು ತಿಳಿಯುತ್ತಿಲ್ಲ ಎಂದು ಕರ್ನಾಟಕದ ಯಾತ್ರಿ ಯೋಗಿರಾಜ್ ಅವರು ಖಾಸಗಿ ವಾಹಿನಿ ಜೊತೆ ಮಾತನಾಡುತ್ತಾ ಗೋಳು ತೋಡಿಕೊಂಡರು.
Curfew imposed in parts of J&K following protests over #BurhanWani's killing (Visuals of shutdown from Srinagar) pic.twitter.com/wOk4amQCqh
— ANI (@ANI_news) July 10, 2016
ಎಲ್ಲರಿಗೂ ಬೇಸ್ ಕ್ಯಾಂಪ್ ನಲ್ಲಿ ಉಳಿದುಕೊಳ್ಳಲು ಅವಕಾಶ ದೊರೆತಿದೆ. ಆದರೆ, ಔಷಧ, ಊಟ ಸರಿಯಾಗಿ ಸಿಗದೆ ಪರದಾಡುವಂತಾಗಿದೆ. ಭಾನುವಾರದಂದು ಇಂಟರ್ನೆಟ್ ಸೌಲಭ್ಯವನ್ನು ನೀಡುವ ಭರವಸೆಯನ್ನು ಪೊಲೀಸ್ ಅಧಿಕಾರಿಗಳು ನೀಡಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications