ದಾಳಿಕೋರರನ್ನು ಶೀಘ್ರದಲ್ಲೇ ಬಂಧಿಸುವೆವು: ಕಾಶ್ಮೀರ ಸಿಎಂ ಮುಫ್ತಿ

ಅಮರ್ ನಾಥ ಯಾತ್ರಾರ್ಥಿಗಳ ಮೇಲೆ ಉಗ್ರರ ದಾಳಿ ಹಿನ್ನೆಲೆ. ಗಾಯಾಳುಗಳು ದಾಖಲಾಗಿರುವ ಅನಂತನಾಗ್ ಜಿಲ್ಲಾಸ್ಪತ್ರೆಗೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭೇಟಿ. ಗಾಯಾಳುಗಳ ಆರೋಗ್ಯ ವಿಚಾರಣೆ ಮಾಡಿದ ಮುಫ್ತಿ.

ಅನಂತನಾಗ್, ಜುಲೈ 10: ಅಮರ್ ನಾಥ್ ಯಾತ್ರಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರ ವಿರುದ್ಧ ಉಗ್ರ ಕಾರ್ಯಾಚರಣೆಯನ್ನು ನಡೆಸಿ ಅವರನ್ನು ಕೆಲವೇ ದಿನಗಳಲ್ಲಿ ಬಂಧಿಸುವೆವು ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಗುಡುಗಿದ್ದಾರೆ.

ಅನಂತನಾಗ್ ಜಿಲ್ಲೆಯ ಬಳಿಯ ಅಮರ್ ನಾಥ್ ಯಾತ್ರೆಗೆ ಸಾಗುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆದು ಅದರಲ್ಲಿ 7 ಜನ ಸಾವಿಗೀಡಾಗಿದ್ದಾರೆ ಹಾಗೂ ಹಲವಾರು ಜನರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಅನಂತನಾಗ್ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಸೋಮವಾರ ರಾತ್ರಿ ಮುಫ್ತಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಮಾತನಾಡಿಸಿದರು. ಅಲ್ಲದೆ, ವೈದ್ಯರು, ಅಧಿಕಾರಿಗಳನ್ನು ಭೇಟಿ ಮಾಡಿ ವಿವರಗಳನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಫ್ತಿ, ''ಈ ಕುಕೃತ್ಯಗಳನ್ನು ಮಾಡಿದವರು ಯಾರೇ ಇರಲಿ ಅವರನ್ನು ಹಿಡಿದು ಶಿಕ್ಷಿಸುತ್ತೇವೆ'' ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+