ಅಮರನಾಥ ಯಾತ್ರೆಗೆ ಭಯೋತ್ಪಾದಕ ದಾಳಿಯ ಆತಂಕ
ಶ್ರೀನಗರ, ಜೂನ್ 27: ಹಿಂದುಗಳ ಪ್ರಮುಖ ಧಾರ್ಮಿಕ ಕೇಂದ್ರ ಎನ್ನಿಸಿರುವ ಜಮ್ಮು-ಕಾಶ್ಮೀರದ ಅಮರನಾಥ ದೇವಾಲಯದಲ್ಲಿ ಭಯೋತ್ಪಾದಕ ದಾಳಿಯಾಗುವ ಸಾಧ್ಯತೆ ಇದೆ ಎಂಬ ಆತಂಕಕಾರಿ ಸಂಗತಿಯನ್ನು ಗುಪ್ತಚರ ದಳ ಹೊರಹಾಕಿದೆ. ಜೂನ್ 28 ರಿಂದ ಅಮರನಾಥ ಯಾತ್ರೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಲಶ್ಕರ್ ಇ ತೊಯ್ಬಾ ಭಯೋತ್ಪಾದಕ ಸಂಘಟನೆ, ಅಮರನಾಥ ಯಾತ್ರಿಗಳ ಮೇಲೆ ದಾಳಿ ಮಾಡುವ ಯೋಜನೆಯನ್ನು ಸಿದ್ಧಪಡಿಸಿಕೊಂಡಿದೆ ಎಂಬ ಗುಪ್ತಚರ ದಳದ ಮಾಹಿತಿಯ ಹಿನ್ನೆಲೆಯಲ್ಲಿ ಈ ತಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಜುಲೈ 8, 2016ರಂದು ಸಾವನ್ನಪ್ಪಿದ್ದ ಹಿಜ್ಬುಲ್ಲಾ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವನಿ ಸಾವಿಗೆ ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ದಾಳಿಗೆ ಉಗ್ರರು ಸಂಚು ರೂಪಿಸಿದ್ದಾರೆ. ಅಮರನಾಥ ಯಾತ್ರೆ ಉಗ್ರರ ಹಿಟ್ ಲಿಸ್ಟ್ ನಲ್ಲಿದೆ ಎಂಬ ಮಾಹಿತಿ ದೊರಕುತ್ತಿದ್ದಂತೆಯೇ ದೇಶದಾದ್ಯಂತ ತಲ್ಲಣ ಹುಟ್ಟಿಕೊಂಡಿದೆ.

ಗುಪ್ತಚರ ದಳ ಎಚ್ಚರಿಕೆ ನೀಡುತ್ತಿದ್ದಂತೆಯೇ 2000 ದಲ್ಲಿ ನಡೆದ ಲಷ್ಕರ್ ಇ ತೋಯ್ಬಾ ದಾಳಿಯಲ್ಲಿ 30 ಯಾತ್ರಿಗಳು ಅಸುನೀಗಿದ್ದ ಚಿತ್ರ ಕಣ್ಮುಂದೆ ಬಂದು ಮತ್ತಷ್ಟು ಆತಂಕವನ್ನು ಹುಟ್ಟುಹಾಕುತ್ತಿದೆ.
ಅಮರನಾಥ ಯಾತ್ರೆಗೆ ಹಿಜ್ಬುಲ್ ಮುಜಾಹಿದ್ದಿನ್ ಮತ್ತು ಲಷ್ಕರ್ ಎರಡೂ ಭಯೋತ್ಪಾದಕ ಸಂಘಟನೆಗಳ ದಾಳಿ ಆತಂಕವಿದ್ದು, ಹಿಜ್ಬುಲ್ ಗಿಂತ ಲಷ್ಕರ್ ಹೆಚ್ಚು ಅಪಾಯಕಾರಿ ಎಂದು ಗುಪ್ತಚರ ದಳ ಹೇಳಿದೆ.
ಈಗಾಗಲೇ ಅಮರನಾಥ ಯಾತ್ರೆಗೆ ಬರುವ ಭಕ್ತಾದಿಗಳಿಗೆ ಮತ್ತು ದೇವಾಲಯಕ್ಕೆ ಬಿಗಿಭದ್ರತೆ ನೀಡಲಾಗಿದೆ. ಹಿಮದಿಂದಲೇ ಸೃಷ್ಟಿಯಾದ, 40 ಮೀ ಎತ್ತರದ ನೈಸರ್ಗಿಕ ಶಿವಲಿಂಗವನ್ನು ನೋಡುವುದಕ್ಕೆಂದೇ ವರ್ಷವೂ ಲಕ್ಷಾಂತರ ಜನ ಅಮರನಾಥ ಯಾತ್ರೆ ಕೈಗೊಳ್ಳುತ್ತಾರೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications