Amazon Layoffs: ಜಗತ್ತಿನ ಅತಿದೊಡ್ಡ ಕಂಪನಿಯಿಂದ ಉದ್ಯೋಗ ಕಡಿತ!
ಜಗತ್ತಿನಾದ್ಯಂತ ಆರ್ಥಿಕ ಹಿಂಜರಿತ ಭಯ ಹುಟ್ಟಿಸಿದೆ. ಅದರಲ್ಲೂ ಪಾಶ್ಚಿಮಾತ್ಯ ದೇಶಗಳ ಸ್ಥಿತಿ ಭಯಾನಕ ಭವಿಷ್ಯಕ್ಕೆ ಮುನ್ನುಡಿ ಬರೆಯುತ್ತಿದೆ. ಇದು ಸಾಲದು ಎನ್ನುವಂತೆ ಇದೀಗ ಜಗತ್ತಲ್ಲಿ 2 ಭೀಕರ ಯುದ್ಧಗಳು ಬೇರೆ ಆರಂಭವಾಗಿವೆ. ಈ ಬೆನ್ನಲ್ಲೇ ಜಗತ್ತಿನ ಅತಿದೊಡ್ಡ ಕಂಪನಿ ಮತ್ತೆ ಮತ್ತೆ ಉದ್ಯೋಗಿಗಳನ್ನು ಮನೆಗೆ ಕಳುಹಿಸುತ್ತಿದ್ದು, ಮತ್ತೊಮ್ಮೆ ನೌಕರರಿಗೆ ಬಿಗ್ ಶಾಕ್ ಕೊಟ್ಟಿದೆ.
ಮುಂಬರುವ ದಿನಗಳಲ್ಲಿ ಜಗತ್ತಿನಲ್ಲಿ ಅತಿದೊಡ್ಡ ಆರ್ಥಿಕ ಹಿಂಜರಿತ ಉಂಟಾಗಲಿದೆ ಎಂಬ ಮಾತುಗಳು ಆರ್ಥಿಕ ತಜ್ಞರಿಂದ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಸಾಲು ಸಾಲಾಗಿ ದೊಡ್ಡ, ದೊಡ್ಡ ಕಂಪನಿಗಳಿಂದ ಉದ್ಯೋಗ ಕಡಿತ ಶುರುವಾಗಿದೆ. ಐಟಿ-ಬಿಟಿ ಕ್ಷೇತ್ರ ಸೇರಿ, ವಿವಿಧ ವಲಯದಲ್ಲಿ ಉದ್ಯೋಗಿಗಳ ಭವಿಷ್ಯದ ಮೇಲೆ ತೂಗುಗತ್ತಿ ನೇತಾಡುತ್ತಿದೆ ಹೀಗಿದ್ದಾಗ ಮತ್ತೆ ಉದ್ಯೋಗ ಕಡಿತಕ್ಕೆ ಮುಂದಾಗಿದೆ 'ಅಮೆಜಾನ್' ಸಂಸ್ಥೆ. ಹಾಗಾದ್ರೆ ಎಷ್ಟು ಉದ್ಯೋಗಿಗಳ ಕೆಲಸಕ್ಕೆ ಕುತ್ತು ಬಂದಿದೆ? ಇದರಿಂದ ಆಗುವ ಪರಿಣಾಮ ಏನು? ಮುಂದೆ ಓದಿ.

ನೂರಾರು ನೌಕರರು ಮನೆ ಕಡೆ!
ಹೌದು 'ಇ-ಕಾಮರ್ಸ್' ದಿಗ್ಗಜ ಅಂತ ಕರೆಸಿಕೊಳ್ಳುವ ಅಮೆಜಾನ್ ಕಂಪನಿ ಈಗ 'ಅಲೆಕ್ಸಾ' ವಾಯ್ಸ್ ಅಸಿಸ್ಟೆಂಟ್ ಘಟಕದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾಗಿದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೂಡ ಸಿಕ್ಕಿದೆ. ಅಲ್ಲದೆ ನೂರಾರು ನೌಕರರನ್ನ ಮನೆಗೆ ಕಳುಹಿಸುವುದು ಗ್ಯಾರಂಟಿ ಆಗಿದ್ದರೂ, ನಿರ್ಧಿಷ್ಟವಾಗಿ ಎಷ್ಟು ಉದ್ಯೋಗಗಳ ಉದ್ಯೋಗಕ್ಕೆ ಕುತ್ತು ಬರಲಿದೆ ಎನ್ನುವ ಕುರಿತು ಮಾಹಿತಿ ನೀಡಲು ಸಂಸ್ಥೆ ವಕ್ತಾರರು ನಿರಾಕರಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಮತ್ತೊಂದು ಸುತ್ತಿನಲ್ಲಿ ನೂರಾರು ಜನ ಕೆಲಸ ಕಳೆದುಕೊಳ್ಳುವುದು ಪಕ್ಕಾ ಆಗುತ್ತಿದೆ.
ಯಾರಿಗೆಲ್ಲಾ ಸಮಸ್ಯೆ ಆಗುತ್ತೆ?
ಇ-ಕಾಮರ್ಸ್ ದಿಗ್ಗಜ ಅಮೆಜಾನ್ ಜಗತ್ತಿನಾದ್ಯಂತ ದೊಡ್ಡ ಮಾರುಕಟ್ಟೆಯನ್ನು ಹೊಂದಿದೆ. ಅದರಲ್ಲೂ ಭಾರತ ಕೂಡ ಅಮೆಜಾನ್ ಕಂಪನಿಗೆ ಅತಿ ದೊಡ್ಡದಾಗಿ ಮಾರುಕಟ್ಟೆ ಸಿಕ್ಕಿದೆ. ವಾರ್ಷಿಕ ಭಾರಿ ಮೊತ್ತದ ವ್ಯವಹಾರ ನಡೆಯುತ್ತದೆ. ಈಗ 'ಅಲೆಕ್ಸಾ' ಘಟಕದಲ್ಲಿ ಮಾತ್ರ ಉದ್ಯೋಗ ಕಡಿತದ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು 'ಎಐ' ಅಂದ್ರೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆ ಹಿನ್ನಲೆ ಮಹತ್ವದ ಬದಲಾವಣೆಗೆ ಅಮೆಜಾನ್ ಮುಂದಾಗಿದೆ. ಹೀಗಾಗಿ, ಹೊಸ ಬದಲಾವಣೆಗೆ ಈ ಕ್ರಮ ಅನಿವಾರ್ಯ ಎಂದಿದೆ ಅಮೆಜಾನ್.
ಒಟ್ನಲ್ಲಿ ದೊಡ್ಡ ದೊಡ್ಡ ಸಂಸ್ಥೆಗಳೇ ಉದ್ಯೋಗ ಕಡಿತಕ್ಕೆ ಮುಂದಾಗುತ್ತಿರುವ ಪರಿಣಾಮ, ದೊಡ್ಡ ಚರ್ಚೆ ಕೂಡ ಶುರುವಾಗಿದೆ. ಹಾಗೇ ಮುಂಬರುವ ದಿನಗಳಲ್ಲಿ ಇದರ ತೀವ್ರತೆಯು ಇನ್ನಷ್ಟು ಜೋರಾಗಬಹುದು ಎನ್ನಲಾಗಿದೆ. ಮತ್ತೊಂದು ಕಡೆ ಯುದ್ಧ ಕೂಡ ಜೋರಾಗಿ, ಪಾಶ್ಚಿಮಾತ್ಯ ದೇಶಗಳಲ್ಲಿ ಆರ್ಥಿಕ ಕುಸಿತ ಉಂಟಾಗುತ್ತಿರುವ ಆರೋಪವೂ ಇದೆ. ಇದೆಲ್ಲವು ಉದ್ಯೋಗಿಗಳ ಕೆಲಸಕ್ಕೆ ಕುತ್ತು ತರುತ್ತಿರುವುದು ವಿಪರ್ಯಾಸ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications