Smriti Irani: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಭಾರೀ ಹಿನ್ನಡೆ, ಕ್ಷೇತ್ರ ವಾಪಸ್ ಪಡೆಯುವತ್ತಾ ಕಾಂಗ್ರೆಸ್
ಲಕ್ನೋ, ಜೂನ್. 04: ರಾಹುಲ್ ಗಾಂಧಿಗೆ ಬಹಿರಂಗ ಸವಾಲು ಹಾಕಿ ತಮ್ಮ ವಿರುದ್ಧ ಸ್ಪರ್ಧೆ ಮಾಡುವಂತೆ ಆಹ್ವಾನ ನೀಡಿದ್ದ ಸಚಿವ ಸ್ಮೃತಿ ಇರಾನಿ ಅಮೇಥಿಯಲ್ಲಿ ಸದ್ಯ ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ 57,911 ಮತಗಳ ಅಂತರದಿಂದ ಮುಂದಿದ್ದಾರೆ.
2019 ಕ್ಕೆ ಹೋಲಿಸಿದರೆ 2024 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರ ಭಾರಿ ಕುತೂಹಲ ಕೆರಳಿಸಿದೆ. ಕಳೆದ ಬಾರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದ ಸ್ಮೃತಿ ಇರಾನಿ ಈ ಬಾರಿ ಕ್ಷೇತ್ರ ಕಳೆದುಕೊಳ್ಳುವ ಭಯದಲ್ಲಿದ್ದಾರೆ.

ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹಿನ್ನಡೆ
ಸುಮಾರು 60 ಸಾವಿರ ಮತಗಳ ಅಂತರದಿಂದ ಹಿನ್ನಡೆ ಅನುಭವಿಸುತ್ತಿದ್ದಾರೆ ಸಚಿವೆ ಸ್ಮೃತಿ ಇರಾನಿ. ಕಾಂಗ್ರೆಸ್ನ ಕಿಶೋರಿ ಲಾಲ್ ಶರ್ಮಾ2,09,510 ಮತಗಳನ್ನು ಪಡೆದಿದು ಮುಂದಿದ್ದು, ಸ್ಮೃತಿ ಇರಾನಿ 1,51,599 ಮತಗಳನ್ನು ಪಡೆದಿದ್ದಾರೆ. ಆರಂಭದಿಂದಲೂ ಸ್ಮೃತಿ ಇರಾನಿ ಹಿನ್ನಡೆ ಅನುಭವಿಸಿದ್ದಾರೆ. ಹೀಗಾಗಿ ಕ್ಷೇತ್ರ ವಾಪಸ್ ಪಡೆಯುವತ್ತಾ ಕಾಂಗ್ರೆಸ್ ಹೆಜ್ಜೆಯಿಟ್ಟಿದೆ.
2019 ರಲ್ಲಿ ಸ್ಮೃತಿ ಇರಾನಿಯವರ ಗಮನಾರ್ಹ ಗೆಲುವು
ಕಾಂಗ್ರೆಸ್ನ ಭದ್ರಕೋಟೆಯಾದ ಅಮೇಥಿ ಲೋಕಸಭಾ ಕ್ಷೇತ್ರವು 2019 ರಲ್ಲಿ ಬಿಜೆಪಿ ಪಾಲಾಗಿತ್ತು. ಸ್ಮೃತಿ ಇರಾನಿ ಅಂದಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು 50,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸುವ ಮೂಲಕ ಇತಿಹಾಸ ಬರೆದಿದ್ದರು. ಈ ಬಾರಿ ಕಾಂಗ್ರೆಸ್ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದ್ದು, ಅವರು ಸ್ಮೃತಿ ಇರಾನಿ ಅವರನ್ನು ಸೋಲಿಸುವತ್ತ ಮುನ್ನುಗ್ಗುತ್ತಿದ್ದಾರೆ.
ಜೂನ್ 1 ರಂದು ಮತದಾನ ಮುಗಿದ ನಂತರ ಬಂದ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ಗಳು ಅಮೇಥಿಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ಸಿ) ನಡುವೆ ನೆಕ್ ಟು ನೆಕ್ ಫೈಟ್ ಇರುತ್ತದೆ ಎಂದಿತ್ತು. ಜೊತೆಗೆ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಗೆಲುವು ಸಾಧಿಸುತ್ತಾರೆ ಎಂದಿದ್ದವು. ಆದರೆ, ಅದು ತಲೆಕೆಳಗಾಗಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications