ಕಾಣೆಯಾಗಿದ್ದಾರೆ: ರಾಹುಲ್ ಗಾಂಧಿ, ಅಮೇಥಿ ಸಂಸದ
ಅಮೇಥಿ, ಮಾ.25: 'ನಾಯಕ ಇಲ್ಲದ ಕ್ಷೇತ್ರ ಅಮೇಥಿ' ನಮ್ಮ ಸಂಸದ ರಾಹುಲ್ ಗಾಂಧಿ ಕಾಣೆಯಾಗಿದ್ದಾರೆ, ದಯವಿಟ್ಟು ಹುಡುಕಿಕೊಡಿ ಎಂದು ಉತ್ತರಪ್ರದೇಶದ ಅಮೇಥಿ ಕ್ಷೇತ್ರದ ಹಲವೆಡೆ ಕಾಣೆಯಾದವರ ಬಗ್ಗೆ ನೀಡುವ ಪ್ರಕಟಣೆಯಂತೆ 'ರಾಹುಲ್ ಗಾಂಧಿ ನಾಪತ್ತೆ' ಪ್ರಕಟಣೆ ಹೊರಡಿಸಲಾಗಿದೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಪತ್ತೆ ವಿಚಾರ ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ.ಲೋಕಸಭೆಯಲ್ಲೂ ಈ ಬಗ್ಗೆ ಭಾರಿ ಚರ್ಚೆ ನಡೆದು ವಿಷಯ ಈಗ ತಣ್ಣಗಾಗಿದೆ. ಈ ನಡುವೆ ರಾಹುಲ್ ಗಾಂಧಿ ಅವರ ಸ್ವಕ್ಷೇತ್ರದಲ್ಲಿ ಹೀಗೊಂದು ಪ್ರಕಟಣೆ ಹಾದಿ ಬೀದಿಯಲ್ಲಿ ಕಾಣಿಸಿಕೊಂಡಿದೆ.

"Jaane woh Kaunsa desh , Jahan tum chale Gaye" ಎಂದು ಕ್ಷೇತ್ರದ ಜನತೆ ಪ್ರಶ್ನಿಸಿದ್ದಾರೆ. ಅಮೇಥಿ ಮೂಲ ಸೌಕರ್ಯಗಳ ಕೊರತೆ ಅನುಭವಿಸುತ್ತಿದೆ. ಇಲ್ಲ ನಾಯಕನಿಲ್ಲ, ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ, ರಸ್ತೆ ಇಲ್ಲ, ಆರೋಗ್ಯ ಸೇವಾಕೇಂದ್ರಗಳಿಲ್ಲ ಎಂದು ಜನರು ತಮ್ಮ ಗೋಳನ್ನು ಈ ಮೂಲಕ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದಾರೆ.[ಏಪ್ರಿಲ್ ತಿಂಗಳಲ್ಲಿ ರಾಹುಲ್ ಗಾಂಧಿಗೆ ಪಟ್ಟಾಭಿಷೇಕ!]
ನಾಪತ್ತೆಯಾಗಿರುವ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಬಗ್ಗೆ ಸುಳಿವು ಕೊಟ್ಟವರಿಗೆ ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿದೆ. ಅದರೆ, ಇದೆಲ್ಲವೂ ಬಿಜೆಪಿ ಕುತಂತ್ರ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಕೆಲ ಪೋಸ್ಟರ್ ಗಳಲ್ಲಿ ಪಕ್ಷಾತೀತವಾಗಿ ರಾಜಕೀಯ ಮುಖಂಡರಿಗೆ ಚುರುಕು ಮುಟ್ಟಿಸಲಾಗಿದೆ. ಬುಂದೇಲ್ ಖಂಡ್ ಅಭಿವೃದ್ಧಿ ಮಾಡುವ ಭರವಸೆ ನೀಡಿದ್ದ ಉಮಾಭಾರತಿ ಎಲ್ಲಿದ್ದಾರೆ ಎಂದು ಪ್ರಶ್ನಿಸಲಾಗಿದೆ. [ರಾಹುಲ್ ಗಾಂಧಿಗಾಗಿ ಹುಡುಕಾಟ, ಕೈಪಡೆ ಕಂಗಾಲು]
ಒಟ್ಟಾರೆ, ಈ ಹಿಂದೆ ಅಜಂ ಖಾನ್, ಜಯಪ್ರದಾ, ಕ್ರಿಕೆಟರ್ ಕಮ್ ರಾಜಕಾರಣಿ ನವಜ್ಯೋತ್ ಸಿಧು ಅವರು ನಾಪತ್ತೆಯಾಗಿದ್ದಾರೆ ಎಂದು ಪ್ರಕಟಣೆ ಹೊರಡಿಸಿದ್ದಂತೆ ಈ ಬಾರಿ ರಾಹುಲ್ ಗಾಂಧಿ ಸರದಿ. ಆದರೆ, ರಾಹುಲ್ ಗಾಂಧಿ ನಾಪತ್ತೆ ಬಗ್ಗೆ ಪ್ರಕಟಣೆ ಬಲವಾಗಿ ಕಾಂಗ್ರೆಸ್ ಪಕ್ಷವನ್ನು ತಟ್ಟುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications