ಹರಿದ್ವಾರದಲ್ಲಿ ಕೊರೊನಾ ಕಾಟ; ಕಡಿಮೆಯಾಗುತ್ತಾ ಕುಂಭಮೇಳದ ಅವಧಿ?
ನವದೆಹಲಿ, ಏಪ್ರಿಲ್ 15: ಕೊರೊನಾವೈರಸ್ ಎರಡನೇ ಅಲೆ ನಡುವೆ ನಡೆಯುತ್ತಿರುವ ಕುಂಭಮೇಳದಿಂದ ಸೋಂಕಿನ ಹರಡುವಿಕೆ ಆತಂಕ ಮತ್ತಷ್ಟು ಹೆಚ್ಚಿದೆ. ಹರಿದ್ವಾರದಲ್ಲಿ ಪ್ರತಿನಿತ್ಯ ನಡೆಸುವ ಕೊವಿಡ್-19 ತಪಾಸಣೆ ಮಿತಿಯನ್ನು ತೆಗೆದು ಹಾಕುವಂತೆ ಉತ್ತರಾಖಂಡ್ ಆರೋಗ್ಯ ಕಾರ್ಯದರ್ಶಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಕಳೆದ ಮಾರ್ಚ್ 31ರಂದು ಕುಂಭ ಮೇಳ ನಡೆಯುತ್ತಿರುವ ಹರಿದ್ವಾರದಲ್ಲಿ ಪ್ರತಿನಿತ್ಯ 50,000 ಜನರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು. ಈ ನಿಗದಿತ ಮಿತಿ ತೆರವುಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.
ಹರಿದ್ವಾರದಲ್ಲಿ ಪ್ರಮುಖವಾಗಿ ಪುಣ್ಯಸ್ನಾನ ಮಾಡುವ ಸಂದರ್ಭಗಳಲ್ಲಿ ಕೊರೊನಾವೈರಸ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡುವಂತೆ ಸೂಚಿಸಲಾಗಿತ್ತು. ಸ್ಥಳೀಯ ಆಡಳಿತ ಅಧಿಕಾರಿಗಳು ಪ್ರತಿನಿತ್ಯ 39000 ಜನರಿಗೆ ಕೊವಿಡ್-19 ಸೋಂಕಿನ ಆರ್ ಟಿ-ಪಿಸಿಆರ್ ಪರೀಕ್ಷೆ ನಡೆಸುತ್ತಿದ್ದಾರೆ. ಪುಣ್ಯಸ್ನಾನಕ್ಕೆ ಆಗಮಿಸುವ ತುಂಬಿದ ಜನಸಂಖ್ಯೆಯ ನಡುವೆ 50000 ಜನರಿಗೆ ಕೊವಿಡ್-19 ಪರೀಕ್ಷೆ ನಡೆಸುವುದು ಕಷ್ಟಸಾಧ್ಯವಾಗುತ್ತಿದೆ ಎಂದು ಆರೋಗ್ಯ ಕಾರ್ಯದರ್ಶಿ ಅಮಿತ್ ನೇಗಿ ಅವರು ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಹರಿದ್ವಾರದಲ್ಲಿ ಒಂದೇ ದಿನ 525 ಮಂದಿಗೆ ಕೊರೊನಾ:
ಬುಧವಾರ ಒಂದೇ ದಿನ ಹರಿದ್ವಾರದಲ್ಲಿ 525 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಹರಿದ್ವಾರದಲ್ಲಿ ಕಳೆದ ಐದು ದಿನಗಳಲ್ಲಿ 2167 ಜನರಿಗೆ ಸೋಂಕು ಪತ್ತೆಯಾಗಿದೆ.
ಹರಿದ್ವಾರದಲ್ಲಿ ಏಪ್ರಿಲ್ 14ರಂದು ಲಕ್ಷಾಂತರ ಜನರು ಶಾಹಿ ಸ್ನಾನ್(ಪುಣ್ಯ ಸ್ನಾನ) ಮಾಡಿದರು. ಸೋಮವಾರದ ಅಂಕಿ-ಅಂಶಗಳಿಗೆ ಹೋಲಿಸಿ ನೋಡಿದರೆ ಈವರೆಗೂ 32 ಲಕ್ಷ ಭಕ್ತಾದಿಗಳು ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಬುಧವಾರವೊಂದೇ ದಿನ 9 ಲಕ್ಷ ಜನರು ಗಂಗೆಯಲ್ಲಿ ಮಿಂದೆದಿದ್ದಾರೆ ಎಂದು ಆಡಳಿತ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕುಂಭ ಮೇಳದ ಅವಧಿ ಕಡಿತದ ಬಗ್ಗೆ ಮಾಹಿತಿಯಿಲ್ಲ:
ಹರಿದ್ವಾರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಏರಿಕೆ ಆಗುತ್ತಿದ್ದರೂ ಏಪ್ರಿಲ್ 27 ಮತ್ತು ಏಪ್ರಿಲ್ 30ರವರೆಗೂ ಶಾಹಿ ಸ್ನಾನ್ ಮುಂದುವರಿಸಲಾಗುವುದು. ಕುಂಭಮೇಳದ ಅವಧಿಯನ್ನು ಕಡಿತಗೊಳಿಸುವ ಬಗ್ಗೆ ಸರ್ಕಾರದಿಂದ ಯಾವುದೇ ರೀತಿ ಅಧಿಸೂಚನೆ ಬಂದಿಲ್ಲ ಎಂದು ಕುಂಭಮೇಳದ ಅಧಿಕಾರಿ ದೀಪಕ್ ರಾವತ್ ತಿಳಿಸಿದ್ದಾರೆ. 12 ವರ್ಷಗಳಿಗೆ ಒಂದು ಬಾರಿ ನಡೆಯುವ ಕುಂಭಮೇಳವು ಸಾಮಾನ್ಯವಾಗಿ 4 ತಿಂಗಳವರೆಗೂ ನಡೆಯುತ್ತದೆ. ಆದರೆ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಏಪ್ರಿಲ್ 1 ರಿಂದ 30ರವರೆಗೂ ಮಾತ್ರ ಕುಂಭಮೇಳ ನಡೆಸುವುದಕ್ಕೆ ಅನುಮತಿ ನೀಡಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications