ಕರ್ಣಿ ಸೇನಾ ಏಟಿಗೆ ಡಿ.1 ಬಿಟ್ಟು ಮುಂದೆ ಓಡಿದ ‘ಪದ್ಮಾವತಿ’
ಮುಂಬೈ, ನವೆಂಬರ್ 20 : ತೀವ್ರ ವಿವಾದಕ್ಕೆ ಗುರಿಯಾಗಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಹಿಂದಿ ಚಿತ್ರ ಬಿಡುಗಡೆ ದಿನಾಂಕವನ್ನು ಚಿತ್ರ ತಂಡ ಮುಂದೂಡಿದೆ.
ಪದ್ಮಾವತಿ ಚಿತ್ರ ಬಿಡುಗಡೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿರುವುದರಿಂದ ಸದ್ಯದ ಬಿಡುಗಡೆಯನ್ನು ಮುಂದೂಡಿದೆ. ಈ ಹಿಂದೆ ಡಿಸೆಂಬರ್ 1ರಂದು ಚಿತ್ರವನ್ನು ಬಿಡುಗಡೆ ಮಾಡಲು ದಿನಾಂಕ ನಿಗದಿಯಾಗಿತ್ತು.

ಡಿಸೆಂಬರ್ 1ರಂದು ಪದ್ಮಾವತಿ ಚಿತ್ರ ಬಿಡುಗಡೆ ದಿನದಂದು ದೇಶಾದ್ಯಂತ ಬೃಹತ್ ಪ್ರತಿಭಟನೆ ಮಾಡುವುದಾಗಿಯೂ ಕರ್ಣಿ ಸೇನಾ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೇ ಪದ್ಮಾವತಿ ಚಿತ್ರ ತಂಡ ಸೆನ್ಸಾರ್ ಮಂಡಳಿಗೆ ಕಳುಹಿಸಿದ ಅರ್ಜಿ ಅಪೂರ್ಣವಾಗಿದೆ ಎಂದು ಮಂಡಳಿ ವಾಪಸ್ ಕಳುಹಿಸಿದೆ.
ಇವೆಲ್ಲವುಗಳ ವಿಘ್ನದಿಂದಾಗಿ ಚಿತ್ರ ಬಿಡುಗಡೆಯನ್ನು ಮುಂದೂಡಲಾಗಿದ್ದು, ಬಿಡುಗಡೆ ದಿನಾಂಕವನ್ನು ಚಿತ್ರ ತಂಡ ಪ್ರಕಟಿಸಿಲ್ಲ.
ಪದ್ಮಾವತಿ ಚಲನಚಿತ್ರದಲ್ಲಿ ರಜಪೂತರನ್ನು ಕೀಳಾಗಿ ತೋರಿಸಲಾಗಿದೆ. ಪದ್ಮಾವತಿ ಚಿತ್ರದಲ್ಲಿರುವ ದೀಪಿಕಾ ಪಡುಕೋಣೆಯವರು ಮಾಡಿರುವ ನೃತ್ಯವನ್ನು ಕೈಬಿಡಬೇಕು. ಹಿಂದಿನ ರಜಪೂತ ಇತಿಹಾಸವನ್ನು ನೋಡಿದಾಗ ರಾಣಿ ಪದ್ಮಿನಿಯವರು ಸಖಿಯರು ಮಾಡುವ ನೃತ್ಯವನ್ನು ವೀಕ್ಷಿಸುತ್ತಿರೇ ವಿನಃ ತಾವು ನೃತ್ಯ ಮಾಡುತ್ತಿರಲಿಲ್ಲ. ಇದು ರಜಪೂತ ಇತಿಹಾಸಕ್ಕೆ ಕಳಂಕ ತರುವಂತಿದೆ ಎಂದು ರಜಪೂತ ಕರ್ಣಿ ಸೇನೆ ಆಕ್ರೋಶ ವ್ಯಕ್ತಪಡಿಸಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications