ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಿಜೆಪಿಗೆ ದ್ರೋಹ ಬಗೆದ ಉದ್ಧವ್ ಠಾಕ್ರೆ ಅಮಿತ್ ಶಾ ಆರೋಪ
ಮುಂಬೈ, ಜೂನ್. 11: ಕಳೆದ 2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ನೊಂದಿಗೆ ಕೈಜೋಡಿಸುವುದರ ಮೂಲಕ ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಿಜೆಪಿಗೆ ದ್ರೋಹ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರ್ಣಗೊಳಿಸಿದ ಸಲುವಾಗಿ ಬಿಜೆಪಿಯ ಪ್ರಚಾರ ಅಭಿಯಾನದ ಭಾಗವಾಗಿ ನಾಂದೇಡ್ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಳೆದ ವರ್ಷ ಬಿಜೆಪಿ, ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸದ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಲಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಆ ಕೆಲಸ ಮಾಡಲಿಲ್ಲ. ಉದ್ಧವ್ ಠಾಕ್ರೆಯವರ ನೀತಿಗಳಿಂದ ಬೇಸತ್ತಿರುವ ಶಿವಸೈನಿಕರು ಶರದ್ ಪವಾರ್ ನೇತೃತ್ವದ ಎನ್ಸಿಪಿಯೊಂದಿಗೆ ಹೋಗಲು ಸಿದ್ಧರಿರಲ್ಲ ಎಂದು ಅಮಿತ್ ಶಾ ಹೇಳಿದರು. ಮುಂದುವರಿದು, 2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅಥವಾ ಕಾಂಗ್ರೆಸ್ನ ರಾಹುಲ್ ಗಾಂಧಿ ಪೈಕಿ ಯಾರು ದೇಶದ ಪ್ರಧಾನಿಯಾಗಬೇಕು ಎಂಬುದನ್ನು ಜನರು ನಿರ್ಧರಿಸಬೇಕು ಎಂದಿದ್ದಾರೆ.
"ನಾನು (ಅಂದಿನ) ಬಿಜೆಪಿ ಅಧ್ಯಕ್ಷ ಮತ್ತು (ಅಂದಿನ ಮುಖ್ಯಮಂತ್ರಿ) ದೇವೇಂದ್ರ ಫಡ್ನವಿಸ್ ಮಾತುಕತೆಗಳನ್ನು ನಡೆಸಿದ್ದೆವು. ಇದರಲ್ಲಿ ಎನ್ಡಿಎ ಬಹುಮತ ಪಡೆದರೆ, ದೇವೇಂದ್ರ ಫಡ್ನವೀಸ್ ಮತ್ತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಎಂದು ಉದ್ಧವ್ ಠಾಕ್ರೆ ಒಪ್ಪಿಕೊಂಡಿದ್ದರು. ಆದರೆ, ಫಲಿತಾಂಶದ ನಂತರ ( 2019 ರಲ್ಲಿ), ಉದ್ಧವ್ ಠಾಕ್ರೆ ಭರವಸೆಯನ್ನು ಮುರಿಸು, ಕಾಂಗ್ರೆಸ್-ಎನ್ಸಿಪಿಯ ಮಡಿಲಲ್ಲಿ ಕುಳಿತರು" ಎಂದು ಅಮಿತ್ ಶಾ ಆರೋಪಿಸಿದ್ದಾರೆ.
2019 ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ (ಅವಿಭಜಿತ) ಮತ್ತು ಬಿಜೆಪಿ ಒಟ್ಟಿಗೆ ಸ್ಪರ್ಧಿಸಿದ್ದವು, ಆದರೆ ಮಾಜಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮೈತ್ರಿಯಿಂದ ಹೊರನಡೆದರು. "ಉದ್ಧವ್ ಠಾಕ್ರೆ ಅವರು ಮೋಸ ಮತ್ತು ದ್ರೋಹವನ್ನು ಮಾಡಿದ್ದಾರೆ. ಮೋದಿ ಜಿ ಮತ್ತು ದೇವೇಂದ್ರ ಜಿ ಹೆಸರಿನಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸಿ, ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಮಡಿಲಲ್ಲಿ ಕುಳಿತರು" ಎಂದು ಅಮಿತ್ ಶಾ ಹೇಳಿದ್ದಾರೆ.
ಶಿವಸೇನೆಯ (ಯುಬಿಟಿ) ನಾಯಕರು ವಾಡಿಕೆಯಂತೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ನಿಷ್ಠರಾಗಿರುವ ಶಾಸಕರು ಉದ್ಧವ್ ಠಾಕ್ರೆ ಅವರ ಶಿವಸೇನೆಯಿಂದ ಹೊರ ಬಂದು ಕಳೆದ ವರ್ಷ ಜೂನ್ನಲ್ಲಿ ದಿವಂಗತ ಬಾಳ್ ಠಾಕ್ರೆ ಸ್ಥಾಪಿಸಿದ ಪಕ್ಷವನ್ನು ವಿಭಜಿಸಿದ್ದಾರೆ. ಈಗ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ತನ್ನ ಬಿಲ್ಲು ಮತ್ತು ಬಾಣವನ್ನು ಮರಳಿ ಪಡೆದಿದೆ ಮತ್ತು ನಿಜವಾದ ಶಿವಸೇನೆ ಯಾರು ಎಂದು ನಿರ್ಧರಿಸಲಾಗಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಇನ್ನು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಒಂಬತ್ತು ವರ್ಷಗಳಲ್ಲಿ ಮೋದಿ ಮಾಡಿದ್ದನ್ನು ಕಾಂಗ್ರೆಸ್ನ ನಾಲ್ಕು ತಲೆಮಾರುಗಳು ಸಾಧಿಸಲು ಸಾಧ್ಯವಾಗಲಿಲ್ಲ.
ಪ್ರಧಾನಿ ಮೋದಿಯವರು ಜಾಗತಿಕ ಮಟ್ಟದಲ್ಲಿ ಭಾರತದ ಘನತೆಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ನ "ರಾಜಕುಮಾರ" ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ದೇಶವನ್ನು ಅವಮಾನಿಸುತ್ತಾರೆ ಎಂದು ಕಿಡಿಕಾರಿದ್ದಾರೆ.
"ರಾಹುಲ್ ಬಾಬಾ ವಿದೇಶದಲ್ಲಿದ್ದಾಗ ದೇಶದ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ, ನಿಮಗೆ ಈ ಬಗ್ಗೆ ಗೊತ್ತಿಲ್ಲದಿದ್ದರೆ ಹಿರಿಯ ಕಾಂಗ್ರೆಸ್ ನಾಯಕರನ್ನು ಕೇಳಿ, ರಾಹುಲ್ ಬಾಬಾ ದೇಶದಲ್ಲಿ ಮಾತನಾಡುವುದಿಲ್ಲ, ಅವರು ವಿದೇಶದಲ್ಲಿ ಮಾತನಾಡುತ್ತಾರೆ. ಏಕೆಂದರೆ ಸೇಶದಲ್ಲಿ ಕೆಲವೆ ಮಂದಿ ಮಾತ್ರ ಅವರ ಮಾತನ್ನು ಕೇಳುತ್ತಾರೆ" ಎಂದು ಹೇಳಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications