ಇನ್ಮುಂದೆ ಸಿ.ಎಂ & ಸಚಿವರಿಗೆ ಜೈಲಿನಿಂದಲೇ ಅಧಿಕಾರ ಸಾಧ್ಯವಿಲ್ಲ: ಏನಿದು 3 ಹೊಸ ಕಾನೂನು, ಅಮಿತ್ ಶಾ ಹೇಳಿದ್ದೇನು ?
ಕೇಂದ್ರ ಬಿಜೆಪಿ ಸರ್ಕಾರವು ಆಗಸ್ಟ್ 20 (ಬುಧವಾರ) ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದ್ದಾರೆ. ಅಲ್ಲದೇ ಕೆಲವೊಂದು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ. ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡನೆ ಮಾಡಿರುವ ಮೂರು ಮಸೂದೆಗಳ ಪ್ರಕಾರ, ಗಂಭೀರ ಕ್ರಿಮಿನಲ್ ಆರೋಪದ ಮೇಲೆ ಸತತ 30 ದಿನಗಳ ಕಾಲ ಬಂಧನದಲ್ಲಿದ್ದೆರೆ ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿ ಅಥವಾ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ಸಚಿವರನ್ನು ಪದಚ್ಯುತಗೊಳಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಕನಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧಗಳಿಗಾಗಿ ಅಂತಹ ಯಾವುದೇ ನಾಯಕನನ್ನು ಬಂಧಿಸಿ ಸತತ 30 ದಿನಗಳ ಕಾಲ ಬಂಧನದಲ್ಲಿಟ್ಟರೆ, ಅವರು 31 ನೇ ದಿನದಂದು ಸ್ವಯಂಚಾಲಿತವಾಗಿ ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ ಎನ್ನುವುದು ಇದರ ಸಾರಾಂಶ.
ಈ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ರಾಜಕೀಯ ಭ್ರಷ್ಟಾಚಾರದ ವಿರುದ್ಧ ಮೋದಿ ಸರ್ಕಾರದ ಬದ್ಧತೆ ಮತ್ತು ಸಾರ್ವಜನಿಕ ಆಕ್ರೋಶವನ್ನು ಗಮನಿಸಿ, ಇಂದು ನಾನು ಲೋಕಸಭೆಯ ಸ್ಪೀಕರ್ ಅವರ ಒಪ್ಪಿಗೆಯೊಂದಿಗೆ ಸಂಸತ್ತಿನಲ್ಲಿ ಸಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದೇನೆ. ಇದರಿಂದಾಗಿ ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರು ಮುಂತಾದ ಪ್ರಮುಖ ಸಂವಿಧಾನಿಕ ಹುದ್ದೆಗಳಲ್ಲಿ ಇರುವವರು ಜೈಲಿನಲ್ಲಿದ್ದಾಗ ಸರ್ಕಾರವನ್ನು ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ.

ಮುಂದುವರಿದು ಸಾರ್ವಜನಿಕ ಜೀವನದಲ್ಲಿ ನೈತಿಕತೆಯನ್ನು ಹೆಚ್ಚಿಸುವುದು ಮತ್ತು ರಾಜಕೀಯದಲ್ಲಿ ಪರಿಶುದ್ಧತೆಯನ್ನು ತರುವುದು ಈ ಮಸೂದೆಯ ಉದ್ದೇಶವಾಗಿದೆ. ಈ ಮೂರು ಮಸೂದೆಗಳಿಂದ ಅಸ್ತಿತ್ವಕ್ಕೆ ಬರುವ ಕಾನೂನು ಹೀಗಿದೆ:
(1) ಬಂಧನಕ್ಕೊಳಗಾದ ನಂತರ ಯಾವುದೇ ವ್ಯಕ್ತಿ ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಅಥವಾ ರಾಜ್ಯ ಸರ್ಕಾರದ ಸಚಿವರಾಗಿ ಜೈಲಿನಿಂದ ಆಳ್ವಿಕೆ ನಡೆಸಲು ಸಾಧ್ಯವಿಲ್ಲ.
(2) ಸಂವಿಧಾನವನ್ನು ರಚಿಸಿದಾಗ, ನಮ್ಮ ಸಂವಿಧಾನವನ್ನು ರಚಿಸಲ್ಪಟ್ಟವರು ಭವಿಷ್ಯದಲ್ಲಿ ರಾಜಕಾರಣಿಗಳು ಬಂಧನಕ್ಕೆ ಒಳಗಾಗುವ ಮೊದಲು ನೈತಿಕ ಮೌಲ್ಯಗಳ ಮೇಲೆ ರಾಜೀನಾಮೆ ನೀಡದೆ ಇರುವ ವ್ಯಕ್ತಿಗಳಾಗಿರುತ್ತಾರೆ ಎಂದು ಊಹಿಸಿರಲಿಲ್ಲ. ಕಳೆದ ಕೆಲವು ವರ್ಷಗಳಲ್ಲಿ, ದೇಶದಲ್ಲಿ ಅಂತಹ ಆಶ್ಚರ್ಯಕರ ಪರಿಸ್ಥಿತಿ ಉದ್ಭವಿಸಿದೆ, ಮುಖ್ಯಮಂತ್ರಿ ಅಥವಾ ಸಚಿವರು ರಾಜೀನಾಮೆ ನೀಡದೆ ಜೈಲಿನಿಂದ ಅನೈತಿಕವಾಗಿ ಸರ್ಕಾರವನ್ನು ನಡೆಸುವುದನ್ನು ಮುಂದುವರೆಸಿದ್ದಾರೆ ಎಂದಿದ್ದಾರೆ.
(3) ಈ ಮಸೂದೆಯು ಆರೋಪಿ ರಾಜಕಾರಣಿ ಬಂಧನಕ್ಕೊಳಗಾದ 30 ದಿನಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆಯಲು ಸಹ ಅವಕಾಶ ನೀಡುತ್ತದೆ. 30 ದಿನಗಳ ಒಳಗೆ ಅವರಿಗೆ ಜಾಮೀನು ಸಿಗದಿದ್ದರೆ, 31ನೇ ದಿನದಂದು ಕೇಂದ್ರದ ಪ್ರಧಾನಿ ಮತ್ತು ರಾಜ್ಯಗಳ ಮುಖ್ಯಮಂತ್ರಿ ಅವರನ್ನು ತಮ್ಮ ಹುದ್ದೆಗಳಿಂದ ತೆಗೆದುಹಾಕಲಾಗುತ್ತದೆ. ಇಲ್ಲದಿದ್ದರೆ ಅವರು ಸ್ವತಃ ಕೆಲಸ ಮಾಡಲು ಕಾನೂನುಬದ್ಧವಾಗಿ ಅನರ್ಹರಾಗುತ್ತಾರೆ. ಕಾನೂನು ಪ್ರಕ್ರಿಯೆಯ ನಂತರ, ಅಂತಹ ನಾಯಕನಿಗೆ ಜಾಮೀನು ಸಿಕ್ಕರೆ, ಅವರು ಮತ್ತೆ ತಮ್ಮ ಹುದ್ದೆಯನ್ನು ಮುಂದುವರಿಸಲು ಸಾಧ್ಯವಿದೆ.
ಈಗ ದೇಶದ ಜನರು ಸಚಿವರು, ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿ ಜೈಲಿನಲ್ಲಿದ್ದಾಗ ಸರ್ಕಾರ ನಡೆಸುವುದು ಸರಿಯೇ ಎಂದು ನಿರ್ಧರಿಸಬೇಕಾಗುತ್ತದೆ ? ಎಂದು ಹೇಳಿದ್ದಾರೆ. ಈ ವಿಚಾರವಾಗಿ ಮತ್ತೊಂದು ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಕಾನೂನಿನ ವ್ಯಾಪ್ತಿಗೆ ತರುವ ಸಂವಿಧಾನಿಕ ತಿದ್ದುಪಡಿಯನ್ನು ಮಂಡಿಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನೇತೃತ್ವದ ಇಡೀ ವಿರೋಧ ಪಕ್ಷವು ಕಾನೂನಿನ ವ್ಯಾಪ್ತಿಯಿಂದ ಹೊರಗಿದ್ದು, ಜೈಲಿನಿಂದ ಸರ್ಕಾರಗಳನ್ನು ನಡೆಸುತ್ತಿದೆ ಮತ್ತು ಅಧಿಕಾರದ ಆಸೆಯನ್ನು ಬಿಟ್ಟುಕೊಡುತ್ತಿಲ್ಲ ಇದೇ ಕಾರಣಕ್ಕೆ ಈ ಮಸೂದೆಗಳನ್ನು ವಿರೋಧಿಸಿದೆ.
ಈ ಮಹಾನ್ ಸದನದಲ್ಲಿ, ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಸಂವಿಧಾನಿಕ ತಿದ್ದುಪಡಿ ಸಂಖ್ಯೆ 39 ರ ಮೂಲಕ ಪ್ರಧಾನಿಗೆ ವಿಶೇಷ ಸವಲತ್ತು ನೀಡಿದಾಗ, ಪ್ರಧಾನಿ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಾಗದ ಸಮಯವನ್ನು ದೇಶವು ನೆನಪಿಸಿಕೊಳ್ಳುತ್ತದೆ. ಒಂದೆಡೆ, ಸಂವಿಧಾನವನ್ನು ತಿದ್ದುಪಡಿ ಮಾಡುವ ಮೂಲಕ ಪ್ರಧಾನಿಯನ್ನು ಕಾನೂನಿಗಿಂತ ಮೇಲಿರುವಂತೆ ಮಾಡುವುದು ಕಾಂಗ್ರೆಸ್ನ ನೀತಿಯಾಗಿದೆ. ಆದರೆ, ಭಾರತೀಯ ಜನತಾ ಪಕ್ಷದ ನೀತಿಯೆಂದರೆ, ನಾವು ನಮ್ಮ ಸರ್ಕಾರದ ಪ್ರಧಾನಿ, ಸಚಿವರು, ಮುಖ್ಯಮಂತ್ರಿಗಳನ್ನು ಕಾನೂನಿನ ವ್ಯಾಪ್ತಿಗೆ ತರುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications