ಜನಗಣತಿಯ ಡಿಜಿಟೀಕರಣ ಯೋಜನೆ ಘೋಷಿಸಿದ ಅಮಿತ್ ಶಾ
ಅಸ್ಸಾಂ, ಮೇ 10: ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬರುವ ಜನಗಣತಿಯನ್ನು ಡಿಜಿಟೀಕರಣ (Census Digitisation) ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಅಸ್ಸಾಂ ರಾಜ್ಯದ ಅಮೀನ್ಗಾವೋ ಬಳಿ ನೂತನ ಸೆನ್ಸಸ್ ಕಚೇರಿಯ ಉದ್ಘಾಟನೆ ಮಾಡಿದ ಅವರು, ಮುಂದಿನ ಜನಗಣತಿ ಇ-ಸೆನ್ಸಸ್ ಅಗಿರಲಿದೆ ಎಂದಿದ್ದಾರೆ.
"ಸರಕಾರದ ನೀತಿನಿರ್ಧಾರದಲ್ಲಿ ಜನಗಣತಿ ಪಾತ್ರ ಬಹಳ ಮುಖ್ಯ ಇದೆ. ಹೀಗಾಗಿ, ಸೆನ್ಸಸ್ ಅನ್ನು ಆಧುನಿಕ ತಂತ್ರಜ್ಞಾನ ಮೂಲಕ ಬಹು ಆಯಾಮ, ವೈಜ್ಞಾನಿಕ ಮತ್ತು ನಿಖರವಾಗಿ ಜನಗಣತಿಯನ್ನು ಮಾಡಲಾಗುವುದು. ಈ ಸೆನ್ಸಸ್ ಮಾಹಿತಿಯನ್ನು ವಿಶ್ಲೇಷಿಸುವ ಸಮರ್ಪಕ ವ್ಯವಸ್ಥೆ ಕೂಡ ಮಾಡಲಾಗುವುದು" ಎಂದು ಅಮಿತ್ ಶಾ ಹೇಳಿದ್ದಾರೆ. ಇ-ಸೆನ್ಸಸ್ ಬಹಳ ನಿಖರವಾಗಿರಲಿದ್ದು, ಇದರ ಆಧಾರದ ಮೇಲೆ ಮುಂದಿನ 25 ವರ್ಷಗಳಲ್ಲಿ ದೇಶದ ಅಭಿವೃದ್ಧಿಯ ನಕ್ಷೆ ಮಾಡಲಾಗುವುದು.
"ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ಸೆನ್ಸಸ್ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಈಗ ಇ-ಸೆನ್ಸಸ್ ಕಾರ್ಯ ಕೈಗೊಳ್ಳುತ್ತೇವೆ. ಇದು ಬಹಳ ಕರಾರುವಾಕ್ ಆಗಿರುವ ಜನಗಣತಿಯಾಗಿರುತ್ತದೆ" ಎಂದು ಕೇಂದ್ರ ಗೃಹ ಸಚಿವ ಹಾಗು ಸಹಕಾರ ಖಾತೆ ಸಚಿವರೂ ಆದ ಅಮಿತ್ ಶಾ ತಿಳಿಸಿದ್ದಾರೆ.

ಸೆನ್ಸಸ್ನಲ್ಲಿ ಜನನ-ಮರಣ ನೋಂದಣಿ:
"ಎಲ್ಲೆಲ್ಲಿ ಕಡಿಮೆ ಅಭಿವೃದ್ಧಿಯಾಗಿದೆ, ಎಸ್ಸಿ ಎಸ್ಟಿ ಸಮುದಾಯಗಳ ಪರಿಸ್ಥಿತಿ ಹೇಗಿದೆ, ವಿವಿಧ ಪ್ರದೇಶಗಳಲ್ಲಿ ಜನಜೀವನ ಪರಿಸ್ಥಿತಿ ಹೇಗಿದೆ ಎಂಬುದನ್ನಷ್ಟೇ ಸೆನ್ಸಸ್ ತೋರಿಸಬಹುದು. ಆದರೆ, ನಾವು ಇ-ಸೆನ್ಸಸ್ನಲ್ಲಿ ಜನನ ಮತ್ತು ಮರಣ ನೊಂದಣಿಯನ್ನು (Birth and Death Register) ಸೇರಿಸುವ ಅವಕಾಶ ನೀಡುವ ಹೊಸ ಸಾಫ್ಟ್ವೇರ್ ತಯಾರಿಸಲಿದ್ಧೇವೆ. ಇದನ್ನು ವಿವಿಧ ರೀತಿಯಲ್ಲಿ ನಾವು ಬಳಸಲಿದ್ದೇವೆ. ಮಗು ಜನಸಿದ ಕೂಡಲೇ ಅದರ ಜನ್ಮದಿನಾಂಕ ಸಮೇತ ಮಾಹಿತಿಯು ಜನಗಣತಿ ರಿಜಿಸ್ಟರ್ಗೆ ಹೋಗುತ್ತದೆ. ಈ ಮಗುವಿನ ವಯಸ್ಸು 18 ವರ್ಷ ಆಗುತ್ತಲೇ ಮತದಾರನಾಗಿ ನೊಂದಾಯಿತವಾಗುತ್ತದೆ" ಎಂದು ಅಮಿತ್ ಶಾ ವಿವರಿಸಿದ್ದಾರೆ.
ನಾಗರಿಕ ನೊಂದಣಿ ವ್ಯವಸ್ಥೆ (ಸಿಆರ್ಎಸ್- Civil Register System) ಯಲ್ಲಿ 2024ರೊಳಗೆ ಪ್ರತಿಯೊಂದು ಜನನ ಮತ್ತು ಮರಣ ದಾಖಲಾಗಬೇಕೆಂಬ ಗುರಿ ಇಟ್ಟುಕೊಳ್ಳಲಾಗಿದೆ. ಈ ಮಾಹಿತಿ ಸೆನ್ಸಸ್ನಲ್ಲಿ ಸ್ವಯಂ ಆಗಿ ಸೇರ್ಪಡೆಯಾಗುತ್ತದೆ ಎಂದೂ ಗೃಹ ಸಚಿವರು ಮಾಹಿತಿ ನೀಡಿದ್ಧಾರೆ.

ಇನ್ನು, ನಿನ್ನೆ ಉದ್ಘಾಟನೆಯಾದ ನೂತನ ಸೆನ್ಸಸ್ ಭವನದಿಂದ ಎಲ್ಲಾ ಈಶಾನ್ಯ ರಾಜ್ಯಗಳಲ್ಲಿ ಜನಗಣತಿ ಕಾರ್ಯ ಸುಲಭವಾಗುತ್ತದೆ. ಪ್ರಮುಖ ದತ್ತಾಂಶಗಳನ್ನ ನಿಖರವಾಗಿ ವಿಶ್ಲೇಷಿಸಲು ಇದು ನೆರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಸ್ಸಾಮ್ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
(ಒನ್ಇಂಡಿಯಾ ಸುದ್ದಿ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications