ಅಮಿತ್ ಶಾ-ನಿತೀಶ್ ಕುಮಾರ್ ಭೇಟಿ, ಲೋಕಸಭೆ ಚುನಾವಣೆ ಸೀಟು ಹಂಚಿಕೆ ಚರ್ಚೆ
ಪಾಟ್ನಾ, ಜುಲೈ 12: ತೆರೆ ಮರೆ ಮುನಿಸು ಹೊಂದಿರುವ ಮಿತ್ರ ಪಕ್ಷಗಳಾದ ಜೆಡಿಯು ಹಾಗೂ ಬಿಜೆಪಿಯ ರಾಷ್ಟ್ರಾಧ್ಯಕ್ಷರು ಇಂದು ಪಾಟ್ನಾದಲ್ಲಿ ಭೇಟಿಯಾಗುತ್ತಿದ್ದು. ಲೋಕಸಭೆ ಚುನಾವಣೆ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಈಗಾಗಲೇ ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಸರ್ಕಾರ ನಡೆಸುತ್ತಿದ್ದು, ಇದೇ ಮೈತ್ರಿಯನ್ನು ಲೋಕಸಭೆ ಚುನಾವಣೆಗೆ ವಿಸ್ತರಿಸುವ ಉಮೇದಿನಿಂದ, ಇರುವ 40 ಸೀಟುಗಳಲ್ಲಿ ಬಿಜೆಪಿ ಹಾಗೂ ಜೆಡಿಯು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಬೇಕೆಂಬುದರ ಬಗ್ಗೆ ಇಂದು ಇಬ್ಬರೂ ನಾಯಕರು ಮಾತುಕತೆಯಾಡಲಿದ್ದಾರೆ.
ಕೆಲವು ತಿಂಗಳುಗಳ ಹಿಂದೆಯಷ್ಟೆ ಎರಡೂ ಪಕ್ಷಗಳೂ ಸ್ವತಂತ್ರ್ಯವಾಗಿ ಲೋಕಸಭೆ ಚುನಾವಣೆ ಎದುರಿಸುವದಾಗಿ ಹೇಳಿದ್ದವು. ಆದರೆ ತೃತೀಯರಂಗ ಗಟ್ಟಿಯಾದ ಕಾರಣ ಎರಡೂ ಪಕ್ಷಗಳು ನಿರ್ಣಯ ಬದಲಿಸಿ ಒಟ್ಟಿಗೆ ಚುನಾವಣೆ ಎದುರಿಸುವ ನಿರ್ಣಯಕ್ಕೆ ಬಂದಿವೆ.

ಇಂದು ಬೆಳಿಗ್ಗೆ ಅಮಿತ್ ಶಾ ಅವರು ಪಾಟ್ನಾ ತಲುಪಿದ್ದು, ಸರ್ಕಾರಿ ವಸತಿ ಗೃಹದಲ್ಲಿ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ರಾಷ್ಟ್ರಾಧ್ಯಕ್ಷ ನಿತೀಸ್ ಕುಮಾರ್ ಅವರೊಂದಿಗೆ ಉಪಹಾರ ಸೇವಿಸಿದ್ದಾರೆ. ಅವರ ಜೊತೆಗೆ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಸಹ ಹಾಜರಿದ್ದರು.
ಒಂದೇ ದಿನದಲ್ಲಿ ಎರಡು ಬಾರಿ ಈ ಇಬ್ಬರೂ ನಾಯಕರು ಭೇಟಿ ಆಗುತ್ತಿದ್ದು, ಬೆಳಗಿನ ಉಪಹಾರದ ನಂತರ ರಾತ್ರಿ ಮುಖ್ಯಮಂತ್ರಿ ನಿತೇಶ್ ಕುಮಾರ್ ಅವರು ತಮ್ಮ ನಿವಾಸದಲ್ಲಿ ಅಮಿತ್ ಶಾ ಅವರಿಗಾಗಿ ಭೋಜನಕೂಟ ಏರ್ಪಡಿಸಿದ್ದಾರೆ.
2013ರಲ್ಲಿ ಎನ್ಡಿಎ ತೊರೆದು ತೃತೀಯರಂಗ ಸೇರಿದ್ದ ನಿತೇಶ್ ಕುಮಾರ್ ಕಳೆದ ವರ್ಷವಷ್ಟೆ ಲಾಲೂ ಪ್ರಸಾದ್ ಜೊತೆ ಮೈತ್ರಿ ಮುರಿದುಕೊಂಡು ಬಿಜೆಪಿ ಜೊತೆ ಕೈಜೋಡಿಸಿದ್ದರು. ಆ ನಂತರವೂ ಎರಡೂ ಪಕ್ಷಗಳಿಗೆ ಮುನಿಸು ಇದ್ದೇ ಇತ್ತು. ಆದರೆ ಇಂದಿನ ಭೇಟಿ ಅದನ್ನು ಬದಿಗೆ ಸರಿಸಿದೆ.
ಬಿಜೆಪಿಯು, ಜೆಡಿಯುಗೆ ಗೌರವಯುತ ಎನ್ನಬಹುದಾದಷ್ಟು ಸ್ಥಾನಗಳನ್ನು ಬಿಟ್ಟುಕೊಡಲು ಒಪ್ಪಿದೆ, ಎನ್ನಲಾಗುತ್ತಿದೆ. ಎನ್ಡಿಎ ಯಿಂದ ಹೊರಬಂದಿದ್ದ ಜೆಡಿಯುಗೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಕೇವಲ 2 ಸೀಟು ಮಾತ್ರವೇ ಗೆದ್ದಿತ್ತು.
ಇಂದಿನ ಅಮಿತ್ ಶಾ ಹಾಗೂ ನಿತೀಶ್ ಕುಮಾರ್ ಭೇಟಿ ಬಿಹಾರದಲ್ಲಿ ಆರ್ಜೆಡಿ ಪಕ್ಷಕ್ಕೆ ದೊಡ್ಡ ಹಿನ್ನಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಬಿಹಾರ ಕಾಂಗ್ರೆಸ್ ಹಣೆಯ ಮೇಲೂ ಚಿಂತೆಯ ಗೆರೆಗಳನ್ನು ಮೂಡಿಸಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications