ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಶ್ಮೀರದಲ್ಲಿ ಒಳನುಸುಳುವಿಕೆ ತಡೆಯಲು ಅಮಿತ್ ಶಾ ತಂತ್ರ

|
Google Oneindia Kannada News

Recommended Video

ಬೇರು ಮಟ್ಟದಿಂದ ಶತ್ರುಗಳನ್ನು ಸದೆಬಡಿಯಲು ಪ್ಲ್ಯಾನ್ | Oneindia Kannada

ನವದೆಹಲಿ, ಜೂನ್ 06 : ನೂತನ ಗೃಹ ಸಚಿವ ಅಮಿತ್ ಶಾ ಕಾಶ್ಮೀರದಲ್ಲಿ ಒಳನುಸುಳಿವಿಕೆ ತಡೆಯಲು ತಂತ್ರ ರೂಪಿಸುತ್ತಿದ್ದಾರೆ. ಬೇರು ಮಟ್ಟದಿಂದ ಇದನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಭೆ ನಡೆಸುತ್ತಿದ್ದಾರೆ.

ಗುರುವಾರ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಗೂಬ ಅವರ ಜೊತೆ ಸಭೆ ನಡೆಸಿದರು. ರಾಷ್ಟ್ರೀಯ ಭದ್ರತೆ ಚರ್ಚಿಸಲು ನಡೆಸಿದ ಸಭೆಯಲ್ಲಿ ಕಾಶ್ಮೀರದ ವಿಚಾರವೇ ಪ್ರಮುಖವಾಗಿ ಚರ್ಚೆಯಾಗಿದೆ.

ಗೃಹ ಸಚಿವ ಅಮಿತ್ ಶಾ ಕೈಲಿದೆ ಟಾಪ್ 10 ಉಗ್ರರ ಹಿಟ್ ಲಿಸ್ಟ್ಗೃಹ ಸಚಿವ ಅಮಿತ್ ಶಾ ಕೈಲಿದೆ ಟಾಪ್ 10 ಉಗ್ರರ ಹಿಟ್ ಲಿಸ್ಟ್

ಕಾಶ್ಮೀರದಲ್ಲಿ ಒಳನುಸುಳಿಕೆಯನ್ನು ಬೇರು ಮಟ್ಟದಿಂದ ಮಟ್ಟಹಾಕಬೇಕು ಎಂಬುದು ಅಮಿತ ಶಾ ಅವರ ನಿಲುವು. ಬಿಜೆಪಿ ಕಾಶ್ಮೀರದಲ್ಲಿ ಪಿಡಿಪಿ ಜೊತೆ ಯಾವುದೇ ಮೈತ್ರಿಯನ್ನು ಹೊಂದಿಲ್ಲ. ಆದ್ದರಿಂದ, ಯಾವುದೇ ರಾಜಕೀಯ ಒತ್ತಡಗಳಿಗೆ ಒಳಗಾಗದೇ ಕೆಲಸ ಮಾಡಬಹುದಾಗಿದೆ.

ಗೃಹ ಸಚಿವ ಅಮಿತ್ ಶಾ ಮುಂದಿದೆ ಪ್ರಮುಖ ಐದು ಸವಾಲುಗಳುಗೃಹ ಸಚಿವ ಅಮಿತ್ ಶಾ ಮುಂದಿದೆ ಪ್ರಮುಖ ಐದು ಸವಾಲುಗಳು

Amit Shah

ಗುರುವಾರ ನಡೆದ ಮತ್ತೊಂದು ಬೆಳವಣಿಗೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ಮಾತುಕತೆ ಇಲ್ಲ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ಹೇಳಿದೆ. ಜೂನ್ 13, 14ರಂದು ಕಿರ್ಗಿಸ್ತಾನದ ಬಿಷ್ಕೆಕ್‌ನಲ್ಲಿ ಶೃಂಗ ಸಭೆ ನಡೆಯಲಿದೆ.

ಅಮಿತ್ ಶಾ ಜಾತಕ ಫಲದಲ್ಲಿ ವಿವಿಧ ಹಗರಣಗಳ ಆರೋಪಿಗಳು ಜೈಲು ಪಾಲುಅಮಿತ್ ಶಾ ಜಾತಕ ಫಲದಲ್ಲಿ ವಿವಿಧ ಹಗರಣಗಳ ಆರೋಪಿಗಳು ಜೈಲು ಪಾಲು

ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗ ಸಭೆಯಲ್ಲೂ ಭಾರತ ಮತ್ತು ಪಾಕಿಸ್ತಾನ ನಡುವೆ ಯಾವುದೇ ಚರ್ಚೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

English summary
Union Home Minister Amit Shah met National Security Advisor Ajit Doval and Home Secretary Rajiv Gauba on Thursday. The key aspect discussed during the meeting was Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X