ಒಬ್ಬನೇ ಒಬ್ಬ ಅಕ್ರಮ ವಲಸಿಗನನ್ನು ಇಲ್ಲಿರಲು ಬಿಡೊಲ್ಲ: ಅಮಿತ್ ಶಾ
ಗುವಾಹಟಿ, ಸೆಪ್ಟೆಂಬರ್ 9: ರಾಷ್ಟ್ರೀಯ ಪೌರತ್ವ ನೋಂದಣಿಯಲ್ಲಿ (ಎನ್ಆರ್ಸಿ) ಯಾವುದೇ ಅಕ್ರಮ ವಲಸಿಗರಿಗೆ ಸ್ಥಾನ ಸಿಗದಂತೆ ನೋಡಿಕೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂನ ಪಕ್ಷದ ಘಟಕಕ್ಕೆ ಭಾನುವಾರ ಭರವಸೆ ನೀಡಿದರು.
ಎನ್ಆರ್ಸಿ ಸಂಬಂಧ ಅಮಿತ್ ಶಾ ಅವರಿಗೆ ಅಸ್ಸಾಂನ ಬಿಜೆಪಿ ಘಟಕ ಮನವಿ ಪತ್ರ ಸಲ್ಲಿಸಿತ್ತು. ಎನ್ಆರ್ಸಿಯ ಸಾಧಕ ಬಾದಕಗಳ ಕುರಿತು ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಲಾಯಿತು ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರಂಜಿತ್ ದಾಸ್ ತಿಳಿಸಿದರು.
'ಭಾರತದಲ್ಲಿ ಒಬ್ಬನೇ ಒಬ್ಬ ಅಕ್ರಮ ವಲಸಿಗನಿಗೆ ಅವಕಾಶ ನೀಡುವುದಿಲ್ಲ ಎಂಬ ಬಿಜೆಪಿಯ ನಿಲುವು ಎಂದಿಗೂ ಬದಲಾಗುವುದಿಲ್ಲ ಎಂದು ಅಮಿತ್ ಶಾ ಭರವಸೆ ನೀಡಿರುವುದಾಗಿ ದಾಸ್ ಹೇಳಿದರು.

ಈ ಬಗ್ಗೆ ಪಕ್ಷದ ರಾಜ್ಯ ಘಟಕವು ಚಿಂತೆ ಮಾಡುವುದು ಬೇಡ ಎಂದು ಶಾ ಹೇಳಿದರು. 1971ಕ್ಕೂ ಮೊದಲು ಭಾರತಕ್ಕೆ ಬಂದ ಎಲ್ಲರಿಗೂ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಕೂಡ ಭರವಸೆ ನೀಡಿದ್ದಾಗಿ ಮಾಹಿತಿ ನೀಡಿದರು.
ಈಶಾನ್ಯ ಸಮಿತಿ (ಎನ್ಇ) ಅಧ್ಯಕ್ಷರಾಗಿರುವ ಅಮಿತ್ ಶಾ, ದೇಶದಲ್ಲಿ ಯಾವ ಅಕ್ರಮ ವಲಸಿಗನೂ ಉಳಿದುಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು.
''ವಿಭಿನ್ನ ವರ್ಗಗಳಿಂದ ಎನ್ಆರ್ಸಿ ಕುರಿತು ಪ್ರಶ್ನೆಗಳು ಏಳುತ್ತಿವೆ. ಆದರೆ ಇಂದು ನಾನು ಹೇಳಲು ಬಯಸುವುದೇನೆಂದರೆ, ಈ ಪ್ರದೇಶದಲ್ಲಿ ಒಬ್ಬನೇ ಒಬ್ಬ ಅಕ್ರಮ ವಲಸಿಗ ಪ್ರವೇಶಿಸಲು ಸಾಧ್ಯವಿಲ್ಲ ಎಂಬುದನ್ನು ಬಿಜೆಪಿ ಸರ್ಕಾರ ಖಚಿತಪಡಿಸಲು ಬದ್ಧವಾಗಿದೆ'' ಎಂದು ಶಾ ತಿಳಿಸಿದ್ದರು.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ












Click it and Unblock the Notifications