ನಿಮ್ಮ ಮುತ್ತಾತ ಆಗಲೇ ಬೈ ಬೈ ಅಸ್ಸಾಂ ಎಂದಾಗಿತ್ತು: ರಾಹುಲ್ಗೆ ಅಮಿತ್ ಶಾ ವ್ಯಂಗ್ಯ
ನವದೆಹಲಿ, ಅಕ್ಟೋಬರ್ 20: ಭಾರತವು ಚೀನಾ ಜತೆಗಿನ ಗಡಿ ಯುದ್ಧದಲ್ಲಿ 1962ರಲ್ಲಿ ಹೆಕ್ಟೇರ್ಗಟ್ಟಲೆ ಭೂಮಿ ಕಳೆದುಕೊಂಡಾಗ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ತಮ್ಮದೇ ಸಲಹೆಗಳನ್ನು ಕೇಳಿಕೊಳ್ಳಬೇಕಿತ್ತು ಎಂದು ಗೃಹ ಸಚಿವ ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.
ಪೂರ್ವ ಲಡಾಖ್ನಲ್ಲಿ ನಡೆಯುತ್ತಿರುವ ಭಾರತ-ಚೀನಾ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಹರಿಯಾಣದಲ್ಲಿ ಅ. 7ರಂದು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನಾ ಸಭೆ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಪ್ರತಿಯಾಗಿ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ.
ತಾವು ಅಧಿಕಾರದಲ್ಲಿ ಇದ್ದಿದ್ದರೆ ಚೀನಾವನ್ನು ಭಾರತದ ಗಡಿಯಿಂದಷ್ಟೇ ಅಲ್ಲ, ಇನ್ನೂ ನೂರು ಕಿಮೀ ದೂರದವರೆಗೆ ಕೇಬಲ 15 ನಿಮಿಷದಲ್ಲಿ ಹೊರದಬ್ಬುತ್ತಿದ್ದೆವು. ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಕೂಡಲೇ ಈ ಕೆಲಸ ಮಾಡುತ್ತದೆ. ಆದರೆ ನಾಲ್ಕೈದು ತಿಂಗಳಿನಿಂದ ಚೀನಾ ಸೈನಿಕರು ಭಾರತದ ಭಾಗಗಳನ್ನು ಆಕ್ರಮಿಸಿದ್ದರೂ ಬಿಜೆಪಿ ಸರ್ಕಾರ ಏನೂ ಮಾಡಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು.
ನರೇಂದ್ರ ಮೋದಿ ಅವರ ಸರ್ಕಾರವು ಭಾರತವನ್ನು ದುರ್ಬಲಗೊಳಿಸಿದೆ. ಹೀಗಾಗಿ ಚೀನಾವು ಭಾರತಕ್ಕೆ ಪ್ರವೇಶಿಸಿ ನಮ್ಮ ಸೈನಿಕರನ್ನು ಕೊಲ್ಲುವಷ್ಟು ಧೈರ್ಯ ತೋರಿಸುತ್ತಿದೆ ಎಂದು ಹೇಳಿದ್ದರು. ಮುಂದೆ ಓದಿ.

ಆಗ ಮಾಡಿದ್ದರೆ ಇಷ್ಟೆಲ್ಲ ಹೋಗುತ್ತಿರಲಿಲ್ಲ
ಝೀ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ, '15 ನಿಮಿಷದಲ್ಲಿ ಶತ್ರು ಸೈನಿಕರನ್ನು ಹೊರದಬ್ಬುವ ಸೂತ್ರವನ್ನು 1962ರಲ್ಲಿಯೇ ಅನ್ವಯಿಸಬಹುದಾಗಿತ್ತು. ಆಗಲೇ ಅವರು ಆ ರೀತಿ ಮಾಡಿದ್ದರೆ ಭಾರತವು ತನ್ನ ಹೆಕ್ಟೇರ್ಗಟ್ಟಲೆ ಭೂಮಿ ಕಳೆದುಕೊಳ್ಳುತ್ತಿರಲಿಲ್ಲ' ಎಂದು ಲೇವಡಿ ಮಾಡಿದರು..

ನಿಮ್ಮ ಮುತ್ತಾತ ಇದ್ದಾಗಲೇ ಕಳೆದುಕೊಂಡಿದ್ದೆವು
'ಆಗಿನ ಪ್ರಧಾನಿ ಆಕಾಶವಾಣಿಯಲ್ಲಿ ಆಗಲೇ ಬೈ ಬೈ ಅಸ್ಸಾಂ ಎಂದು ಹೇಳಿಯಾಗಿತ್ತು. ಈ ವಿಚಾರದಲ್ಲಿ ಕಾಂಗ್ರೆಸ್ ನಮಗೆ ಹೇಗೆ ಬುದ್ಧಿಮಾತು ಹೇಳಲು ಬರುತ್ತದೆ? ನಿಮ್ಮ ಮುತ್ತಾತ ಅಧಿಕಾರದಲ್ಲಿದ್ದಾಗ ಚೀನಾದ ಸರ್ಕಾರಕ್ಕೆ ನಮ್ಮ ಪ್ರದೇಶಗಳನ್ನು ಕಳೆದುಕೊಂಡಿದ್ದೆವು' ಎಂದು ರಾಹುಲ್ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಬಿಹಾರ ರೆಜಿಮೆಂಟ್ ಶ್ಲಾಘನೆ
ಜೂನ್ 15ರಂದು ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಚೀನೀ ಸೈನಿಕರನ್ನು ಹಿಮ್ಮೆಟ್ಟಿಸಿದ ಬಿಹಾರ ರೆಜಿಮೆಂಟ್ ಅನ್ನು ಶ್ಲಾಘಿಸಿದ ಅಮಿತ್ ಶಾ, '16 ಬಿಹಾರ ರೆಜಿಮೆಂಟ್ನ ಸೈನಿಕರ ಬಗ್ಗೆ ಅಪಾರ ಹೆಮ್ಮೆ ಇದೆ. ನಮ್ಮ ಅಧಿಕಾರಾವಧಿಯಲ್ಲಾದರೂ ನಾವು ನಮ್ಮ ನಿಲುವಿಗೆ ಬದ್ಧರಾಗಿ ಧೈರ್ಯದಿಂದ ಹೋರಾಡಿದ್ದೇವೆ. ಈ ಸೈನಿಕರು ಅತ್ಯಂತ ಕಠೋರ ಹವಾಮಾನ ಪರಿಸ್ಥಿತಿಯನ್ನು ಎದುರಿಸಿ ನಮ್ಮ ದೇಶವನ್ನು ರಕ್ಷಿಸಿದ್ದಾರೆ' ಎಂದು ಹೇಳಿದರು.

ಮಾತುಕತೆ ಪರಿಹಾರದ ಭರವಸೆ
ಚೀನಾ-ಭಾರತ ಗಡಿ ಸಂಘರ್ಷವನ್ನು ಮಾತುಕತೆಯ ಮೂಲಕ ಬಗೆಹರಿಸುವ ಅನೇಕ ಪ್ರಯತ್ನಗಳು ನಡೆದರೂ ಅವು ಸಫಲವಾಗಿಲ್ಲ. ಎರಡೂ ದೇಶಗಳು ಗಡಿಯಲ್ಲಿನ ತಮ್ಮ ಪಡೆಗಳನ್ನು ವಾಪಸ್ ಕರೆಯಿಸಿಕೊಳ್ಳಲು ಮುಂದಾಗಿಲ್ಲ. ಆದರೂ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಮಾತುಕತೆಗಳ ಮೂಲಕ ಈ ವಿವಾದಕ್ಕೆ ಅಂತಿಮ ಪರಿಹಾರ ಸಿಗಬಹುದು ಎಂದು ಅಮಿತ್ ಶಾ ಭರವಸೆ ವ್ಯಕ್ತಪಡಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications