ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಗರ ನಕ್ಸಲ್ ಪ್ರಚಾರವನ್ನು ಗಂಭೀರವಾಗಿ ತೆಗೆದುಕೊಂಡ ಬಿಜೆಪಿ

By Gururaj
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 09 : ನಗರ ನಕ್ಸಲ್ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಮುಂಬರುವ ಲೋಕಸಭೆ ಚುನಾವಣೆ ಮತ್ತು ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ವಿಪಕ್ಷಗಳ ವಿರುದ್ಧ ಟೀಕಾ ಪ್ರಹಾರ ನಡೆಸಲು ಪಕ್ಷ ಮುಂದಾಗಿದೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಈ ಕುರಿತು ಸೂಚನೆ ನೀಡಿದ್ದಾರೆ. 'ನಗರ ನಕ್ಸಲರನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ವಿರುದ್ಧ ಹೋರಾಟ ಮಾಡುವಂತೆ' ಅವರು ಪಕ್ಷದ ನಾಯಕರಿಗೆ ನಿರ್ದೇಶನ ನೀಡಿದ್ದಾರೆ.

'ನಾನೂ ನಗರ ನಕ್ಸಲ್' ಎಂದ ಗಿರೀಶ ಕಾರ್ನಾಡ್ ವಿರುದ್ಧ ದೂರು'ನಾನೂ ನಗರ ನಕ್ಸಲ್' ಎಂದ ಗಿರೀಶ ಕಾರ್ನಾಡ್ ವಿರುದ್ಧ ದೂರು

ನಕ್ಸಲರಿಗೆ ಬೆಂಬಲ ನೀಡುತ್ತಿದ್ದವರನ್ನು ಬಂಧಿಸಿದ್ದಕ್ಕಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಅಮಿತ್ ಶಾ ಅಭಿನಂದಿಸಿದ್ದಾರೆ.

 Amit Shah tells BJP to take opposition to the cleaners on urban naxals

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ನಕ್ಸಲ್ ಬೆಂಬಲಿಗರನ್ನು ವಿಪಕ್ಷಗಳು ಬೆಂಬಲಿಸಬಹುದು. ಆದ್ದರಿಂದ, ವಿಪಕ್ಷಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ಅಮಿತ್ ಶಾ ಹೇಳಿದ್ದಾರೆ.

ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದಾಗಿ ಕ್ರಮ ಕೈಗೊಂಡು ಹತ್ಯೆ ಸಂಚು ರೂಪಿಸಿದ ಮಹಾರಾಷ್ಟ್ರ ಸರ್ಕಾರವನ್ನು ಎಲ್ಲರೂ ಅಭಿನಂದಿಸಬೇಕು ಎಂದು ಅಮಿತ್ ಶಾ ತಿಳಿಸಿದ್ದಾರೆ.

English summary
Build a strong campaign against the Congress and other opposition parties which are supporting urban naxals for the sake of vote bank politics said BJP president Amit Shah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X