ದೇಶದಲ್ಲಿ ಇಂಗ್ಲೀಷ್ ಮಾತನಾಡುವವರು ನಾಚಿಕೆಪಡುವ ಕಾಲ ದೂರ ಇಲ್ಲ; ಕೇಂದ್ರ ಸಚಿವ ಅಮಿತ್ ಶಾ
Amit Shah: ಹಿಂದಿ ಹೇರಿಕೆ ವಿರೋಧಿಸಿ ದೇಶದ ದಕ್ಷಿಣ ರಾಜ್ಯಗಳಲ್ಲಿ ಬೃಹತ್ ಪ್ರತಿಭಟನೆಗಳೇ ನಡೆದಿವೆ. ಈ ನಡುವೇ ಇದೀಗ ಕೇಂದ್ರ ಗೃಹ ಸಚಿವ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ ಎಂದು ಹೇಳಿ ಗಮನ ಸೆಳೆದಿದ್ದಾರೆ. ಹಾಗಾದ್ರೆ ಈ ಮಾತು ಹೇಳಲು ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮಾಜಿ ಐಎಎಸ್ ಅಧಿಕಾರಿ ಅಶುತೋಷ್ ಅಗ್ನಿಹೋತ್ರಿ ಬರೆದ 'ಮೈ ಬೂಂದ್ ಸ್ವಯಂ, ಖುದ್ ಸಾಗರ್ ಹೂನ್' ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ನಮ್ಮ ದೇಶದ ಭಾಷಾ ಪರಂಪರೆಯನ್ನು ಹೆಮ್ಮೆಯಿಂದ ಜಗತ್ತಿಗೆ ಸಾರುವ ದಿನ ಬಂದಿದೆ. ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ನಾಚಿಕೆ ಪಟ್ಟುಕೊಳ್ಳುವಂತಹ ಸಮಯ ಹತ್ತಿರ ಆಗಿದೆ ಎಂದು ಹೇಳಿದರು.

ಸ್ಥಳೀಯ ಭಾಷೆಗಳು ಭಾರತದ ಗುರುತಿನ ಕೇಂದ್ರ ಆಗಿದ್ದು, ವಿದೇಶಿ ಭಾಷೆಗಳಿಗಿಂತ ಹೆಚ್ಚು ಆದ್ಯತೆ ನೀಡಬೇಕು. ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ. ಅಂತಹ ಸಮಾಜದ ಸೃಷ್ಟಿಗೆ ದೂರ ಇಲ್ಲ. ನಮ್ಮ ದೇಶದ ಭಾಷೆಗಳು ನಮ್ಮ ಸಂಸ್ಕೃತಿಯ ರತ್ನಗಳು ಎಂದು ನಂಬುತ್ತೇನೆ. ನಮ್ಮ ಭಾಷೆಗಳಿಲ್ಲದೆ, ನಾವು ನಿಜವಾದ ಭಾರತೀಯರು ಆಗುವುದಿಲ್ಲ ಅಂತಲೂ ಹೇಳಿದರು.
ಭಾರತದ ಭಾಷಾ ಪರಂಪರೆಯನ್ನು ಮರಳಿ ಪಡೆಯಲು ದೇಶಾದ್ಯಂತ ನವೀಕೃತ ಪ್ರಯತ್ನಕ್ಕೆ ಕರೆ ನೀಡಿದರು. ಪ್ರಪಂಚದಾದ್ಯಂತ ವಸಾಹತುಶಾಹಿ ಗುಲಾಮಗಿರಿಯ ಸಂಕೇತವಾಗಿ ಇಂಗ್ಲಿಷ್ ಅನ್ನು ತಿರಸ್ಕರಿಸಲಾಗುವುದು. ನಮ್ಮ ದೇಶ, ಸಂಸ್ಕೃತಿ, ಇತಿಹಾಸ ಮತ್ತು ನಮ್ಮ ಧರ್ಮವನ್ನು ಅರ್ಥಮಾಡಿಕೊಳ್ಳಲು ಯಾವುದೇ ವಿದೇಶಿ ಭಾಷೆ ಸಾಕಾಗುವುದಿಲ್ಲ. ಅರೆಬೆಂದ ವಿದೇಶಿ ಭಾಷೆಗಳ ಮೂಲಕ ಸಂಪೂರ್ಣ ಭಾರತದ ಕಲ್ಪನೆಯನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ ಎಂದು ಹೇಳಿದರು.
ಇದು ಎಷ್ಟು ಕಷ್ಟಕರ ಎಂದು ನನಗೆ ಸಂಪೂರ್ಣವಾಗಿ ತಿಳಿದಿದೆ. ಆದರೆ ಭಾರತೀಯ ಸಮಾಜವು ಇದರಲ್ಲಿ ಗೆಲ್ಲುತ್ತದೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಮತ್ತೊಮ್ಮೆ ಸ್ವಾಭಿಮಾನದಿಂದ ನಾವು ನಮ್ಮ ದೇಶವನ್ನು ನಮ್ಮದೇ ಭಾಷೆಗಳಲ್ಲಿ ನಡೆಸುವುದಲ್ಲದೆ, ಜಗತ್ತನ್ನು ಸಹ ಮುನ್ನಡೆಸುತ್ತೇವೆ ಎಂದು ತಿಳಿಸಿದರು.
ಹೊಸ ಶಿಕ್ಷಣ ನೀತಿಯ ಭಾಗ ಆಗಿರುವ ತ್ರಿಭಾಷಾ ಸೂತ್ರವನ್ನು ಜಾರಿಗೆ ತರುವ ಮೂಲಕ ಕೇಂದ್ರವು ಹಿಂದಿಯನ್ನು ಹೇರುತ್ತಿದೆ ಎಂದು ದಕ್ಷಿಣದ ರಾಜ್ಯಗಳು ಆರೋಪಿಸಿರುವ ಬೆನ್ನಲ್ಲೇ ಅಮಿತ್ ಶಾ ಅವರು ಈ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. ಅಲ್ಲದೆ, 2047 ರ ವೇಳೆಗೆ ನಮ್ಮ ಬದಲಾವಣೆಯ ಪ್ರಯಾಣವು ನಮ್ಮ ದೇಶದ ವೈಭವವನ್ನು ಮರಳಿ ತರುತ್ತದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications