ದೇಶದ ಕಾನೂನಿನಲ್ಲಿ ಪರಿಷ್ಕರಣೆ: ಅತ್ಯಾಚಾರಿಗಳಿಗೆ ಮರಣದಂಡನೆ
ನವದೆಹಲಿ, ಆಗಸ್ಟ್ 11: ಕೇಂದ್ರ ಸರ್ಕಾರವು ಇಂದು ಸಂಸತ್ತಿನಲ್ಲಿ ಹೊಸ ಮಸೂದೆಗಳನ್ನು ಮಂಡಿಸಿದೆ. ಬ್ರಿಟಿಷ್ ಕಾಲದ ಕಾನೂನುಗಳನ್ನು ಪರಿಷ್ಕರಣೆ ಮಾಡಲು ಕೇಂದ್ರ ಸರ್ಕಾರವು ಮುಂದಾಗಿದೆ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ನೀಡಿದ್ದಾರೆ.
#WATCH | Union Home Minister Amit Shah says, "...Under this law, we are repealing laws like Sedition...," as he speaks on Bharatiya Nyaya Sanhita Bill, 2023; The Bharatiya Sakshya Bill, 2023 and The Bharatiya Nagrik Suraksha Sanhita Bill in Lok Sabha. pic.twitter.com/CHlz0VOf7Z
— ANI (@ANI) August 11, 2023
ಇವತ್ತಿನ ಲೋಕಸಭೆ ಕಲಾಪದಲ್ಲಿ ಗೃಹ ಸಚಿವರು, ದೇಶದ ಕ್ರಿಮಿನಲ್ ಕಾನೂನಿಗೆ ತಿದ್ದುಪಡಿ ತರುವ ಕುರಿತು ಪ್ರಸ್ತಾಪ ಮಾಡಿ, ಮೂರು ಮಸೂದೆಗಳನ್ನು ಮಂಡಿಸಿದರು.

ಇಂಡಿಯನ್ ಪಿನಲ್ ಕೋಡ್ ಬದಲಿಗೆ 'ಭಾರತೀಯ ನ್ಯಾಯ ಸಂಹಿತಾ' ಮಸೂದೆ ಕ್ರಿಮಿನಲ್, ಪ್ರೊಸಿಜರ್ ಬದಲಿಗೆ 'ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ' ಮಸೂದೆ ಹಾಗೂ ಇಂಡಿಯನ್ ಎವಿಡೆನ್ಸ್ ಆ್ಯಕ್ಟ್ ಬದಲಿಗೆ 'ಭಾರತೀಯ ಸಾಕ್ಷ್ಯ' ಮಸೂದೆಯನ್ನು ಪರಿಷ್ಕರಣೆ ಮಾಡುವುದಾಗಿ ಅಮಿತ್ ಶಾ ತಿಳಿಸಿದ್ದಾರೆ.
ದೇಶದ್ರೋಹ ಸೆಕ್ಷನ್ ರದ್ದು ಮಾಡುತ್ತೇವೆ ಎಂದು ತಿಳಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ಕ್ರಿಮಿನಲ್ ಕಾನೂನಿಗೆ ತಿದ್ದುಪಡಿ ತರುವ ಕುರಿತು ಪ್ರಮುಖ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ಹೊಸ ಮಸೂದೆಗಳಲ್ಲಿ ಶಿಕ್ಷೆಗಳು ಬದಲಾಗುತ್ತಿದ್ದು, ಚುನಾವಣೆಯ ಸಮಯದಲ್ಲಿ ಮತದಾರರಿಗೆ ಲಂಚ ನೀಡುವವರಿಗೆ ಒಂದು ವರ್ಷ ಜೈಲು ಶಿಕ್ಷೆ, ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ 20 ವರ್ಷಗಳ ಜೈಲು ಶಿಕ್ಷೆ ಬದಲು ಜೀವಾವಧಿ ಶಿಕ್ಷೆ ಹಾಗೂ ಅಪ್ರಾಪ್ತರ ಅತ್ಯಾಚಾರದ ಪ್ರಕರಣದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ನೀಡುವ ಬಗ್ಗೆ ಐಪಿಸಿಯನ್ನು ಬದಲಾಯಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ದೇಶದ್ರೋಹದ ಕಾಯಿದೆ ರದ್ದು ಮಾಡುವ ಬಗ್ಗೆಯೂ ಅಮಿತ್ ಶಾ ಪ್ರಸ್ತಾಪಿಸಿದ್ದಾರೆ. ದೇಶದ್ರೋಹದ ಕಾಯಿದೆ ಕೂಡ ಬ್ರಿಟಿಷ್ ಕಾಲದ್ದಾಗಿದೆ. ಐಪಿಸಿ ಸೆಕ್ಷನ್ 124 (a) ಅಡಿ ದೇಶದ್ರೋಹದ ಆರೋಪ ಹೊರಿಸಿ ಶಿಕ್ಷೆ ವಿಧಿಸಲಾಗುತ್ತಿತ್ತು. ಇದು ಸದ್ಯ ಚರ್ಚೆಗೆ ಗುರಿಯಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications