ಮುಂದಿನ ರಕ್ಷಣಾ ಸಚಿವರಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇಮಕ?
ಅಮಿತ್ ಶಾ ಅವರಿಗೆ ರಕ್ಷಣಾ ಸಚಿವ ಪಟ್ಟ. ಬಿಜೆಪಿ ಮೂಲಗಳಿಂದ ಮಾಹಿತಿ. ಸದ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿರುವ ಅಮಿತ್. ಗುಜರಾತ್ ಮೂಲಕ ರಾಜ್ಯಸಭಾ ಸದಸ್ಯರಾದ ನಂತರ ರಕ್ಷಣಾ ಇಲಾಖೆ ಸಚಿವರಾಗಿ ನೇಮಕವಾಗುವ ಸಾಧ್ಯತೆ.
ನವದೆಹಲಿ, ಆಗಸ್ಟ್ 1: ಹಲವಾರು ದಿನಗಳಿಂದ ಖಾಲಿ ಇರುವ ರಕ್ಷಣಾ ಸಚಿವರ ಹುದ್ದೆಗೆ ಈಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ತಂದು ಕೂರಿಸಲು ಮೋದಿ ಹಾಗೂ ಬಿಜೆಪಿಯ ಥಿಂಕ್ ಟ್ಯಾಂಕ್ ಆಲೋಚಿಸಿವೆಯೇ?
ಬಿಜೆಪಿಯ ನಂಬಲರ್ಹ ಮೂಲಗಳನ್ನು ನಂಬುವುದಾದರೆ ಇದು ಸರಿ! ಹೌದು. ರಾಜ್ಯಸಭಾ ಸದಸ್ಯರಾಗುವ ಮೂಲಕ ಸಂಸತ್ ಪ್ರವೇಶಿಸಲು ವೇದಿಕೆ ಸಜ್ಜು ಮಾಡಿಕೊಂಡಿರುವ ಅಮಿತ್ ಶಾ, ಸಂಸದರಾಗಿ ಚುನಾಯಿತರಾದ ಕೂಡಲೇ ಅವರಿಗೆ ರಕ್ಷಣಾ ಸಚಿವರ ಹುದ್ದೆಯೇರಲಿದ್ದಾರೆಂದು ಹೇಳಲಾಗಿದೆ.

ಈ ಹಿಂದೆ, ರಕ್ಷಣಾ ಇಲಾಖೆಯನ್ನು ಈ ಹಿಂದೆ ಮನೋಹರ್ ಪರಿಕ್ಕರ್ ನಿಭಾಯಿಸುತ್ತಿದ್ದರು. ಆದರೆ ಅವರು ಗೋವಾದ ಮುಖ್ಯಮಂತ್ರಿಯಾದ ನಂತರ, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ರಕ್ಷಣಾ ಖಾತೆಯನ್ನು ನಿಭಾಯಿಸುತ್ತಿದ್ದಾರೆ.
ಆರ್ಥಿಕ ಇಲಾಖೆ ಜತೆಗೆ ರಕ್ಷಣಾ ಇಲಾಖೆಯನ್ನೂ ನಿಭಾಯಿಸುತ್ತಿರುವುದರಿಂದ ಜೇಟ್ಲಿಯವರಿಗೆ ಹೆಚ್ಚು ಹೊರೆಯಾಗುತ್ತಿದೆ. ಹೀಗಾಗಿಯೇ, ಕೇಂದ್ರ ಮಂತ್ರಿ ಮಂಡಲ ಪುನಾರಚನೆ ಮಾಡಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ.
ಗಡಿಯಲ್ಲಿ ಚೀನಾ, ಪಾಕಿಸ್ತಾನಗಳೆರಡೂ ಭಾರತಕ್ಕೆ ತಲೆನೋವಾಗಿರುವ ಈ ವೇಳೆಯಲ್ಲಿ ರಕ್ಷಣಾ ಸಚಿವರಾಗಿ ಶಾ ಬಂದರೆ, ಈ ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತಾರೆಂಬ ಕುತೂಹಲ ಈಗ ಎಲ್ಲರಲ್ಲಿ ಮನೆ ಮಾಡಿದೆ.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications