ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನ ಬದಲಾವಣೆ: ಅಮಿತ್ ಶಾ ನಂತರ ಯಾರು?
ನವದೆಹಲಿ, ಮೇ 25: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ವಿಜಯ ಗಳಿಸಿರುವ ಬೆನ್ನಲ್ಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನವನ್ನು ಬದಲಾಯಿಸಲು ಚಿಂತನೆ ಆರಂಭಗೊಂಡಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಕೇಂದ್ರ ಕ್ಯಾಬಿನೆಟ್ನಲ್ಲಿ ಪ್ರಭಾವಿ ಸಚಿವ ಸ್ಥಾನವನ್ನು ನೀಡುವ ಸಾದ್ಯತೆ ದಟ್ಟವಾಗಿದೆ. ಹಾಗಾಗಿಯೇ ಅವರನ್ನು ಅಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಳಿಸಲಾಗುತ್ತಿದೆ.
ಬಿಜೆಪಿ ನಿಯಮದ ಪ್ರಕಾರ ಒಬ್ಬರು ಎರಡು ಪ್ರಮುಖ ಹುದ್ದೆಗಳನ್ನು ಹೊಂದುವಂತಿಲ್ಲ, ಹಾಗಾಗಿ ಅಮಿತ್ ಶಾ ಅವರಿಗೆ ಕೇಂದ್ರ ಮಂತ್ರಿ ಸ್ಥಾನ ನೀಡಿದಲ್ಲಿ ಅಧ್ಯಕ್ಷ ಸ್ಥಾನವನ್ನು ಬೇರೆಯವರಿಗೆ ನೀಡಲೇ ಬೇಕಾಗುತ್ತದೆ. ಅಲ್ಲದೆ ಅಮಿತ್ ಶಾ ಅವರ ಅಧ್ಯಕ್ಷ ಅವಧಿ ಈಗಾಗಲೇ ಮುಗಿದಿದೆ. ಹಾಗಾಗಿ ಅದಕ್ಕಾಗಿ ಹುಡುಕಾಟವು ಆರಂಭವಾಗಿದೆ.
ಬಿಜೆಪಿಯ ಅಧ್ಯಕ್ಷ ಸ್ಥಾನವನ್ನು ಸಾಮಾನ್ಯವಾಗಿ ಆರ್ಎಸ್ಎಸ್ ಹಿನ್ನೆಲೆಯಿರುವವರಿಗೆ, ಆರ್ಎಸ್ಎಸ್ ಮತ್ತು ಬಿಜೆಪಿಯನ್ನು ಜೊಜತೆಯಾಗಿ ತೆಗೆದುಕೊಂಡು ಹೋಗುವವರಿಗೆ ಕೊಡುವ ಸಂಪ್ರದಾಯ ಬಿಜೆಪಿಯಲ್ಲಿ ಈ ಮೊದಲಿನಿಂದಲೂ ಇದೆ.

ಉತ್ತರ ಭಾರತದವರೇ ಅಧ್ಯಕ್ಷರಾಗುವ ಸಾಧ್ಯತೆ
ಅದರಲ್ಲಿಯೂ ಸಾಮಾನ್ಯವಾಗಿ ಉತ್ತರ ಭಾರತದವರೇ ಬಿಜೆಪಿಯ ಅಧ್ಯಕ್ಷ ಸ್ಥಾನವನ್ನು ನಿಭಾಯಿಸಿದ್ದಾರೆ. ಹಾಗಾಗಿ ಈ ಬಾರಿ ಸಹ ಉತ್ತರ ಭಾರತದವರೇ ಬಿಜೆಪಿ ಅಧ್ಯಕ್ಷರಾಗುವ ಸಾಧ್ಯತೆ ಇದೆ. ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಬಿಜೆಪಿಯ ಕಾರ್ಯಕಾರಿಣಿಯವರು ಆಯ್ಕೆ ಮಾಡುತ್ತಾರಾದರೂ ಆರ್ಎಸ್ಎಸ್ನ ಪ್ರಭಾವ ಇದರಲ್ಲಿ ಹೆಚ್ಚಿಗೆ ಇರುತ್ತದೆ.

ಶಿವರಾಜ್ ಸಿಂಗ್ ಮತ್ತು ಸ್ಮೃತಿ ಇರಾನಿ ಹೆಸರು ಚಾಲ್ತಿಯಲ್ಲಿ
ಪ್ರಸ್ತುತ ಕೇಳಿಬರುತ್ತಿರುವ ಹೆಸರುಗಳೆಂದರೆ, ಶಿವರಾಜ್ ಸಿಂಗ್ ಚೌಹಾಣ್, ಸ್ಮೃತಿ ಇರಾನಿ, ರಾಜನಾಥ್ ಸಿಂಗ್ ಈ ಮೂವರ ಹೆಸರುಗಳು ಪ್ರಾಥಿಕ ಹಂತದಲ್ಲಿ ಕೇಳಿಬರುತ್ತಿದೆ. ಇದರಲ್ಲಿ ರಾಜನಾಥ್ ಸಿಂಗ್ ಅವರು ಈಗಾಗಲೇ ಒಮ್ಮೆ ಪಕ್ಷದ ಅಧ್ಯಕ್ಷರಾಗಿದ್ದಾರೆ ಹಾಗಾಗಿ ಅವರಿಗೆ ಅವಕಾಶ ಕಡಿಮೆ. ಇನ್ನು ಸ್ಮೃತಿ ಅವರಿಗೆ ಕೇಂದ್ರ ಮಂತ್ರಿ ಮಂಡಲದಲ್ಲಿ ಸ್ಥಾನ ಕೊಡುವ ಸಾಧ್ಯತೆ ಹೆಚ್ಚಿಗಿದೆ. ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ವಯಸ್ಸಿನ ಕಾರಣಕ್ಕೆ ಹುದ್ದೆ ನಿರಾಕರಿಸುವ ಸಾಧ್ಯತೆಯೂ ಇದೆ.

ಸಂಘಟನಾ ಶಕ್ತಿ ಇರುವವರಿಗೆ ಅಧ್ಯಕ್ಷ ಸ್ಥಾನ
ಬಿಜೆಪಿಯು ಸಾಮಾನ್ಯವಾಗಿ ಸಂಘಟನಾ ಶಕ್ತಿ ಇರುವವರನ್ನೇ ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತದೆ. ಈ ವರೆಗೆ ಹೆಸರೂ ಸಹಿತ ಕೇಳದ, ತೆರೆಯ ಹಿಂದೆ ಕೆಲಸ ಮಾಡುತ್ತಿರುವ ಹಲವು ಮುಖಂಡರು ಬಿಜೆಪಿ ಪಟ್ಟಿಯಲ್ಲಿದ್ದಾರೆ ಅಂತಹವರಲ್ಲಿ ಯಾರನ್ನಾದರೂ ಒಬ್ಬರನ್ನು ಆರ್ಎಸ್ಎಸ್ ಮತ್ತು ಬಿಜೆಪಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕೂರಿಸುವ ಸಾಧ್ಯತೆ ಇದೆ.

ಬಿಎಲ್ ಸಂತೋಷ್ ಅವರಿಗೂ ಅವಕಾಶ ಇದೆ
ರಾಜ್ಯ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರಿಗೂ ಅವಕಾಶ ಇಲ್ಲದೇ ಇಲ್ಲ. ರಾಜ್ಯದಲ್ಲಿ 25 ಲೋಕಸಭಾ ಸ್ಥಾನಗಳು ಬರುವಲ್ಲಿ ಅವರ ಪಾತ್ರ ಇದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ ಗೆಲ್ಲುವಲ್ಲಿಯೂ ಅವರ ಶ್ರಮ ಮಹತ್ವವವಾದುದು. ಅವರನ್ನು ಬಿಜೆಪಿ ರಾಷ್ಟ್ರ ಮಟ್ಟದ ಸಂಘಟನೆಗೆ ಕರೆಸಿಕೊಳ್ಳಬೇಕೆಂದು ಈ ಮೊದಲೇ ಚರ್ಚೆ ಎದ್ದಿತ್ತು. ಈಗ ಅಮಿತ್ ಶಾ ನಿರ್ಗಮನದಿಂದ ಉಂಟಾಗುವ ನಿರ್ವಾತವನ್ನು ಸಂತೋಷ್ ಅವರು ತುಂಬಿದರೆ ಆಶ್ಚರ್ಯವೇನೂ ಇಲ್ಲ. ಆದರೆ ಬಿಜೆಪಿ ದಕ್ಷಿಣದವರ ಬಗ್ಗೆ ತೋರುವ ನಿರ್ಲಕ್ಷ್ಯ ಬಿಡಬೇಕಷ್ಟೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications