ತಳಿಪರಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಉದ್ಘಾಟಿಸಿದ ಶಾ
ಮಂಗಳೂರು, ಅಕ್ಟೋಬರ್ 3: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೇರಳಕ್ಕೆ ಭೇಟಿ ನೀಡಿದ್ದಾರೆ .
ಕಣ್ಣೂರಿನಲ್ಲಿ ಐತಿಹಾಸಿಕ ತಳಿಪರಂಬ ರಾಜರಾಜೇಶ್ವರ ದೇವಾಲಯದ ಪೂಜೆ ಸಲ್ಲಿಸಿದ ಅಮಿತ್ ಶಾ ನಂತರ ಪಯ್ಯನೂರಿನಲ್ಲಿ 'ಜನರಕ್ಷಾ ಯಾತ್ರೆ'ಗೆ ಚಾಲನೆ ನೀಡಿದರು.
ಕೇರಳದಲ್ಲಿ ನಿರಂತರವಾಗಿ ನಡೆಯುತ್ತಿರುವ ಆರ್.ಎಸ್.ಎಸ್ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಖಂಡಿಸಿ 'ಜನರಕ್ಷಾ ಯಾತ್ರೆ' ಹೆಸರಿನಲ್ಲಿ ಕೇರಳದ ಬಿಜೆಪಿ ಘಟಕ ಈ ಬೃಹತ್ ಪಾದಯಾತ್ರೆ ಆಯೋಜಿಸಿದೆ.
|
ರಾಜರಾಜೇಶ್ವರ ದೇವರಿಗೆ ವಿಶೇಷ ಪೂಜೆ
ಬೆಳಿಗ್ಗೆ ದೇವಾಲಯದಲ್ಲಿ ರಾಜರಾಜೇಶ್ವರ ದೇವರ ದರ್ಶನ ಪಡೆದ ಅಮಿತ್ ಶಾ , ವಿಶೇಷ ಪೂಜೆ ಸಲ್ಲಿಸಿದರು . ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ , ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮಮ್ ರಾಜಶೇಖರ್ , ಪ್ರಧಾನ ಕಾರ್ಯದರ್ಶಿ ಕೆ, ಸುರೇಂದ್ರನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .
|
ಭಾವಚಿತ್ರ ಪ್ರದರ್ಶನ ಉದ್ಘಾಟನೆ
ಪೂಜೆ ಸಲ್ಲಿಸಿದ ನಂತರ ಪಯ್ಯನೂರು ನಗರ ವೃತ್ತದಲ್ಲಿ ಕೊಲೆಯಾದ ಬಿಜೆಪಿ ಮತ್ತು ಆರ್.ಎಸ್.ಎಸ್ ಕಾರ್ಯಕರ್ತರ ಭಾವಚಿತ್ರಗಳ ಪ್ರದರ್ಶನವನ್ನು ಅಮಿತ್ ಶಾ ಉದ್ಘಾಟಿಸಿದರು.
|
ಜನರಕ್ಷಾ ಯಾತ್ರೆ ಉದ್ಘಾಟನೆ
ಪಯ್ಯನೂರಿನಲ್ಲಿ ಜನರಕ್ಷಾ ಯಾತ್ರೆಯನ್ನು ಅಮಿತ್ ಶಾ ಉದ್ಘಾಟಿಸಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಅವರು ಜನರಕ್ಷಾ ಯಾತ್ರೆಯ ರ್ಯಾಲಿ ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.
|
15 ದಿನಗಳ ಪಾದಯಾತ್ರೆ
ಇಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತವರು ನೆಲ ಹಾಗೂ ಅತೀ ಹೆಚ್ಚು ರಾಜಕೀಯ ಹಿಂಸೆಗೆ ಸಾಕ್ಷಿಯಾದ ಕಣ್ಣೂರಿನಿಂದ ಜನರಕ್ಷಾ ಯಾತ್ರೆ ಆರಂಭವಾಗಲಿದೆ. ಅಕ್ಟೋಬರ್ 17ರಂದು ಪಾದಯಾತ್ರೆ ರಾಜಧಾನಿ ತಿರುವನಂತಪುರಂನಲ್ಲಿ ಸಮಾರೋಪಗೊಳ್ಳಲಿದೆ. ಒಟ್ಟು 15 ದಿನಗಳ ಯಾತ್ರೆ ಇದಾಗಿದ್ದು ಆರ್.ಎಸ್.ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಹಲ್ಲೆ ಖಂಡಿಸಿ ಕೇರಳದ ಬಿಜೆಪಿ ಘಟಕ ಈ ಪಾದಯಾತ್ರೆ ಆಯೋಜಿಸಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications