ಪಂಜಾಬ್ನಲ್ಲಿ ಬಂಧಿಸಿದ ಅಮೃತ್ಪಾಲ್ ಸಿಂಗ್ ಅವರನ್ನು ಅಸ್ಸಾಂ ಜೈಲಿಗೆ ಕಳುಹಿಸಿದ್ದು ಏಕೆ?
ನವದೆಹಲಿ, ಏಪ್ರಿಲ್. 24 : ಮಾರ್ಚ್ 18 ರಿಂದ ಪರಾರಿಯಾಗಿದ್ದ ಖಲಿಸ್ತಾನ್ ಹೋರಾಟಗಾರ ಅಮೃತ್ಪಾಲ್ ಸಿಂಗ್ ಅವರು ಭಾನುವಾರ ಪಂಜಾಬ್ ಪೊಲೀಸರ ಮುಂದೆ ಶರಣಾಗಿದ್ದಾರೆ. ಅವರನ್ನು ಬಂಧಿಸಲಾದ ಕೆಲವು ಗಂಟೆಗಳ ನಂತರ ಆರೋಪಿಯನ್ನು ದಿಬ್ರುಗಢ ಸೆಂಟ್ರಲ್ ಜೈಲಿಗೆ ಕರೆದೊಯ್ಯಲಾಯಿತು. ಆದರೆ, ಪಂಜಾಬ್ನಲ್ಲಿ ಬಂಧಿಸಲಾದ ಅವರನ್ನು ಅಸ್ಸಾಂನ ಜೈಲಿಗೆ ಏಕೆ ರವಾನಿಸಲಾಗಿದೆ ಎಂಬುದೇ ಕುತೂಹಲಕರ ವಿಷಯವಾಗಿದೆ.
ಅಸ್ಸಾಂನ ದಿಬ್ರುಗಢ ಸೆಂಟ್ರಲ್ ಜೈಲು ಈಶಾನ್ಯದಲ್ಲಿರುವ ಅತ್ಯಂತ ಹಳೆಯ ಮತ್ತು ಅತ್ಯಂತ ಸುರಕ್ಷಿತ ಜೈಲುಗಳಲ್ಲಿ ಒಂದಾಗಿದೆ. ಇಲ್ಲಿಯೇ ಅಮೃತ್ಪಾಲ್ ಸಿಂಗ್ ಅವರ ಎಂಟು ಸಹಾಯಕರನ್ನು ಈಗಾಗಲೇ ಅತ್ಯಂತ ಸುರಕ್ಷಿತ ಜೈಲಿನಲ್ಲಿ ಬಂಧಿಸಿ ಇಡಲಾಗಿದೆ.

ಅಮೃತ್ಪಾಲ್ ಸಿಂಗ್ ಮತ್ತು ಅವರ ಸಹಾಯಕರನ್ನು ದೇಶದ ಇನ್ನೊಂದು ತುದಿಯ ಜೈಲಿಗೆ ಹಾಕಲು ಕಾರಣವೆಂದರೆ ಉತ್ತರ ಭಾರತದ ಜೈಲುಗಳು ಆರೋಪಿಯೊಂದಿಗೆ ಅಥವಾ ಪ್ರತ್ಯೇಕತಾವಾದಿ ಚಳವಳಿಯೊಂದಿಗೆ ಸಂಬಂಧ ಹೊಂದಿರುವ ಗ್ಯಾಂಗ್ಸ್ಟರ್ಗಳನ್ನು ಹೊಂದಿರುವ ಸಾಧ್ಯತೆಯಿದೆ. ಹೀಗಾಗಿಯೇ ಇವರನ್ನು ಅಸ್ಸಾಂ ಜೈಲಿಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿಗಳು ಇತರ ಕೈದಿಗಳು ಮತ್ತು ಜೈಲು ಸಿಬ್ಬಂದಿಗಳೊಂದಿಗೆ ಸಂಪರ್ಕ ಸಾಧಿಸುವುದನ್ನು ತಡೆಯಲು ಈಗ ಭಾಷೆಯ ತಡೆಗೋಡೆ ಉಂಟಾಗಲಿದೆ ಎಂಬುದು ಮತ್ತೊಂದು ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಅಸ್ಸಾಂನ ದಿಬ್ರುಗಢವು ಅತ್ಯಂತ ಸುರಕ್ಷಿತ ಜೈಲು. ಇದಲ್ಲದೆ, ಸ್ಥಳೀಯ ಸಿಖ್ ಸಮುದಾಯವು ಖಲಿಸ್ತಾನ್ ಚಳವಳಿಯ ಬಗ್ಗೆ ಸಹಾನುಭೂತಿ ಹೊಂದಿಲ್ಲ ಎಂದು ಮೂಲಗಳು ದೃಢಪಡಿಸಿವೆ.
ದಿಬ್ರುಗಢ ಜೈಲು ತನ್ನ ಸುಮಾರು 170 ವರ್ಷಗಳ ಇತಿಹಾಸದಲ್ಲಿ ಎಂದಿಗೂ ಆರೋಪಿಗಳು ತಪ್ಪಿಸಿಕೊಂಡ ಪ್ರಕರಣಗಳಿಗೆ ಸಾಕ್ಷಿಯಾಗಿಲ್ಲ. ಹೀಗಾಗಿಯೇ ಇದು ದೇಶದ ಅತ್ಯಂತ ಸುರಕ್ಷಿತ ಜೈಲು ಎಂಬ ಖ್ಯಾತಿಯನ್ನು ಪಡೆದಿದೆ. ದಿಬ್ರುಗಢ್ ಪಟ್ಟಣದ ಮಧ್ಯಭಾಗದಲ್ಲಿರುವ ಜೈಲಿನ ಆಯಕಟ್ಟಿನ ಸ್ಥಳವು ಯಾವುದೇ ಅಪರಾಧಿ, ಆರೋಪಿ ತಪ್ಪಿಸಿಕೊಳ್ಳುವ ಪ್ರಯತ್ನಗಳನ್ನು ತಡೆಯಲು ಅಧಿಕಾರಿಗಳಿಗೆ ಅನುಕೂಲವಾಗಿದೆ.
ಮಾರ್ಚ್ 19 ರಿಂದ 'ವಾರಿಸ್ ಪಂಜಾಬ್ ದೆ (WPD)'ಯ ನಾಲ್ವರು ಸದಸ್ಯರನ್ನು ಕರೆತಂದ ನಂತರ ಜೈಲಿನ ಆವರಣದ ಸುತ್ತಲೂ ಭದ್ರತೆಯನ್ನು ಬಲಪಡಿಸಲಾಗಿದೆ. ಈಗ, ಜೈಲು 24 ಗಂಟೆಗಳು ಕಾರ್ಯ ನಿರ್ವಹಿಸುವ ಮೂರು ಹಂತದ ಪಾಳಿಯಲ್ಲಿ ಭದ್ರತೆಯನ್ನು ಹೊಂದಿದೆ ಎಂದು ವರದಿಯಾಗಿದೆ.
"ಜೈಲು ಆವರಣವನ್ನು ಅಸ್ಸಾಂ ಪೊಲೀಸರ ಗಣ್ಯ ಬ್ಲ್ಯಾಕ್ ಕ್ಯಾಟ್ ಕಮಾಂಡೋಗಳು, ಸಿಆರ್ಪಿಎಫ್ ಮತ್ತು ಇತರ ಭದ್ರತಾ ಸಿಬ್ಬಂದಿ ಸುತ್ತುವರೆದಿದ್ದಾರೆ" ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಇದಲ್ಲದೆ, ಅಮೃತ್ಪಾಲ್ ಸಿಂಗ್ ಅವರ ಸಹಾಯಕರನ್ನು ಹೊಂದಿರುವ ಸೆಲ್ಗಳ ಮುಂದೆ ಹೊಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಯಾಮೆರಾಗಳನ್ನು ಸಹ ಸರಿಪಡಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ಮಾಹಿತಿ ನೀಡಿವೆ.
ಭಟಿಂಡಾದಿಂದ ದಿಬ್ರುಗಢ ವಿಮಾನ ನಿಲ್ದಾಣಕ್ಕೆ ಭಾರೀ ಭದ್ರತೆಯ ಬೆಂಗಾವಲು ಪಡೆ ಅಮೃತ್ಪಾಲ್ ಸಿಂಗ್ ಅವರೊಂದಿಗೆ ಕಾರಾಗೃಹವನ್ನು ತಲುಪಿತ್ತು. ಕೇಂದ್ರ ಕಾರಾಗೃಹದಲ್ಲಿ ಬಹು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
1860 ರಲ್ಲಿ ಬ್ರಿಟಿಷರು ನಿರ್ಮಿಸಿದ ಈ ಜೈಲಿನಲ್ಲಿ 680 ಖೈದಿಗಳ ಸಂಖ್ಯೆಯಿದೆ. ಅಸ್ಸಾಂ ಸರ್ಕಾರವು ಬಿಡುಗಡೆ ಮಾಡುವ ಪಾಕ್ಷಿಕ ಜೈಲು ಜನಸಂಖ್ಯೆಯ ದಾಖಲೆಗಳ ಪ್ರಕಾರ. ದಿಬ್ರುಗಢ ಜೈಲು ಪ್ರಸ್ತುತ ರಾಜ್ಯದ ಮೂರನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಕೇಂದ್ರ ಕಾರಾಗೃಹವಾಗಿದ್ದು, ಗುವಾಹಟಿ ಮತ್ತು ತೇಜ್ಪುರದಲ್ಲಿರುವ ಕೇಂದ್ರ ಕಾರಾಗೃಹಗಳನ್ನು ಮೀರಿಸಿದೆ.
ದಿಬ್ರುಗಢ್ ಕೇಂದ್ರ ಕಾರಾಗೃಹವು ಐತಿಹಾಸಿಕವಾಗಿ ಅಸ್ಸಾಂನ ಉಲ್ಫಾ ದಂಗೆಯ ಕೇಂದ್ರವಾಗಿತ್ತು. ಉಲ್ಫಾ ದಂಗೆಯ ಹಲವಾರು ಹಿರಿಯ ನಾಯಕರನ್ನು ಅಲ್ಲಿ ಬಂಧಿಸಲಾಗಿತ್ತು.
ಅಮೃತ್ಪಾಲ್ ಸಿಂಗ್ ಮತ್ತು ಅವರ ಸಹಚರರ ಮೇಲೆ ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವುದು, ಕೊಲೆ ಯತ್ನ, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಸಾರ್ವಜನಿಕ ಸಿಬ್ಬಂದಿಗೆ ಕಾನೂನುಬದ್ಧ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವುದು ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications