ಅಮೃತಸರದಲ್ಲಿ ಶಿವಸೇನೆ ನಾಯಕ ಹತ್ಯೆ ಪ್ರಕರಣ: ಎಸ್ಎಫ್ಜೆಯಿಂದ ಆರೋಪಿ ರಕ್ಷಣೆ
ಅಮೃತಸರ, ನವೆಂಬರ್ 6: ಅಮೃತಸರದಲ್ಲಿ ಶಿವಸೇನೆ ನಾಯಕನನ್ನು ಗುಂಡಿಕ್ಕಿ ಕೊಂದ ವ್ಯಕ್ತಿಯನ್ನು ರಕ್ಷಿಸಲು ಸಿಖ್ ಪ್ರತ್ಯೇಕತಾವಾದಿ ಗುಂಪು ಮುಂದಾಗಿದೆ. ಪಂಜಾಬ್ನ ಅಮೃತಸರದಲ್ಲಿ ಶಿವಸೇನಾ ನಾಯಕ ಸುಧೀರ್ ಸೂರಿ ಅವರನ್ನು ಗುಂಡಿಕ್ಕಿ ಕೊಂದ ವ್ಯಕ್ತಿಯನ್ನು ರಕ್ಷಿಸಲು ಪ್ರತ್ಯೇಕತಾವಾದಿ ಗುಂಪು ಸಿಖ್ಸ್ ಫಾರ್ ಜಸ್ಟೀಸ್ ಅಥವಾ ಎಸ್ಎಫ್ಜೆ 10 ಲಕ್ಷ ರೂಪಾಯಿಗಳ ಕಾನೂನು ನೆರವು ಘೋಷಿಸಿದೆ.
ಅಮೃತ್ಸರದ ದೇವಾಲಯದ ಹೊರಗಡೆ ಪ್ರತಿಭಟನೆಯಲ್ಲಿ ನಿರತರಾಗಿದ್ದ ಸಂದೀಪ್ ಸಿಂಗ್ (31) ಶಿವಸೇನೆ ನಾಯಕನನ್ನು ಶುಕ್ರವಾರ (ನವೆಂಬರ್ 4) ಗುಂಡಿಕ್ಕಿ ಕೊಲ್ಲಲಾಗಿತ್ತು. ಹಿಂದೂ ವಿಗ್ರಹಗಳು ಮತ್ತು ಚಿತ್ರಗಳನ್ನು ಕಸದ ತೊಟ್ಟಿಗೆ ಹಾಕಿದ ಆರೋಪದ ಮೇಲೆ ದೇವಸ್ಥಾನದ ಹೊರಗೆ ಧರಣಿ ಸುಧೀರ್ ಸೂರಿ ಅವರು ಪ್ರತಿಭಟನೆಗೆ ನಡೆಸಿದ್ದರು. ಈ ವೇಳೆ ಸುಧೀರ್ ಸೂರಿ ಮೇಲೆ ಗುಂಡು ಹಾರಿಸಲಾಗಿತ್ತು. SFJ (Sikhs for Justice) ಸೂರಿಯ ಗುಂಡಿನ ದಾಳಿಯನ್ನು "ಹತ್ಯೆ" ಎಂದು ಕರೆದಿದೆ. ಜೊತೆಗೆ ಇದು "ಭಯೋತ್ಪಾದನೆ" ಅಲ್ಲ ಎಂದಿದೆ.

ಸಿಖ್ ಪ್ರತ್ಯೇಕತಾವಾದಿ ಗುಂಪಿನಿಂದ ಆರೋಪಿ ರಕ್ಷಣೆ
ಶುಕ್ರವಾರ ಜನನಿಬಿಡ ಅಮೃತಸರ ಪ್ರದೇಶದಲ್ಲಿ ದೇವಸ್ಥಾನದ ಹೊರಗೆ ನಡೆದ ಪ್ರತಿಭಟನೆಯಲ್ಲಿ ಶಿವಸೇನಾ ನಾಯಕ ಸುಧೀರ್ ಸೂರಿ (58) ಮೇಲೆ ಐದು ಗುಂಡು ಹಾರಿಸಲಾಯಿತು. ಗುಂಡು ತಗುಲಿ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ತೀವ್ರವಾಗಿ ಗಾಯಗೊಂಡಿದ್ದರು.
ನಗರದ ಅತ್ಯಂತ ಜನನಿಬಿಡ ಸ್ಥಳಗಳಲ್ಲಿ ಒಂದಾದ ಮಜಿತಾ ರಸ್ತೆಯಲ್ಲಿರುವ ಗೋಪಾಲ್ ಮಂದಿರದ ನಿರ್ವಹಣೆಯ ವಿರುದ್ಧ ಸೂರಿ ಪ್ರತಿಭಟಿಸಿದ್ದು, ರಸ್ತೆಬದಿಯಲ್ಲಿ ಕೆಲವು ಒಡೆದ ಹಿಂದೂ ದೇವತೆಗಳ ವಿಗ್ರಹಗಳು ಪತ್ತೆಯಗಿದ್ದು ಅದನ್ನು ಅವರು ಅಪವಿತ್ರ ಕೃತ್ಯ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು.

ಪಾಯಿಂಟ್ 32 ಪಿಸ್ತೂಲ್ ವಶ
ಆರೋಪಿ ಸಂದೀಪ್ ಸಿಂಗ್ನನ್ನು ಬಂಧಿಸಲಾಗಿದ್ದು, ದಾಳಿಗೆ ಬಳಸಿದ ಪರವಾನಗಿ ಹೊಂದಿರುವ ಪಾಯಿಂಟ್ 32 (.32) ಪಿಸ್ತೂಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂದೀಪ್ ಸಿಂಗ್ ಬಟ್ಟೆ ಅಂಗಡಿ ಮಾಲೀಕನಾಗಿದ್ದು, ಆತನ ವಿಚಾರಣೆ ಮುಂದುವರಿದಿದೆ. ಹತ್ಯೆ ಆರೋಪಿಯು ಸುಧೀರ್ ಸೂರಿ ಅವರನ್ನು ಈ ಹಿಂದೆ ಯಾವತ್ತೂ ಭೇಟಿಯಾಗಿರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಡಿಜಿಪಿ ಗೌರವ್ ಯಾದವ್ ಹೇಳಿದ್ದಾರೆ. ಗೋಪಾಲ್ ಮಂದಿರದ ಆಡಳಿತದ ವಿರುದ್ಧ ಅತ್ಯಂತ ದಟ್ಟಣೆಯ ಮಜಿಟಾ ರಸ್ತೆಯಲ್ಲಿ ಸುಧೀರ್ ಸೂರಿ ಪ್ರತಿಭಟನೆ ನಡೆಸುತ್ತಿದ್ದರು. ಹಿಂದು ದೇವರುಗಳ ಭಗ್ನಗೊಂಡ ಮೂರ್ತಿಗಳು ರಸ್ತೆ ಬದಿಗಳಲ್ಲಿ ಪತ್ತೆಯಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ಕೈಗೊಳ್ಳಲಾಗಿತ್ತು.

ಎಂಟು ಪೊಲೀಸ್ ಸಿಬ್ಬಂದಿ ಭದ್ರತೆ
ಶಿವಸೇನಾ ಮುಖಂಡ ಸುಧಿರ್ ಸೂರಿ ಅವರ ಹೆಸರು ಹಲವು ಗ್ಯಾಂಗ್ಸ್ಟರ್ಗಳ ಹಿಟ್ಲಿಸ್ಟ್ ಪಟ್ಟಿಯಲ್ಲಿತ್ತು. ಅವರಿಗೆ ಪಂಜಾಬ್ ಸರಕಾರದಿಂದ ಎಂಟು ಪೊಲೀಸ್ ಸಿಬ್ಬಂದಿ ಒಳಗೊಂಡ ಭದ್ರತೆ ನೀಡಲಾಗಿತ್ತು. ಗುಂಡೇಟು ಬೀಳುವುದಕ್ಕೆ ಕೆಲ ಸಮಯದ ಮುಂಚೆ ಅವರು ಪ್ರತಿಭಟನೆಯ ಕಾರಣವನ್ನು ಪೊಲೀಸರಿಗೆ ವಿವರಿಸುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೊ ತುಣುಕಿನಲ್ಲಿ ಕಾಣಬಹುದು.

ಗುಂಪುಗಳ ನಡುವೆ ದ್ವೇಷ
ಸಿಖ್ ಮೂಲಭೂತವಾದಿಗಳ ವಿರುದ್ಧ ದನಿ ಎತ್ತುವ ಮೂಲಕ ಸುಧಿರ್ ಸೂರಿ ಈ ಹಿಂದೆ ವಿವಾದಗಳಿಗೆ ಸಿಲುಕಿದ್ದರು. ಮಹಿಳೆಯನ್ನು ನಿಂದಿಸಿರುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವ ಕುರಿತು ವಿಡಿಯೊಗೆ ಸಂಬಂಧಿಸಿದಂತೆ ಎರಡು ವರ್ಷಗಳಿಗೂ ಹಿಂದೆ ಪಂಜಾಬ್ ಪೊಲೀಸರು ಅವರನ್ನು ಮಧ್ಯ ಪ್ರದೇಶದ ಇಂದೋರ್ನಿಂದ ಬಂಧಿಸಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications