ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್ಮಿ ನಿಂದಿಸಿದ ಹಿಜ್ಬುಲ್ ಸಂಘಟನೆ ಸೇರಿದ ಸಂಶೋಧನಾ ವಿದ್ಯಾರ್ಥಿ!

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಜನವರಿ 09: ಕಾಶ್ಮೀರದ ಯುವಕರಿಗೆ ಭಾರತೀಯ ಸೇನೆ ಹೇಗೆ ಕಿರುಕುಳ ನೀಡುತ್ತಿದೆ ಎಂದು 2017ರ ನವೆಂಬರ್ ತಿಂಗಳಿನಲ್ಲಿ ಕಿಡಿಕಾರಿ, ನಾಪತ್ತೆಯಾಗಿದ್ದ ಯುವಕ ಈಗ ಉಗ್ರ ಸಂಘಟನೆಯ ಪಾಲಾಗಿದ್ದಾನೆ.

ಅಲಿಗಢ ಮುಸ್ಲಿಂ ಯೂನಿವರ್ಸಿಟಿಯ ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿ ಮನನ್ ಬಶೀರ್ ವಾನಿ ಈಗ ಕೈಯಲ್ಲಿ ಗನ್ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯಕ್ಷನಾಗಿದ್ದಾನೆ. ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಸೇರಿರುವ ಮಾಹಿತಿ ಸಿಕ್ಕಿದೆ.

ಕಾಶ್ಮೀರ: ಭಯೋತ್ಪಾದಕರಿಂದ ಐಇಡಿ ಸ್ಫೋಟ, ಮೂವರು ಪೊಲೀಸರು ಸಾವುಕಾಶ್ಮೀರ: ಭಯೋತ್ಪಾದಕರಿಂದ ಐಇಡಿ ಸ್ಫೋಟ, ಮೂವರು ಪೊಲೀಸರು ಸಾವು

ಭೂವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಮನನ್, ಎಕೆ 47 ಹಿಡಿದಿರುವ ಫೋಟೋ ವೈರಲ್ ಆಗಿತ್ತು. ನಮ್ಮ ಸಂಘಟನೆ ಸೇರುವ ಮೂಲಕ ಸ್ವಾತಂತ್ರ್ಯ ಹೋರಾಟ ಮುಂದುವರಿಸುತ್ತಾರೆ ಎಂದು ಹಿಜ್ಬುಲ್ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಲುದ್ದೀನ್ ಹೇಳಿದ್ದಾನೆ.

AMU research scholar who joined Hizbul had blamed Army in a November post

ಜಲ ಪ್ರಳಯದ ವೇಳೆ ರಕ್ಷಣಾ ಕಾರ್ಯ ಹೇಗೆ ಕೈಗೊಳ್ಳಬೇಕು ಎಂಬುದರ ಬಗ್ಗೆ ಮನನ್ ಮಂಡಿಸಿದ್ದ ವರದಿ ಕಾಲೇಜಿನಲ್ಲಿ ಎಲ್ಲರ ಮೆಚ್ಚುಗೆ ಪಡೆದಿತ್ತು. ಎರಡು ವರ್ಷಗಳ ಹಿಂದೆ ಭೋಪಾಲ್ ನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥಮ ಬಹುಮಾನ ಗಳಿಸಿದ್ದ. ಆದರೆ, ಈಗ ಉಗ್ರ ಸಂಘಟನೆ ಸೇರಿದ್ದಾನೆ. ಮನನ್ ನಿರ್ಧಾರದಿಂದ ಆತನ ತಾಯಿ ಮತ್ತು ಸಹೋದರಿ ಆಘಾತಕ್ಕೊಳಗಾಗಿದ್ದಾರೆ.

English summary
In the month of November 2017, there was a post on the social media about how a youth from Kashmir had been harassed by the Indian Army. It was a posting by Mannan Wani, the research scholar from the Aligarh Muslim University
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X