ವಿಶ್ವದ ಅತ್ಯಂತ ದುಬಾರಿ ಮಾವು ಬೆಳೆದ ರೈತ!, ಅದರ ಬೆಲೆ 3 ಲಕ್ಷ ರೂ.
ಕಾಳಹಂದಿ, ಜುಲೈ 27: ಈಗ ದೇಶಾದ್ಯಂತ ದುಬಾರಿ ಎಂದರೆ ಟೊಮೇಟೊ ಎಂದು ಎಲ್ಲರು ಹೇಳುತ್ತಿದ್ದಾರೆ. ಆದರೆ ಇದಕ್ಕಿಂತಲೂ ದುಬಾರಿ ಹಣ್ಣು ಇಲ್ಲಿದೆ. ಅದನ್ನು ರೈತರೊಬ್ಬರು ಬೆಳೆದಿದ್ದಾರೆ. ಅದು ಏನು ಅದರ ಬಗ್ಗೆ ತಿಳಿಯೋಣ ಬನ್ನಿ.
ಒಡಿಶಾದ ಕಲಹಂಡಿ ಜಿಲ್ಲೆಯ ರೈತ ಮತ್ತು ಶಿಕ್ಷಕರೂ ಆಗಿರುವ ರಕ್ಷ್ಯಕರ್ ಭೋಯ್ ಅವರು ತಮ್ಮ ತೋಟದಲ್ಲಿ ವಿಶ್ವದ ಅತ್ಯಂತ ದುಬಾರಿ ಮಾವಿನ ಮಿಯಾಜಾಕಿ ಅನ್ನು ಬೆಳೆದಿರುವುದಾಗಿ ಹೇಳಿದ್ದಾರೆ. ಮಿಯಾಝಾಕಿ ಮಾವಿನ ವಿಶಿಷ್ಟ ರುಚಿ ಮತ್ತು ಆಹಾರದ ಮೌಲ್ಯಕ್ಕಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 2.5 ಲಕ್ಷದಿಂದ 3 ಲಕ್ಷ ರೂ. ಬೆಲೆ ಇದೆ.

ಈ ದುಬಾರಿ ಮಾವನ್ನು ರೈತ ರಕ್ಷ್ಯಕರ್ ಭೋಯ್ ತಮ್ಮ ಜಮೀನಿನಲ್ಲಿ ವಿವಿಧ ತಳಿಯ ಮಾವನ್ನು ಬೆಳೆಯುತ್ತಿದ್ದಾರೆ. ರಾಜ್ಯ ತೋಟಗಾರಿಕಾ ಇಲಾಖೆ ಮೂಲಕ ಅದರ ಬೀಜವನ್ನು ಪಡೆದ ನಂತರ ಅವರು ತಮ್ಮ ತೋಟದಲ್ಲಿ ಮಿಯಾಜಾಕಿ ತಳಿಯನ್ನು ಬೆಳೆಯಲು ಆರಂಭಿಸಿದ್ದಾರೆ.
ಮಿಯಾಜಾಕಿ ಪ್ರಭೇದವು ಮೂಲತಃ ಜಪಾನಿನ ತಳಿಯಾಗಿದೆ. ಅದರ ವಿಶಿಷ್ಟ ಸುವಾಸನೆ ಮತ್ತು ಔಷಧೀಯ ಮೌಲ್ಯಕ್ಕಾಗಿ ಇದು ವಿದೇಶಗಳಲ್ಲಿ ಭಾರಿ ಬೇಡಿಕೆಯನ್ನು ಹೊಂದಿದೆ. ಈ ವಿಧದ ಮಾವು ಅದರ ನೋಟದಲ್ಲಿ ತುಂಬಾ ವರ್ಣರಂಜಿತವಾಗಿದೆ. ಮಾತ್ರವಲ್ಲದೇ ವಿಶಿಷ್ಟ ರುಚಿಯನ್ನು ಹೊಂದಿದೆ. ಇದು ಇತರ ಮಾವಿನ ತಳಿಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ.
ಏಕೆಂದರೆ ಇದರಲ್ಲಿ ವಿಟಮಿನ್ ಎ ಮತ್ತು ಸಿ ಮತ್ತು ಆಂಟಿಆಕ್ಸಿಡೆಂಟ್ಗಳು ಅಧಿಕವಾಗಿವೆ. ಇದು ದೇಹವನ್ನು ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಮತ್ತು ಒಟ್ಟಾರೆ ಆರೋಗ್ಯವನ್ನು ಉತ್ತೇಜಿಸುತ್ತದೆ. ಇದರಲ್ಲಿ ಆಹಾರದ ನಾರು, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಕೂಡ ಇದೆ ಎಂದು ರಕ್ಷ್ಯಕರ್ ಭೋಯ್ ಹೇಳಿದರು.
ಕಲಹಂಡಿ ಸಹಾಯಕ ತೋಟಗಾರಿಕಾ ನಿರ್ದೇಶಕ ಟಂಕಧರ ಕಾಳೋ ಮಾತನಾಡಿ, ಈ ರೀತಿಯ ಮಾವುಗಳಿಗೆ ಹೆಚ್ಚಿನ ಸಂಶೋಧನೆ ಅಗತ್ಯವಿದೆ. ಮಿಯಾಝಾಕಿಯನ್ನು 'ಕೆಂಪು ಸೂರ್ಯ' ಮತ್ತು ಬಂಗಾಳಿಯಲ್ಲಿ 'ಸುರ್ಜಾ ಡಿಮ್' (ಕೆಂಪು ಮೊಟ್ಟೆ) ಎಂದೂ ಕರೆಯಲಾಗುತ್ತದೆ ಎಂದು ತಿಳಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications