ಅಪ್ಪನ ಹಾದಿ ಹಿಡಿದ ಜಗನ್, 3 ಸಾವಿರ ಕಿ.ಮೀ ಪಾದಯಾತ್ರೆ
ಅನಂತಪುರ, ಅಕ್ಟೋಬರ್ 30:ಆಂಧ್ರಪ್ರದೇಶದ ಮಾಜಿ ಸಿಎಂ, ದಿವಂಗತ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರ ಪಕ್ಷದ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ರಾಜಕೀಯ ನೆಲೆ ಕಂಡುಕೊಳ್ಳಲು ಮತ್ತೆ ಜನರ ಬಳಿಗೆ ಮರಳುತ್ತಿದ್ದಾರೆ. ಅಪ್ಪನ ಹಾದಿಯಲ್ಲೇ ಸಾಗಲು ನಿರ್ಧರಿಸಿರುವ ಜಗನ್ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಸಾರ್ ಕಾಂಗ್ರೆಸ್ ಅಧಿಪತ್ಯ ಹೊಂದಿರುವ ರಾಯಲ ಸೀಮೆಯ ಕಡಪ, ಕರ್ನೂಲ್, ನೆಲ್ಲೂರು ಜಿಲ್ಲೆಗಳ ಮೇಲೆ ಟಿಡಿಪಿ ತನ್ನ ಬಾವುಟ ಹಾರಿಸಿರುವುದನ್ನು ಇಲ್ಲಿ ಮರೆಯುವಂತಿಲ್ಲ.

ಈಗ ಕಡಪ ಜಿಲ್ಲೆಯ ಇಡುಪುಲಪಾಯದಿಂದ ಇಚ್ಚಾಪುರಂ ತನಕ ಸುಮಾರು 3,000 ಕಿ.ಮೀ ದೂರದವರೆಗೂ ನವೆಂಬರ್ 6ರಂದು ಪ್ರಜಾ ಸಂಕಲ್ಪ ಪಾದಯಾತ್ರೆಯನ್ನು ವೈಎಸ್ಸಾರ್ ಕಾಂಗ್ರೆಸ್ ಹಮ್ಮಿಕೊಂಡಿದ್ದಾರೆ.
ಪಾದಯಾತ್ರೆ ಮೂಲಕ ಜನಮನಗೆದ್ದು ರಾಜಶೇಖರ ರೆಡ್ಡಿ ಅವರು ಅಧಿಕಾರಕ್ಕೇರಿದ್ದು ಈಗ ಇತಿಹಾಸ. ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪರ ನಿಂತ ಜಗನ್ ಗೆ ಈಗ ಕೇಂದ್ರದ ಮೋದಿ ಸರ್ಕಾರದಿಂದ ಯಾವುದೇ ನೆರವು ಸಿಗುವ ಭರವಸೆ ಇಲ್ಲ.
ಜಗನ್ ಅವರ ರಾಜಕೀಯ ಸಲಹೆಗಾರ, ರಾಯಲಸೀಮೆಯ ಪ್ರಮುಖ ನಾಯಕ ಸಜ್ಜಲ ರಾಮಕೃಷ್ಣ ರೆಡ್ಡಿ, ಹಿರಿಯ ನಾಯಕರಾದ ವೈಎಸ್ ವಿವೇಕಾನಂದ ರೆಡ್ಡಿ, ಸಂಸದ ವೈಎಸ್ ಅವಿನಾಶ್ ರೆಡ್ಡಿ ಎಲ್ಲರೂ ಖುದ್ದು ಈ ಪಾದಯಾತ್ರೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ.
ವೈಎಸ್ ರಾಜಶೇಖರ್ ರೆಡ್ಡಿಗೆ ಸಮಾಧಿಗೆ ನಮಿಸಿ ಪಾದಯಾತ್ರೆ ಆರಂಭಿಸಲಿರುವ ಜಗನ್, ಮಾರ್ಗ ಮಧ್ಯದಲ್ಲಿ ಕಡಪ ದರ್ಗಾ, ಪುಲಿವೆಂದಲ ಚರ್ಚ್ ಗಳಿಗೂ ಭೇಟಿ ನೀಡಲಿದ್ದಾರೆ. 2019ರ ಚುನಾವಣೆ ಪ್ರಚಾರಕ್ಕೆ ಮುನ್ನುಡಿ ಬರೆಯಲಿರುವ ಈ ಪಾದಯಾತ್ರೆ ನಂತರ ಮುಂದಿನ 6 ತಿಂಗಳುಗಳಲ್ಲಿ 125 ಕ್ಷೇತ್ರಗಳಲ್ಲಿ ಸುಮಾರು 5000ಕ್ಕೂ ಅಧಿಕ ರಸ್ತೆ ಬದಿ ಸಭೆಗಳು, 125 ಸಾರ್ವಜನಿಕ ಬೃಹತ್ ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications