ಸಂವಿಧಾನ ಬದಲಾವಣೆ ಹೇಳಿಕೆ : ಕ್ಷಮೆ ಕೋರಿದ ಅನಂತ್ ಕುಮಾರ್ ಹೆಗ್ಡೆ
ನವದೆಹಲಿ, ಡಿಸೆಂಬರ್ 28 : 'ಸಂವಿಧಾನ ಬದಲಾವಣೆ ಮಾಡಲು ಅಧಿಕಾರಕ್ಕೆ ಬಂದಿದ್ದೇವೆ' ಎಂಬ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಸಚಿವರು ಈಗ ಹೇಳಿಕೆ ಬಗ್ಗೆ ಕ್ಷಮೆ ಯಾಚನೆ ಮಾಡಿದ್ದಾರೆ.
ರಾಹುಲ್ ನೇತೃತ್ವದಲ್ಲಿ ಸಂಸದ ಅನಂತ್ ವಿರುದ್ಧ ಪ್ರತಿಭಟನೆ
ಗುರುವಾರ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರು, 'ತಮ್ಮ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುವೆ' ಎಂದು ಹೇಳಿದರು.
ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಂಸತ್ತಿನಲ್ಲಿ ಕಿಡಿಕಾರಿದ ಕಾಂಗ್ರೆಸ್
'ಸಂವಿಧಾನ, ಸಂಸತ್ತು ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಇದರ ಬಗ್ಗೆ ಯಾವುದೇ ಪ್ರಶ್ನೆ ಬೇಡ. ದೇಶದ ಪ್ರಜೆಯಾಗಿ ನಾನು ಇದರ ವಿರುದ್ಧ ಹೋಗುವುದಿಲ್ಲ' ಎಂದು ಲೋಕಸಭೆಯಲ್ಲಿ ಸಚಿವರು ಹೇಳಿದರು.
'ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುವೆ' ಎಂಬ ಸಚಿವರ ಹೇಳಿಕೆಗೆ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಜಾತ್ಯಾತೀತರು ಅಪ್ಪ- ಅಮ್ಮನ ರಕ್ತದ ಗುರುತಿಲ್ಲದವರು: ಅನಂತಕುಮಾರ್ ಹೆಗಡೆ
ಸಂಸತ್ ಭವನದ ಗಾಂಧಿ ಪ್ರತಿಮೆ ಮುಂದೆ ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದರು ಪ್ರತಿಭಟನೆ ನಡೆಸಿದರು. ಅನಂತ್ ಕುಮಾರ್ ಹೆಗ್ಡೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕಲಾಪಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, 'ಸಂವಿಧಾನ, ಸಂಸತ್ತು ನನಗೆ ಪವಿತ್ರವಾದದ್ದು' ಎಂದು ಹೇಳಿದರು.
I deeply respect the Constitution, the Parliament & Baba Saheb Ambedkar. The Constitution is supreme for me, there can be no question on it, as a citizen I can never go against it: Ananth Kumar Hegde in Lok Sabha
— ANI (@ANI) December 28, 2017
ಡಿಸೆಂಬರ್ 24ರಂದು ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುಕನೂರಿನಲ್ಲಿ ಬ್ರಾಹ್ಮಣ ಮಹಾಸಭಾದ ಯುವ ಸಮಾವೇಶ ಉದ್ದೇಶಿಸಿ ಮಾತನಾಡಿದ ಅನಂತ್ ಕುಮಾರ್ ಹೆಗ್ಡೆ, 'ಹಿಂದೂ ಒಂದು ಸಮಾಜದ ಸ್ವತ್ತಲ್ಲ. ಸಂವಿಧಾನ ಕಾಲ ಕಾಲಕ್ಕೆ ಬದಲಾಗಬೇಕು. ಸಂವಿಧಾನ ಬದಲಾಯಿಸುವುದಕ್ಕೆ ನಾವು ಅಧಿಕಾರಕ್ಕೆ ಬಂದಿರುವುದು' ಎಂದು ಹೇಳಿಕೆ ನೀಡಿದ್ದರು.