ಅಂಡಮಾನ್ ನಲ್ಲಿ ಎರಡು ಗಂಟೆಗಳಲ್ಲಿ 9 ಸಣ್ಣ ಪ್ರಮಾಣದ ಭೂಕಂಪ
ಪೋರ್ಟ್ ಬ್ಲೇರ್, ಏಪ್ರಿಲ್ 01 : ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಎರಡು ಗಂಟೆಗಳ ಅವಧಿಯಲ್ಲಿ ಸಣ್ಣಮಟ್ಟದಿಂದ ಸಾಧಾರಣ ಪ್ರಮಾಣದ 9 ಭೂಕಂಪಗಳು ಸಂಭವಿಸಿವೆ. ಮತ್ತು, ಕಳೆದ ಕೆಲವು ಗಂಟೆಗಳಲ್ಲಿ 20ಕ್ಕೂ ಹೆಚ್ಚು ಬಾರಿ ಭೂಮಿ ಕಂಪಿಸಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸೋಮವಾರ ಬೆಳಗಿನ ಜಾವ, 4.7ರಿಂದ 5.2 ಪ್ರಮಾಣದಲ್ಲಿ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಗರ್ಭಶಾಸ್ತ್ರ ಕೇಂದ್ರ ತಿಳಿಸಿದೆ. ಮೊದಲ ಕಂಪನಿ ಬೆಳಿಗ್ಗೆ 5.14ರ ಸುಮಾರಿಗೆ 4.9 ಪ್ರಮಾಣದಲ್ಲಿ ಸಂಭವಿಸಿತ್ತು. ಕೆಲ ನಿಮಿಷಗಳಲ್ಲಿ ಆದ ಕಂಪನ 5 ಪ್ರಮಾಣದಲ್ಲಿತ್ತು. 6.54ರ ಸುಮಾರಿಗೆ ಸಂಭವಿಸಿದ ಕಂಪನ 5.2 ಪ್ರಮಾಣದಲ್ಲಿತ್ತು.
ಇಲ್ಲಿ ಭೂಕಂಪನವೆಂಬುದು ಸಾಮಾನ್ಯ. ದಿನಕ್ಕೆ 2ರಿಂದ 3 ಇಷ್ಟು ಪ್ರಮಾಣದ ಕಂಪನಗಳು ಸಂಭವಿಸುತ್ತಲೇ ಇರುತ್ತವೆ. ಈ ಸರಣಿ ಕಂಪನದಿಂದ ಇಲ್ಲಿಯವರೆಗೆ ಯಾವುದೇ ನಷ್ಟವಾಗಿಲ್ಲ. ಸುನಾಮಿಯ ಎಚ್ಚರಿಕೆಯನ್ನೂ ನೀಡಲಾಗಿಲ್ಲ.

ಕಳೆದ ಮಾರ್ಚ್ 23ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ 5.1 ಪ್ರಮಾಣದ ಕಂಪನ ಉಂಟಾಗಿತ್ತು. ಕೆಲ ದಿನಗಳ ಹಿಂದೆ ಫೆಬ್ರವರಿ 13ರಂದು 4.5 ಪ್ರಮಾಣದ ಕಂಪನವಾಗಿದೆ ಎಂದು ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು. ಇದೀಗ ಹೆಚ್ಚೂಕಡಿಮೆ ಇದೇ ಪ್ರಮಾಣದ ಸರಣಿ ಕಂಪನಗಳು ಸಂಭವಿಸುತ್ತಿವೆ.
ಡಿಟ್ರಿಯನಮ್ ಎಂಬ ವೆಬ್ ಸೈಟ್ ನಲ್ಲಿ ಭೂಕಂಪದ ಸಂಭವನೀಯತೆಯನ್ನು ಅಧ್ಯಯನ ಮಾಡಿ ವರದಿ ಮಾಡುವ ಫ್ರಾಂಕ್ ಗೂಗರ್ ಬೀಟ್ಸ್ ಎಂಬುವವರು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಸದ್ಯದಲ್ಲಿ 6ರಿಂದ 7 ಪ್ರಮಾಣದ ಭಾರೀ ಭೂಕಂಪ ಸಂಭವಿಸಲಿದೆ ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ. ಆದರೆ, ಈರೀತಿ ಭವಿಷ್ಯ ನುಡಿಯುವುದು ಅಸಾಧ್ಯ ಎಂದು ಭೂಗರ್ಭಶಾಸ್ತ್ರ ತಜ್ಞರು ಫ್ರಾಂಕ್ ಅವರ ಹೇಳಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications