Tirupati laddu controversy: "ಧರ್ಮಪಾಲನೆ" ಜಗನ್ಗೆ ಚಂದ್ರಬಾಬು ನಾಯ್ಡು ಕ್ಲಾಸ್!
ತಿರುಪತಿ ಲಡ್ಡು ವಿವಾದ ಇದೀಗ ತೀವ್ರ ರಾಜಕೀಯ ಸಮರಕ್ಕೆ ಕಾರಣವಾಗಿದೆ. ಈ ವಿವಾದ ಸೃಷ್ಟಿಯಾದ ಮೇಲೆ ಆಂಧ್ರಪ್ರದೇಶ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಏಕಕಾಲಕ್ಕೆ ಆಂಧ್ರದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಯನ್ನು ಟಾರ್ಗೆಟ್ ಮಾಡಿದ್ದಾರೆ. ಇದೀಗ ನನಗೆ ಹಾಗೂ ನನ್ನ ಪಕ್ಷದ ಮುಖಂಡರಿಗೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ಹೋಗದಂತೆ ತಡೆಯಲಾಗುತ್ತಿದೆ ಎಂದು ಜಗನ್ ಆರೋಪಿಸಿದ್ದಾರೆ.
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್ಆರ್ ಕಾಂಗ್ರೆಸ್ನ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಅವರು ಶನಿವಾರ (ಸೆಪ್ಟೆಂಬರ್ 28)ದಂದು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಬೇಕಿತ್ತು. ಆದರೆ, ಬಿಜೆಪಿ ಹಾಗೂ ಆಂಧ್ರದ ಕೆಲವು ಹಿಂದೂಪರ ಸಂಘಟನೆಗಳು ತಿರುಪತಿಗೆ ಬರುವ ಮುನ್ನ ನಿಮ್ಮ ಶ್ರದ್ಧೆಯನ್ನು ಬಹಿರಂಗಪಡಿಸಿ, ದೇವಾಲಯದ ನಿಯಮವನ್ನು ಪಾಲಿಸಿ ಎಂದು ಸವಾಲು ಹಾಕಿದ್ದವು. ಇದರ ಬೆನ್ನಲ್ಲೇ ತಿರುಪತಿ ಭೇಟಿಯಿಂದ ಜಗನ್ ಅವರು ಹಿಂದೆ ಸರಿದಿದ್ದರು. ಆದರೆ, ಇದೀಗ ಚಂದ್ರಬಾಬು ನಾಯ್ಡು ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ತಿರುಪತಿಗೆ ಹೋಗದಂತೆ ನೋಟಿಸ್ ಕೊಟ್ರು
ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುವುದಕ್ಕೆ ಆಂಧ್ರಪ್ರದೇಶದ ಆಡಳಿತರೂಢ ಪಕ್ಷ ತೆಲುಗುದೇಶಂನಿಂದ ತೊಡಕಾಗಿದೆ. ನಾನು ಹಾಗೂ ನನ್ನ ಪಕ್ಷದ ನಾಯಕರು ತಿರುಪತಿ ದೇವಾಲಯಕ್ಕೆ ಭೇಟಿ ನೀಡದಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಗನ್ ಅವರು ಚಂದ್ರಬಾಬು ನಾಯ್ಡು ಅವರ ವಿರುದ್ಧ ಆರೋಪ ಮಾಡಿದ್ದಾರೆ. ಈ ಸಂಬಂಧ ಪೊಲೀಸರಿಂದ ಎಚ್ಚರಿಕೆಯ ನೋಟಿಸ್ ಸಿಕ್ಕಿದೆ ಎಂದು ಅವರು ದೂರಿದ್ದಾರೆ.
ಆದರೆ, ಈ ಆರೋಪವನ್ನು ಚಂದ್ರಬಾಬು ನಾಯ್ಡು ನಿರಾಕರಿಸಿದ್ದು, ಇದು ಶುದ್ಧ ಸುಳ್ಳು ಎಂದಿದ್ದಾರೆ. ಆಯಾ ಧರ್ಮಕ್ಕೆ ಕೆಲವು ನಿಯಮಗಳು ಇರುತ್ತವೆ. ಅದನ್ನು ಎಲ್ಲರೂ ಪಾಲಿಸಬೇಕು ಎಂದು ಚಂದ್ರಬಾಬು ನಾಯ್ಡು ಹೇಳಿದ್ದು. ಒಂದೊಮ್ಮೆ ಆ ರೀತಿ ನೋಟಿಸ್ ನೀಡಿದ್ದರೆ, ಮಾಧ್ಯಮಗಳ ಮುಂದೆ ಜಗನ್ ಅವರು ಅದನ್ನು ಯಾಕೆ ಬಹಿರಂಗಪಡಿಸಿಲ್ಲ ಎಂದು ಚಂದ್ರಬಾಬು ನಾಯ್ಡು ಅವರು ಪ್ರಶ್ನಿಸಿದ್ದಾರೆ.

ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ (ಅನ್ಯ ಧರ್ಮೀಯರು ಹಾಗೂ ವಿದೇಶಿಗರು ಘೋಷಣೆಗೆ ಸಹಿ ಹಾಕುವ ನಿಯಮ ತಿರುಪತಿಯಲ್ಲಿ ಇದೆ) ಶ್ರದ್ಧೆಯನ್ನು ಘೋಷಿಸುವಂತೆ ತೆಲುಗುದೇಶಂ ಪಕ್ಷ ಹಾಗೂ ಬಿಜೆಪಿ ಆಗ್ರಹಿಸಿದ್ದವು. ಆದರೆ, ಇದರ ಬೆನ್ನಲ್ಲೇ ಜಗನ್ ಮೋಹನ್ ಅವರು ತಿರುಪತಿ ಪ್ರವಾಸವನ್ನು ರದ್ದು ಮಾಡಿದ್ದರು. ತಿರುಪತಿ ತಿರುಮಲ ದೇವಸ್ಥಾನಂನ (ಟಿಟಿಡಿ) ನಿಯಮಾನುಸಾರ ತಿರುಪತಿ ತಿರುಮಲ ದೇವಸ್ಥಾನದಲ್ಲಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯುವುದಕ್ಕಿಂತಲು ಮುಂಚೆ ವಿದೇಶಿಗರು ಹಾಗೂ ಅನ್ಯಧರ್ಮೀಯರು (ಹಿಂದೂಯೇತರರು) ಶ್ರೀ ವೆಂಕಟೇಶ್ವರ ಸ್ವಾಮಿಯ ಬಗ್ಗೆ ಭಕ್ತಿ ಗೌರವವನ್ನು ಘೋಷಿಸಿಕೊಳ್ಳಬೇಕು ಎನ್ನುವ ನಿಯಮವಿದೆ. ಈ ಬಗ್ಗೆ ಮಾತನಾಡಿರುವ ಚಂದ್ರಬಾಬು ನಾಯ್ಡು ಅವರು, ಪ್ರತಿ ಧರ್ಮದಲ್ಲೂ ಕೆಲವೊಂದು ನಿಯಮಗಳಿವೆ. ನೀವೂ ಧಾರ್ಮಿಕ ಕೇಂದ್ರವೊಂದಕ್ಕೆ ಭೇಟಿ ನೀಡುತ್ತೀರಿ ಎಂದಾದರೆ, ಕೆಲವು ನಿಯಮಗಳನ್ನು ಪಾಲಿಸಬೇಕು. ಜನರ ನಂಬಿಕೆ ಹಾಗೂ ದೇವರ ಸಂಪ್ರದಾಯದ ವಿಷಯದಲ್ಲಿ ಯಾರೂ ಅಗೌರವ ತೋರಿಸಬಾರದು ಎಂದು ಹೇಳಿದ್ದಾರೆ.
ಜಗನ್ ಮೇಲೆ ಗಂಭೀರ ಆರೋಪ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಜಗನ್ಮೋಹನ್ ಮೇಲೆ ಗಂಭೀರ ಆರೋಪ ಮಾಡುವುದರೊಂದಿಗೆ ತಿರುಪತಿ ಲಡ್ಡು ವಿವಾದ ಪ್ರಾರಂಭವಾಯಿತು. ಆಂಧ್ರಪ್ರದೇಶದ ಪ್ರಸಾದವಾದ ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ. ಇದು ಜಗನ್ ಮೋಹನ್ ರೆಡ್ಡಿ ಆಡಳಿತಾವಧಿಯಲ್ಲಿ ಆಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications