ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಜೀವ ಬೆದರಿಕೆ, ಯಾರಿಂದ?
ಆಂಧ್ರಪ್ರದೇಶದ ಡಿಸಿಎಂ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಇನ್ನು ನಾವು ಪವನ್ ಕಲ್ಯಾಣ್ ಅವರ ಪಕ್ಕದಲ್ಲೇ ಇದ್ದು, ಅವರನ್ನು ಕೊಲ್ಲುವುದಾಗಿ ಅನಾಮಧೇಯರು ಬೆದರಿಕೆ ಹಾಕಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಡಿಸಿಎಂ ಪವನ್ ಕಲ್ಯಾಣ್ ಅವರ ಕಚೇರಿಗೆ ಕರೆ ಮಾಡಿ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ. ಈ ವೇಳೆ ಪವನ್ ಕಲ್ಯಾಣ್ ಅವರು ಕಚೇರಿಯಲ್ಲಿ ಇರಲಿಲ್ಲ ಎನ್ನಲಾಗಿದೆ. ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಲ್ಲದೆ, ಅವಾಚ್ಯ ಶಬ್ಧಗಳನ್ನು ಬಳಸಿ ಸಂದೇಶಗಳನ್ನೂ ಕಳಿಸಿದ್ದಾನೆ.

ಅಲ್ಲದೆ ನಾವು ಪವನ್ ಕಲ್ಯಾಣ್ ಅವರ ಪಕ್ಕದಲ್ಲೇ ಇದ್ದೇವೆ, ಅವರನ್ನು ಕೊಲ್ಲುತ್ತೇವೆ ಎಂದೂ ಬೆದರಿಕೆ ಹಾಕಿದ್ದಾರಂತೆ. ಬೆದರಿಕೆ ಕರೆ ಬಂದ ಹಿನ್ನೆಲೆ ಪವನ್ ಕಲ್ಯಾಣ್ ಅವರ ಕಚೇರಿ ಸಿಬ್ಬಂದಿ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ಈ ವಿಚಾರ ತಂದಿದ್ದಾರೆ. ಬೆದರಿಕೆ ಕರೆ ಸಂಬಂಧ ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಪವನ್ ಕಲ್ಯಾಣ್ ಅವರ ಕಚೇರಿ ಸಿಬ್ಬಂದಿಗೆ ಈ ಬೆದರಿಕೆ ಕರೆ ಹಾಗೂ ಸಂದೇಶಗಳು ಯಾರಿಂದ ಯಾವಾಗ ಬಂದಿದೆ ಎಂಬುದನ್ನು ಪೊಲೀಸರು ಪತ್ತೆ ಮಾಡುತ್ತಿದ್ದಾರೆ. ಪವನ್ ಕಲ್ಯಾಣ್ ಸೇರಿದಂತೆ ಬೇರೆ ಇನ್ಯಾರಿಗಾದರೂ ಇಂತಹ ಬೆದರಿಕೆ ಕರೆಗಳು ಬಂದಿವೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಪವನ್ ಕಲ್ಯಾಣ್ ಅವರಿಗೆ ಜೀವಬೆದರಿಕೆ ಬಂದಿರುವ ವಿಷಯವನ್ನು ಜನಸೇನಾ ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು, ಉಪಮುಖ್ಯಮಂತ್ರಿಯವರ ಭದ್ರತೆಯನ್ನು ಹೆಚ್ಚಿಸುವಂತೆ ತಿಳಿಸಿದೆ. ಅಲ್ಲದೆ ಬೆದರಿಕೆ ಹಾಕಿರುವ ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚುವಂತೆ ಒತ್ತಾಯಿಸಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಉಪ ಮುಖ್ಯಮಂತ್ರಿ ಕಚೇರಿ ಸುತ್ತಮುತ್ತ ಸೆಕ್ಯುರಿಟಿ ಹೆಚ್ಚಿಸಲಾಗಿದೆ.

ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಎಲ್ಲೆಡೆ ಸುದ್ದಿಯಲ್ಲಿದ್ದರು. ಈ ಘಟನೆ ಬಗ್ಗೆ ಖಂಡಿಸಿದ್ದ ಅವರು ಹಿಂದೂ ಸಮುದಾಯದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೆನಡಾ ಸರ್ಕಾರವನ್ನು ಒತ್ತಾಯಿಸಿದ್ದರು. ಸೋಶಿಯಲ್ ಮೀಡಿಯಾ ಪೋಸ್ಟ್ನಲ್ಲಿ ಅವರು ಹಿಂದೂಗಳು ಜಾಗತಿಕ ಅಲ್ಪಸಂಖ್ಯಾತರಾಗಿದ್ದಾರೆ ಎಂದು ಹೇಳಿದ್ದರು.
ಹಿಂದೂಗಳನ್ನು ಎಲ್ಲೆಡೆ ಕಡೆಗಣಿಸಲಾಗುತ್ತಿದೆ. ಇದರಿಂದ ಅವರು ಸುಲಭವಾಗಿ ಗುರಿಯಾಗುತ್ತಿದ್ದಾರೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಂತಹ ದೇಶಗಳಲ್ಲಿ ಹಿಂದೂಗಳು ಎದುರಿಸುತ್ತಿರುವ ಶೋಷಣೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು. ಶಾಂತಿ ಮತ್ತು ಐಕ್ಯತೆಯನ್ನು ಗೌರವಿಸುವ ಮಾನವೀಯತೆ ಎಲ್ಲರಿಗೂ ಅಗತ್ಯ ಎಂದು ಪವನ್ ಕಲ್ಯಾಣ್ ಹೇಳಿದ್ದರು. ಇದರ ಬೆನ್ನಲ್ಲೇ ಅವರಿಗೆ ಬೆದರಿಕೆ ಕರೆ ಬಂದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಡಿಸಿಎಂ ಆದ ನಂತರ ಅವರು ಎಲ್ಲೆಡೆ ಸುದ್ದಿಯಲ್ಲಿದ್ದಾರೆ. ತಿರುಪತಿಯ ಲಡ್ಡು ವಿವಾದದ ಬಳಿಕವೂ ಅವರ ಹಲವರ ಮೇಲೆ ಕಿಡಿಕಾರಿದ್ದರು. ಇತ್ತೀಚೆಗೆ ಸೀಜ್ ದ ಶಿಪ್ ಎಂದು ಅವರು ನಗುತ್ತಲೇ ನೀಡಿದ್ದ ಆದೇಶದ ಬಗ್ಗೆ ಎಲ್ಲೆಡೆ ಚರ್ಚೆಯಾಗಿತ್ತು. ಈ ಸಾಲು ಎಲ್ಲೆಡೆ ವೈರಲ್ ಆಗಿದ್ದರಿಂದ ಸೀಜ್ ದ ಶಿಪ್ ಹೆಸರಿನಲ್ಲಿ ಸಿನಿಮಾ ಕೂಡ ಬರಲು ಸಜ್ಜಾಗಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications