ವಾಯುಭಾರ ಕುಸಿತ: ಆಂಧ್ರ, ಒಡಿಸ್ಸಾಗೆ ಅಪ್ಪಳಿಸಲಿದೆ 'ತಿತ್ಲಿ' ಚಂಡಮಾರುತ

ಬೆಂಗಳೂರು, ಅಕ್ಟೋಬರ್ 09: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರ ಪ್ರದೇಶ ಹಾಗೂ ಒಡಿಸ್ಸಾ ರಾಜ್ಯಗಳಿಗೆ ಭಾರಿ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ.

ತೀವ್ರವಾದ ವಾಯುಭಾರ ಕುಸಿತ ಇದಾಗಿದ್ದು, ಇದರಿಂದಾಗಿ ಎದ್ದಿರುವ ಚಂಡಮಾರುತವು ಇಂದು ಅಥವಾ ನಾಳೆ (ಅಕ್ಟೋಬರ್‌ 10) ಕ್ಕೆ ಆಂಧ್ರ ಪ್ರದೇಶ ಹಾಗೂ ಒಡಿಸ್ಸಾ ಕರಾವಳಿಯನ್ನು ಪ್ರವೇಶಿಸಲಿದೆ. ಬಂಗಾಳಕೊಲ್ಲಿಯಲ್ಲಿ ಉಗಮವಾಗಿರುವ ಈ ಚಂಡಮಾರುತಕ್ಕೆ 'ಟಿಟ್ಲಿ' ಎಂದು ಹೆಸರು ನೀಡಲಾಗಿದೆ.

ಮಂಗಳವಾರ ಬೆಳಿಗ್ಗೆ, ತೀರದಿಂದ 500 ಕಿ.ಮೀ ದೂರದಲ್ಲಿದ್ದ ಚಂಡಮಾರುತವು 10 ಕಿ.ಮೀ ವೇಗದಲ್ಲಿ ಆಂಧ್ರ ಪ್ರದೇಶ ಹಾಗೂ ಒಡಿಸ್ಸಾ ತೀರದ ಕಡೆ ಚಲಿಸುತ್ತಿತ್ತು. ಆದರೆ ಮುಂದಿನ 24 ಗಂಟೆಗಳಲ್ಲಿ ಅದು ಹೆಚ್ಚಿನ ವೇಗ ಪಡೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Andhra Pradesh and Odissa will het by cyclone Wednesday

ಈ ವಾಯುಭಾರ ಕುಸಿತವು ಆಂಧ್ರ ಪ್ರದೇಶದ ಕರಾವಳಿ ಜಿಲ್ಲೆಗಳು ಹಾಗೂ ಒಡಿಸ್ಸಾದ ಗಂಜಾಂ, ಗಜಪತಿ, ಪುರಿ, ಜಗತ್‌ಸಿಂಗ್‌ಪುರ ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಗೆ ಕಾರಣವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+