YS Sharmila arrested : ಆಂಧ್ರ ಸಿಎಂ ಜಗನ್ ಸಹೋದರಿ ಶರ್ಮಿಳಾ ಬಂಧನ
ಹೈದ್ರಾಬಾದ್, ನವೆಂಬರ್ 28: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಅನ್ನು ಸೋಮವಾರ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಅವರ ಬೆಂಬಲಿಗರು ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಕಾರ್ಯಕರ್ತರ ನಡುವೆ ಘರ್ಷಣೆಯ ನಂತರ ಬಂಧಿಸಲಾಗಿದೆ.
ಶರ್ಮಿಳಾ ಅವರು ತಮ್ಮ ಬೆಂಬಲಿಗರೊಂದಿಗೆ ಪಾದಯಾತ್ರೆ ನಡೆಸುತ್ತಿದ್ದಾಗ ಎರಡು ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ ಭುಗಿಲೆದ್ದಿತು. ಇದೇ ಸಂದರ್ಭದಲ್ಲಿ "ನೀವು ನನ್ನನ್ನು ಏಕೆ ಬಂಧಿಸುತ್ತಿದ್ದೀರಿ. ನಾನು ಇಲ್ಲಿ ಬಲಿಪಶುನಾ," ಎಂದು ಹೇಳುವುದು ಕೇಳಿಸಿತು.
ವೈಎಸ್ಆರ್ ತೆಲಂಗಾಣ ಪಕ್ಷದಿಂದ ಆರಂಭಿಸಿದ್ದ 'ಪಾದಯಾತ್ರೆ'ಯಲ್ಲಿ ಶರ್ಮಿಳಾ ಭಾಗವಹಿಸಿದ್ದರು. ಅವರು ಇದುವರೆಗೆ 3,500 ಕಿ.ಮೀ ಪಾದಯಾತ್ರೆಯನ್ನು ಪೂರ್ಣಗೊಳಿಸಿದ್ದಾರೆ. ಭಾನುವಾರ ನರಸಂಪೇಟೆಯಲ್ಲಿ ಪಾದಯಾತ್ರೆ ನಡೆಸಿದ ಶರ್ಮಿಳಾ, ಸ್ಥಳೀಯ ಟಿಆರ್ಎಸ್ ಶಾಸಕ ಪೆದ್ದಿ ಸುದರ್ಶನ್ ರೆಡ್ಡಿ ಅವರನ್ನು ಟೀಕಿಸಿದ್ದರು. ಅವರು ನೀಡಿದ ಹೇಳಿಕೆಗಳಿಂದ ಕುಪಿತಗೊಂಡಿದ್ದ ಟಿಆರ್ಎಸ್ ಕಾರ್ಯಕರ್ತರು ಅವರ ವಾಹನದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದರು.

ಟಿಆರ್ಎಸ್ ಕಾರ್ಯಕರ್ತರ ಕೃತ್ಯದಿಂದ ಬೆಂಬಲಿಗರು ಕೆಂಡ:
ಟಿಆರ್ಎಸ್ ಕಾರ್ಯಕರ್ತರು ತೋರಿದ ಕೃತ್ಯದಿಂದ ಶರ್ಮಿಳಾ ಬೆಂಬಲಿಗರು ಕೆರಳಿ ಕೆಂಡವಾದರು. ಈ ಹಿನ್ನೆಲೆ ಅವರ ಮತ್ತು ಟಿಆರ್ಎಸ್ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ ಎಂದು ವರದಿಯಾಗಿದೆ. ಇದರ ಮಧ್ಯೆ "ನನ್ನನ್ನು ಯಾಕೆ ಬಂಧಿಸುತ್ತಿದ್ದೀರಿ? ನಾನೇ ಬಲಿಪಶು, ಇಲ್ಲಿ ಆರೋಪಿಯಲ್ಲ" ಎಂದು ಶರ್ಮಿಳಾ ಅವರನ್ನು ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾಗ ಕಿರುಚಾಟ ಕೇಳಿಸಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications