Free Site: ಸಿಲಿಂಡರ್ ಆಯ್ತು, ಹಣ ಆಯ್ತು ಈಗ 'ಉಚಿತ ಸೈಟ್' ಘೋಷಿಸಿದ ಮೈತ್ರಿ ಪಕ್ಷಗಳು!: ಪ್ರಣಾಳಿಕೆಯಲ್ಲಿ ಏನಿದೆ?
ಅಮರಾವತಿ, ಮೇ 01: ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಕೆಲವೆಡೆ ವಿಧಾನಸಭಾ ಚುನಾವಣೆ ಸಹ ನಡೆಯಲಿದೆ. ರಾಜಕೀಯ ಪಕ್ಷಗಳು ಚುನಾವಣೆ ಗೆಲ್ಲಲು ಉಚಿತ ಯೋಜನೆ ನೀಡುವುದು ಸಾಮಾನ್ಯವಾಗಿದೆ. ಆದರೆ ಇಲ್ಲೊಂದು ಪಕ್ಷ ಸಿಲೆಂಡರ್ ಆಯ್ತು, ಹಣ ಆಯ್ತು, ಇದೀಗ ಉಚಿತ ನಿವೇಶನ (Site) ಕೊಡುವುದಾಗಿ ಘೋಷಿಸಿದೆ.
ಹೌದು, ಆಂಧ್ರಪ್ರದೇಶದಲ್ಲಿ ಮೇ 13ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಈ ಮೈತ್ರಿ ಪಕ್ಷಗಳು ಗೆದ್ದರೆ ಭರ್ಜರಿ ಭಾಗ್ಯಗಳನ್ನು ನೀಡುವುದಾಗಿ ಘೋಷಿಸಿದೆ.

ಸದ್ಯ ಆಂಧ್ರಪ್ರದೇಶದಲ್ಲಿ ಗೆಲ್ಲಲು ತೆಲುಗು ದೇಶಂ ಪಕ್ಷ (TDP), ಜನಸೇನಾ ಮತ್ತು ಬಿಜೆಪಿ ಮೂರು ಚುನಾವಣೆ ಸಂಬಂಧ ಮೈತ್ರಿ ಮಾಡಿಕೊಂಡಿವೆ. ಟಿಡಿಪಿ ಚಂದ್ರಬಾಬು ನಾಯ್ಡು, ಜನಸೇನಾ ಪಕ್ಷ ನಟ ಪವನ್ ಕಲ್ಯಾಣ್ ಹಾಗೂ ಬಿಜೆಪಿ ಮೈತ್ರಿ ಕೂಟದ ಪ್ರಣಾಳಿಕೆ ಮಂಗಳವಾರ ಬಿಡುಗಡೆ ಆಗಿದೆ.
900 ಚದರಡಿ ನಿವೇಶನ ಉಚಿತ
ಈ ಪ್ರಣಾಳಿಕೆಯಲ್ಲಿ ಬಡವರಿಗೆ 900 ಚದರಡಿ ಉಚಿತ ಸೈಟ್, ಉಚಿತ ಬಸ್ ಪ್ರಯಾಣ, ಮಹಿಳೆಯರಿಗೆ ಪಿಂಚಣಿಯಂತಹ ಹಲವು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಮೈತ್ರಿ ಪಕ್ಷಗಳು ಪ್ರಣಾಳಿಕೆಯಲ್ಲಿ ತಿಳಿಸಿವೆ.

ಬಡವರಿಗೆ 900 ಚದರ ಅಡಿಯ ಉಚಿತ ಭೂಮಿ, ಮನೆ ಕಟ್ಟಲು ಉಚಿತ ಮರಳು, ತಲ್ಲಕಿ ವಂಡನಮ್ ಯೋಜನೆಯಲ್ಲಿ ದಾಖಲಾದ ಶಾಲಾ ಮಕ್ಕಳಿಗೆ ವಾರ್ಷಿಕ 15,000 ರೂಪಾಯಿ, ಮನೆಗಳಿಗೆ ಉಚಿತ ನೀರು ಸಂಪರ್ಕ, ಉಚಿತ ಕುಡಿಯುವ ನೀರು, ಮೀನುಗಾರಿಕೆ ನಿಷೇಧ ಅವಧಿಯಲ್ಲಿ 20000 ರೂ. ಆರ್ಥಿಕ ನೆರವು, ವಾಸಿಸುವವನೆ ಭೂಮಿ ಮಾಲೀಕ ಕಾಯ್ದೆ ರದ್ದು ಭರವಸೆಗಳನ್ನು ನೀಡಿದೆ.
ರೂ.25 ಲಕ್ಷ ಆರೋಗ್ಯ ವಿಮೆ ಸೌಲಭ್ಯ
ದೋಣಿ ರಿಪೇರಿಗೆ ಸಹಾಯಧನ, ಸಣ್ಣ ವ್ಯಾಪ್ತಿಗಳಿಗೆ ಬಡ್ಡಿ ರಹಿತ ಸಾಲ, ಹಿಂದುಳಿದ ಜಾತಿಗಳ ರಕ್ಷಣೆಗೆ ವಿಶೇಷ ಕಾಯ್ದೆ, ಎಲ್ಲ ಕುಟುಂಬಗಳಿಗೆ 25 ಲಕ್ಷ ರೂ.ನ ಆರೋಗ್ಯ ವಿಮೆ, ಅಪಘಾತ ಸಾವಿಗೆ ಹತ್ತು ಲಕ್ಷ ರೂ. ವಿಮೆ ಯೋಜನೆ ಜಾರಿ ಸೇರಿದಂತೆ ಹಲವು ಭರವಸೆಗಳನ್ನು ಮೈತ್ರಿಕೂಟ ತಿಳಿಸಿದೆ.
ಸಾಮಾನ್ಯ ಎಂಬಂತಾದ ಉಚಿತ ಭಾಗ್ಯಗಳ ಘೋಷಣೆ
ಈ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಉಚಿತ ಐದು ಗ್ಯಾರೆಂಟಿಗಳನ್ನು ಘೋಷಿಸಿತ್ತು. ನಂತರ ಅದೇ ರೀತಿ ಉಚಿತ ಘೋಷಣೆಗಳನ್ನು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಇವೆರಡು ರಾಜ್ಯಗಳಲ್ಲಿ ಸಹ ಕಾಂಗ್ರೆಸ್ ಗೆದ್ದಿತ್ತು. ಇದೀಗ ಚುನಾವಣೆಗಳಲ್ಲಿ ಉಚಿತ ಘೋಷಣೆಗಳನ್ನು ಹಲವು ಪಕ್ಷಗಳು ಅನುಸರಿಸುತ್ತಿವೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications