Free Site: ಸಿಲಿಂಡರ್ ಆಯ್ತು, ಹಣ ಆಯ್ತು ಈಗ 'ಉಚಿತ ಸೈಟ್' ಘೋಷಿಸಿದ ಮೈತ್ರಿ ಪಕ್ಷಗಳು!: ಪ್ರಣಾಳಿಕೆಯಲ್ಲಿ ಏನಿದೆ?
ಅಮರಾವತಿ, ಮೇ 01: ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಕೆಲವೆಡೆ ವಿಧಾನಸಭಾ ಚುನಾವಣೆ ಸಹ ನಡೆಯಲಿದೆ. ರಾಜಕೀಯ ಪಕ್ಷಗಳು ಚುನಾವಣೆ ಗೆಲ್ಲಲು ಉಚಿತ ಯೋಜನೆ ನೀಡುವುದು ಸಾಮಾನ್ಯವಾಗಿದೆ. ಆದರೆ ಇಲ್ಲೊಂದು ಪಕ್ಷ ಸಿಲೆಂಡರ್ ಆಯ್ತು, ಹಣ ಆಯ್ತು, ಇದೀಗ ಉಚಿತ ನಿವೇಶನ (Site) ಕೊಡುವುದಾಗಿ ಘೋಷಿಸಿದೆ.
ಹೌದು, ಆಂಧ್ರಪ್ರದೇಶದಲ್ಲಿ ಮೇ 13ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಈ ಮೈತ್ರಿ ಪಕ್ಷಗಳು ಗೆದ್ದರೆ ಭರ್ಜರಿ ಭಾಗ್ಯಗಳನ್ನು ನೀಡುವುದಾಗಿ ಘೋಷಿಸಿದೆ.

ಸದ್ಯ ಆಂಧ್ರಪ್ರದೇಶದಲ್ಲಿ ಗೆಲ್ಲಲು ತೆಲುಗು ದೇಶಂ ಪಕ್ಷ (TDP), ಜನಸೇನಾ ಮತ್ತು ಬಿಜೆಪಿ ಮೂರು ಚುನಾವಣೆ ಸಂಬಂಧ ಮೈತ್ರಿ ಮಾಡಿಕೊಂಡಿವೆ. ಟಿಡಿಪಿ ಚಂದ್ರಬಾಬು ನಾಯ್ಡು, ಜನಸೇನಾ ಪಕ್ಷ ನಟ ಪವನ್ ಕಲ್ಯಾಣ್ ಹಾಗೂ ಬಿಜೆಪಿ ಮೈತ್ರಿ ಕೂಟದ ಪ್ರಣಾಳಿಕೆ ಮಂಗಳವಾರ ಬಿಡುಗಡೆ ಆಗಿದೆ.
900 ಚದರಡಿ ನಿವೇಶನ ಉಚಿತ
ಈ ಪ್ರಣಾಳಿಕೆಯಲ್ಲಿ ಬಡವರಿಗೆ 900 ಚದರಡಿ ಉಚಿತ ಸೈಟ್, ಉಚಿತ ಬಸ್ ಪ್ರಯಾಣ, ಮಹಿಳೆಯರಿಗೆ ಪಿಂಚಣಿಯಂತಹ ಹಲವು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಮೈತ್ರಿ ಪಕ್ಷಗಳು ಪ್ರಣಾಳಿಕೆಯಲ್ಲಿ ತಿಳಿಸಿವೆ.

ಬಡವರಿಗೆ 900 ಚದರ ಅಡಿಯ ಉಚಿತ ಭೂಮಿ, ಮನೆ ಕಟ್ಟಲು ಉಚಿತ ಮರಳು, ತಲ್ಲಕಿ ವಂಡನಮ್ ಯೋಜನೆಯಲ್ಲಿ ದಾಖಲಾದ ಶಾಲಾ ಮಕ್ಕಳಿಗೆ ವಾರ್ಷಿಕ 15,000 ರೂಪಾಯಿ, ಮನೆಗಳಿಗೆ ಉಚಿತ ನೀರು ಸಂಪರ್ಕ, ಉಚಿತ ಕುಡಿಯುವ ನೀರು, ಮೀನುಗಾರಿಕೆ ನಿಷೇಧ ಅವಧಿಯಲ್ಲಿ 20000 ರೂ. ಆರ್ಥಿಕ ನೆರವು, ವಾಸಿಸುವವನೆ ಭೂಮಿ ಮಾಲೀಕ ಕಾಯ್ದೆ ರದ್ದು ಭರವಸೆಗಳನ್ನು ನೀಡಿದೆ.
ರೂ.25 ಲಕ್ಷ ಆರೋಗ್ಯ ವಿಮೆ ಸೌಲಭ್ಯ
ದೋಣಿ ರಿಪೇರಿಗೆ ಸಹಾಯಧನ, ಸಣ್ಣ ವ್ಯಾಪ್ತಿಗಳಿಗೆ ಬಡ್ಡಿ ರಹಿತ ಸಾಲ, ಹಿಂದುಳಿದ ಜಾತಿಗಳ ರಕ್ಷಣೆಗೆ ವಿಶೇಷ ಕಾಯ್ದೆ, ಎಲ್ಲ ಕುಟುಂಬಗಳಿಗೆ 25 ಲಕ್ಷ ರೂ.ನ ಆರೋಗ್ಯ ವಿಮೆ, ಅಪಘಾತ ಸಾವಿಗೆ ಹತ್ತು ಲಕ್ಷ ರೂ. ವಿಮೆ ಯೋಜನೆ ಜಾರಿ ಸೇರಿದಂತೆ ಹಲವು ಭರವಸೆಗಳನ್ನು ಮೈತ್ರಿಕೂಟ ತಿಳಿಸಿದೆ.
ಸಾಮಾನ್ಯ ಎಂಬಂತಾದ ಉಚಿತ ಭಾಗ್ಯಗಳ ಘೋಷಣೆ
ಈ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಉಚಿತ ಐದು ಗ್ಯಾರೆಂಟಿಗಳನ್ನು ಘೋಷಿಸಿತ್ತು. ನಂತರ ಅದೇ ರೀತಿ ಉಚಿತ ಘೋಷಣೆಗಳನ್ನು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಇವೆರಡು ರಾಜ್ಯಗಳಲ್ಲಿ ಸಹ ಕಾಂಗ್ರೆಸ್ ಗೆದ್ದಿತ್ತು. ಇದೀಗ ಚುನಾವಣೆಗಳಲ್ಲಿ ಉಚಿತ ಘೋಷಣೆಗಳನ್ನು ಹಲವು ಪಕ್ಷಗಳು ಅನುಸರಿಸುತ್ತಿವೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications