Chandra Babu Naidu: ರಾಜಕೀಯ ಅಲ್ಲೋಲ, ಕಲ್ಲೋಲ; ಮಾಜಿ ಸಿಎಂ ಬಂಧನ!
ವಿಶಾಖಪಟ್ಟಣಂ, ಸೆಪ್ಟೆಂಬರ್ 08: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಬೆಳ್ಳಂಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.
ಹೌದು, ಆಂಧ್ರ ಪ್ರದೇಶ ಸ್ಕಿಲ್ ಡೆವಲಪ್ಮೆಂಟ್ ಕಾರ್ಪೋರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಈ ಹಗರಣದಲ್ಲಿ 371 ಕೋಟಿ ರೂಪಾಯಿ ಅಕ್ರಮ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಹಗರಣದ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಸಿಐಡಿಗೆ ವಹಿಸಿದ್ದರು. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರು ಎ1 ಆರೋಪಿಯಾಗಿದ್ದು, ಇದೀಗ ಬಂಧಿಸಲಾಗಿದೆ.

ನಂದ್ಯಾಲ ವ್ಯಾಪ್ತಿಯ ಡಿಐಜಿ ರಘುರಾಮಿ ರೆಡ್ಡಿ ನೇತೃತ್ವದ ಪೊಲೀಸರು ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಚಂದ್ರಬಾಬು ನಾಯ್ಡು ಅವರಿದ್ದ ನಿವಾಸಕ್ಕೆ ದಾಳಿ ಮಾಡಿ ಬಂಧನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲು ಪೊಲೀಸರು ಬಂದಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಆ ರಾತ್ರಿಯಲ್ಲೂ ಟಿಡಿಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನೂ ಚಂದ್ರಬಾಬು ನಾಯ್ಡು ಅವರ ವಿರುದ್ಧ 58 ಕೋಟಿ ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.
-
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications