2034ಕ್ಕೆ ನಾನು ಸಾಯುತ್ತೇನೆ; ಸಾವಿಗೂ ಮೊದಲೇ ಡೆತ್ ಡೇ ಆಚರಣೆ!
ಹೈದ್ರಾಬಾದ್, ಡಿಸೆಂಬರ್ 17: ಆಂಧ್ರ ಪ್ರದೇಶದ ಮಾಜಿ ಸಚಿವ ಪಾಲೇಟಿ ರಾಮರಾವ್ ಆಹ್ವಾನ ಪತ್ರಿಕೆಯೊಂದು ಈಗ ಕುತೂಹಲ ಮೂಡಿಸಿದೆ. ರಾಜಕೀಯ ಕಾರ್ಯಕ್ರಮ ಹಾಗೂ ಮದುವೆಗೆ ಆಮಂತ್ರಣ ಪತ್ರಿಕೆ ಹೊರಡಿಸುವುದು ಕಾಮನ್. ಆದರೆ ಈಗ ಮಾಜಿ ಸಚಿವರೊಬ್ಬರು ತಮ್ಮ ಸಾವಿಗೂ ಮೊದಲೇ ತಮ್ಮ ಸಾವಿನ ಆಮಂತ್ರಣ ಪತ್ರಿಕೆಯನ್ನು ಹೊರಡಿಸಿದ್ದಾರೆ.
2034ರಲ್ಲಿ ನಾನು ಸಾಯುತ್ತೇನೆ ಎನ್ನುತ್ತಾನೆ, ಅದಕ್ಕಾಗಿಯೇ ಇಂದಿನಿಂದ ಮರಣ ದಿನಾಚರಣೆ ನಡೆಸಲಾಗುತ್ತಿದೆ ಎಂದು ಆಮಂತ್ರಣ ಪತ್ರಿಕೆಗಳನ್ನು ಮೊದಲೇ ಮುದ್ರಿಸಲಾಗಿದೆ. ಶನಿವಾರ ಸ್ಥಳೀಯವಾಗಿ ಈ ಸಂಭ್ರಮಾಚರಣೆ ನಡೆಸಲಾಗುತ್ತಿದೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಈ ಆಹ್ವಾನ ಪತ್ರಿಕೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಜಿ ಸಚಿವರ ವರ್ತನೆಯಿಂದ ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಸಾವಿನ ದಿನದ ಹೆಸರಿನಲ್ಲಿ ಆಹ್ವಾನಿಸುತ್ತಿರುವ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ಮಾಜಿ ಸಚಿವ ಪಾಲೇಟಿ ರಾಮರಾವ್ ಪ್ರಸ್ತುತ ವೈಎಸ್ಆರ್ಸಿಪಿಯಲ್ಲಿದ್ದಾರೆ.

ತಮ್ಮ ಸಾವಿನ ಬಗ್ಗೆ ಮಾಜಿ ಸಚಿವರ ಭವಿಷ್ಯ:
ಸಾವಿನ ದಿನದ ಆಚರಣೆಯನ್ನು ಮಾಡಿಕೊಳ್ಳುವುದನ್ನು ಕೇಳುವುದಕ್ಕೆ ಒಂದು ರೀತಿ ಆಶ್ಚರ್ಯವೆನಿಸುತ್ತದೆ. ಆದರೆ ಮಾಜಿ ಸಚಿವರೊಬ್ಬರು ಅವರ ಸಾವಿನ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದು, ಬದುಕಿರುವಾಗಲೇ ಅದನ್ನು ಪ್ರತಿ ವರ್ಷ ಆಚರಿಸಲು ನಿರ್ಧರಿಸಿರುವುದು ಎಲ್ಲರನ್ನೂ ಚಕಿತಗೊಳಿಸಿದ್ದಾರೆ. ಈ ಸಾವಿನ ದಿನದ ಹೆಸರಿನೊಂದಿಗೆ ಆಮಂತ್ರಣಗಳನ್ನು ಸಿದ್ಧಪಡಿಸಲಾಗಿದೆ. ಬಾಪಟ್ಲ ಜಿಲ್ಲೆಯ ಚಿರಸ್ನ ಮಾಜಿ ಸಚಿವ ಪಾಲೇಟಿ ರಾಮರಾವ್ ಪ್ರಕರಣದ ಕುರಿತು ಸ್ಥಳೀಯವಾಗಿ ಚರ್ಚೆ ನಡೆಯುತ್ತಿದೆ. ಈ ವಿಚಿತ್ರ ನಿರ್ಧಾರದಿಂದ ಎಲ್ಲರೂ ಅಚ್ಚರಿಗೊಂಡಿದ್ದಾರೆ.
ಟಿಡಿಪಿ ಸರ್ಕಾರದಲ್ಲಿ ಸಚಿವರಾಗಿ ಸೇವೆ:
ಆಂಧ್ರ ಪ್ರದೇಶದಲ್ಲಿ ಟಿಡಿಪಿ ಸರ್ಕಾರದ ಅವಧಿಯಲ್ಲಿ ಪಾಲೇಟಿ ರಾಮರಾವ್ ಅವರು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮೇಲಾಗಿ ಅವರು ಎರಡು ಬಾರಿ ಶಾಸಕರೂ ಆಗಿದ್ದಾರೆ. ಸದ್ಯ ವೈಎಸ್ಆರ್ಸಿಪಿಯಲ್ಲಿದ್ದಾರೆ. ಅವರ ಪ್ರಸ್ತುತ ವಯಸ್ಸು 63 ವರ್ಷ, ಆದರೆ ಅವರು 75 ವರ್ಷಕ್ಕೆ ಅಂದರೆ 2034ರಲ್ಲಿ ನಿಧನ ಹೊಂದುವುದಾಗಿ ಎಂದು ಭವಿಷ್ಯ ನುಡಿದಿದ್ದಾರೆ. ಅದಕ್ಕಾಗಿಯೇ ಅವರು ಈ ವರ್ಷದಿಂದ 'ಡೆತ್ ಡೇ' ಆಚರಿಸುತ್ತಿರುವುದಾಗಿ ಆಮಂತ್ರಣವನ್ನು ಮುಂಚಿತವಾಗಿ ಮುದ್ರಿಸಿದ್ದಾರೆ.
ಸಾವಿಗಿನ್ನೂ 12 ವರ್ಷ:
ಪಾಲೇಟಿ ರಾಮರಾವ್ ನಿಧನಕ್ಕೆ ಇನ್ನೂ 12 ವರ್ಷ ಬಾಕಿಯಿರುವ ಹಿನ್ನೆಲೆಯಲ್ಲಿ ಶನಿವಾರ ಐಎಂಎ ಹಾಲ್ ಆಫ್ ಸೀರೆಸ್ ನಲ್ಲಿ 12ನೇ 'ಡೆತ್ ಡೇ' ಆಚರಣೆ ಮಾಡಲಾಯಿಯತು. ಮಾನವನ ಸಾವಿನ ಭಯವನ್ನು ಹೋಗಲಾಡಿಸಲು ಮತ್ತು ಇದುವರೆಗೆ ಮಾಡಿದ ತಪ್ಪುಗಳನ್ನು ಸರಿಪಡಿಸಲು ಇಂತಹ ಸಮಾರಂಭಗಳು ಅಗತ್ಯ ಎಂದು ಅವರು ಬಹಿರಂಗಪಡಿಸಿದರು. ಮುಂದಿನ ವರ್ಷ 11ನೇ ಸಂಭ್ರಮಾಚರಣೆ ನಡೆಯಲಿದೆ ಎನ್ನಲಾಗಿದೆ. ಈ ಆಹ್ವಾನ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
-
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Love Mocktail 3 Row: ಕೃತಿಚೌರ್ಯ ವಿವಾದದ ನಡುವೆ ಸತ್ಯ ಮತ್ತು ನೈತಿಕತೆ ಚರ್ಚೆ: ಮಧು ವೈ.ಎನ್ ಬರಹ -
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Tejasvi Surya: ಕೆಎಸ್ಸಿಎನಿಂದ ಐಪಿಎಲ್ ಫ್ರೀ ಟಿಕೆಟ್ ಚರ್ಚೆ: ಕಾಂಗ್ರೆಸ್ ಶಾಸಕರಿಗೆ ಸಂಸದ ತೇಜಸ್ವಿ ಸೂರ್ಯ ಕ್ಲಾಸ್ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications