ಅಪರೂಪದ ಕಾಯಿಲೆ; ಬಾಲಕಿ ಚಿಕಿತ್ಸೆಗೆ ಜಗನ್ ಸರ್ಕಾರದಿಂದ 1 ಕೋಟಿ ಮಂಜೂರು
ಅಮರಾವತಿ, ಅ.03: ಅಪರೂಪದ ಗೌಚರ್ ಕಾಯಿಲೆಯಿಂದ ಬಳಲುತ್ತಿರುವ ಎರಡೂವರೆ ವರ್ಷದ ಬಾಲಕಿಯ ಚಿಕಿತ್ಸೆಗಾಗಿ ಆಂಧ್ರಪ್ರದೇಶ ಸರ್ಕಾರ 1 ಕೋಟಿ ರೂಪಾಯಿ ಮಂಜೂರು ಮಾಡಿದೆ.
ಡಾ. ಬಿ.ಆರ್. ಅಂಬೇಡ್ಕರ್ ಕೋನಸೀಮಾ ಜಿಲ್ಲಾಧಿಕಾರಿ ಹಿಮಾಂಶು ಶುಕ್ಲಾ ಅವರು ಬಾಲಕಿಯ ಚಿಕಿತ್ಸೆಗಾಗಿ 13 ಚುಚ್ಚುಮದ್ದುಗಳ ಮೊದಲ ಸೆಟ್ ಅನ್ನು ಭಾನುವಾರ ಬಾಲಕಿಯ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಒಟ್ಟಾರೆಯಾಗಿ, ಪುಟ್ಟ ಬಾಲಕಿಗೆ ಚಿಕಿತ್ಸೆಗಾಗಿ ಕನಿಷ್ಠ 52 ಚುಚ್ಚುಮದ್ದುಗಳನ್ನು ನೀಡಬೇಕು. ಪ್ರತಿಯೊಂದು ಚುಚ್ಚುಮದ್ದಿಗೂ 1.25 ಲಕ್ಷ ವೆಚ್ಚವಾಗುತ್ತದೆ.

ಗೌಚರ್ ಕಾಯಿಲೆಯು ಕೊಬ್ಬಿನ ಪದಾರ್ಥಗಳ ರಚನೆಯಿಂದಾಗಿ ವ್ಯಕ್ತಿಯ ಮೂಳೆಗಳು ಮತ್ತು ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ. ಇದು ಅಂಗಗಳ ವಿಸ್ತರಣೆಗೆ ಕಾರಣವಾಗುತ್ತದೆ.
ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗದ ಕುಟುಂಬವು ಇತ್ತೀಚೆಗೆ ಕೋನಸೀಮೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರಿಗೆ ನೆರವು ನೀಡುವಂತೆ ಮನವಿ ಮಾಡಿತ್ತು.
ಬಾಲಕಿಯ ಚಿಕಿತ್ಸೆಗೆ ಮಾತ್ರವಲ್ಲದೆ ಆಕೆಯ ಶಿಕ್ಷಣ ಮತ್ತು ಯೋಗಕ್ಷೇಮಕ್ಕೂ ಹಣ ಮಂಜೂರು ಮಾಡುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಭರವಸೆ ನೀಡಿದ್ದರು.

ಅಗತ್ಯವಿರುವ ಹಣದ ಕುರಿತು ಸರ್ಕಾರಕ್ಕೆ ಜಿಲ್ಲಾಧಿಕಾರಿ ಪ್ರಸ್ತಾವನೆ ಸಲ್ಲಿಸಿದ್ದು, ಅದರಂತೆ ಗೌಚರ್ ಕಾಯಿಲೆ ಚಿಕಿತ್ಸೆಗೆ 1 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಬಾಲಕಿಯ ಚಿಕಿತ್ಸೆಗಾಗಿ ಹಿಮಾಂಶು ಶುಕ್ಲಾ ಅವರು ಅಮಲಾಪುರಂನ ಸರ್ಕಾರಿ ಏರಿಯಾ ಆಸ್ಪತ್ರೆಯಲ್ಲಿ ವೈದ್ಯರಿಗೆ ಚುಚ್ಚುಮದ್ದನ್ನು ಹಸ್ತಾಂತರಿಸಿದ್ದಾರೆ.
ಇದೊಂದು ಅಪರೂಪದ ಕಾಯಿಲೆಯಾಗಿದ್ದು, ಭಾರತದಲ್ಲಿ 14 ಮಕ್ಕಳು ಇಂತಹ ಕಾಯಿಲೆಯಿಂದ ಬಳಲುತ್ತಿದ್ದು, ಈ ರೋಗಕ್ಕೆ ಚಿಕಿತ್ಸೆ ನೀಡುತ್ತಿರುವ ದೇಶದ ಮೊದಲ ಸರ್ಕಾರಿ ಆಸ್ಪತ್ರೆ ಇದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಜೊತೆಗೆ ಬಾಲಕಿಯ ಕುಟುಂಬಕ್ಕೂ ಮಾಸಿಕ ಪಿಂಚಣಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications