ಸತತ 12 ಗಂಟೆ ಕಾರ್ಯಾಚರಣೆ: ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆ
ಗುಂಟೂರು, ಆಗಸ್ಟ್ 16: ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗುವನ್ನು ಸತತ 12 ಗಂಟೆಗಳ ಕಾರ್ಯಾಚರಣೆಯ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಜೀವಂತವಾಗಿ ರಕ್ಷಿಸಿದ ಘಟನೆ ಆಂಧ್ರಪ್ರದೇಶ ಗುಂಟೂರಿನಲ್ಲಿ ನಡೆದಿದೆ.
ಗುಂಟೂರಿನ ಉಮ್ಮಿದಿವಾರಂ ಎಂಬ ಊರಿನ ಚಂದ್ರಶೇಖರ ಎಂಬ ಬಾಲಕ ಆಗಸ್ಟ್ 15 ರಂದು ಸಂಜೆ 4:30 ರ ಸಮಯಕ್ಕೆ ಇಲ್ಲಿನ ಕೊಳವೆ ಬಾವಿಯೊಂದಕ್ಕೆ ಬಿದ್ದಿದ್ದ.

ಕುಡಿಯುವ ನೀರಿಗಾಗಿ ತೋಡಿದ್ದ ಬಾವಿಯನ್ನು ಮುಚ್ಚದೇ ಬಿಟ್ಟ ಪರಿಣಾಮವೇ ಈ ಘಟನೆ ನಡೆದಿದೆ. ಮಗು ಬಾವಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜ್ಯ ಗೃಹ ಸಚಿವ ಚಿನ್ನ ರಾಜಪ್ಪ ಮತ್ತು ಆರೋಗ್ಯ ಸಚಿವ ಕೆ.ಶ್ರೀನಿವಾಸ್ ಸ್ಥಳಕ್ಕೆ ಆಗಮಿಸಿ, ರಾಷ್ಟ್ರೀಯ ವಿಪತ್ತು ದಳದ ಸಿಬ್ಬಂದಿಗಳಿಗೆ ರಕ್ಷಣಾ ಕಾರ್ಯ ನಡೆಸುವಂತೆ ಆದೇಶಿಸಿದ್ದರು.
ಸತತ 12 ಗಂಟೆಗಳ ಕಾರ್ಯಾಚರಣೆಯ ನಂತರ ಇದೀಗ ಮಗುವನ್ನು ಜೀವಂತವಾಗಿ ಕೊಳವೆ ಬಾವಿಯಿಂದ ಹೊರತೆಗೆಯಲಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
More From
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications