ಆಂಧ್ರಪ್ರದೇಶ ರೈಲು ಅಪಘಾತ: 13 ಸಾವು, 50 ಗಾಯಾಳು, ರಕ್ಷಣಾ ಕಾರ್ಯದ 10 ಅಂಶಗಳು, ಮಾಹಿತಿ
Andhra Pradesh Train Accident: ಹೈದರಾಬಾದ್, ಅಕ್ಟೋಬರ್ 30: ಆಂಧ್ರಪ್ರದೇಶದ ಹೌರಾ-ಚೆನ್ನೈ ಮಾರ್ಗದಲ್ಲಿ ಭಾನುವಾರ ಪ್ಯಾಸೆಂಜರ್ ರೈಲುಗಳು ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ಒಟ್ಟು ಸುಮಾರು 50 ಮಂದಿ ಗಾಯಗೊಂಡಿದ್ದರೆ, ಮೃತರ ಸಂಖ್ಯೆ 13ಕ್ಕೆ ತಲುಪಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.
ಎರಡು ಪ್ಯಾಸೆಂಜರ್ ರೈಲುಗಳು ಹಳಿಗಳ ಮೇಲೆಯೆ ಉರುಳಿವೆ. ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಈ ಮಾರ್ಗದಲ್ಲಿನ ಕೆಲವು ರೈಲುಗಳ ಸಂಚಾರ ರದ್ದಾಗಿದೆ. ಈ ಅವಘಡ ಕುರಿತ ಪ್ರಮುಖ ಹತ್ತು ಅಂಶಗಳು ಇಲ್ಲಿವೆ.

ರೈಲು ದುರಂತ 10 ಅಂಶಗಳು
1. ವಿಶಾಖಪಟ್ಟಣ-ಪಲಾಸ ನಡುವಿನ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಅಳಮಂಡ ಮತ್ತು ಕಂಟಕಪಲ್ಲಿ ನಡುವಿನ ಮುಖ್ಯ ಮಾರ್ಗದಲ್ಲಿ ನಿಂತಿತ್ತು. ಈ ವೇಳೆ ಅದೇ ರೈಲಿನ ಹಿಂಭಾಗಕ್ಕೆ ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.
2. ವಿಶಾಖಪಟ್ಟಣಂ-ಪಲಾಸ ರೈಲಿನ ಕೊನೆಯ ಎರಡು ಕೋಚ್ಗಳು ಹಾಗೂ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನ ಇಂಜಿನ್ ಹಳಿ ತಪ್ಪಿವೆ ಎಂದು ಪೂರ್ವ ಕರಾವಳಿ ರೈಲ್ವೆಯ ಸಿಪಿಆರ್ಒ ಬಿಸ್ವಜಿತ್ ಸಾಹು ಮಾಹಿತಿ ನೀಡಿದ್ದಾರೆ.
3. ಭಾನುವಾರ ರಾತ್ರಿ ನಡೆದ ಘಟನೆಯಲ್ಲಿ ಈವರೆಗೆ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಗ್ಗೆ ರಕ್ಷಣಾ ಪ್ರಯತ್ನಗಳನ್ನು ಪೂರ್ಣಗೊಳ್ಳುವ ಭರವಸೆ ಇದೆ. ಕನಿಷ್ಠ 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ದೀಪಿಕಾ ತಿಳಿಸಿದ್ದಾರೆ.

4. ರೈಲು ದುರಂತದಿಂದ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಹದಿನೆಂಟು ರೈಲುಗಳನ್ನು ರದ್ದು ಮಾಡಲಾಗಿದೆ. 22 ರೈಲುಗಳ ಮಾರ್ಗ ಬದಲಾಯಿಸಲಾಗಿದೆ ಎಂದು ಬಿಸ್ವಜಿತ್ ಸಾಹು ತಿಳಿಸಿದರು. ವೈಜಾಗ್-ರಾಯಗಡ ಲೋಕೋ ಪೈಲಟ್ನ ತಪ್ಪಿನಿಂದಾಗಿ ಈ ಅಪಘಾತ ಸಂಭವಿಸಿದೆ. ಸಿಗ್ನಲಿಂಗ್ ಲೊಕೊ ಪೈಲಟ್ ಗಮನಕ್ಕೆ ಬಂದಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ.
5. ಘಟನೆಯಲ್ಲಿ ರೈಲ್ವೆ ಕೋಚ್ಗಳು ಹಳಿ ತಪ್ಪಿವೆ. ಮಾರ್ಗದ ಸುತ್ತಲೂ ನೆರೆದಿರುವುದನ್ನು ತೋರಿಸಿದೆ. ಹಳಿತಪ್ಪಿರುವ ಮತ್ತು ಹಾನಿಗೆ ಈಡಾದ ಕೋಚ್ ಗಳನ್ನು ಹೊರತುಪಡಿಸಿ, ಎಲ್ಲವನ್ನು ಮಧ್ಯರಾತ್ರಿಯೇ ತೆರವುಗೊಳಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರತಿಕ್ರಿಯಿಸಿದ್ದಾರೆ.
6. ಮೃತರ ಕುಟುಂಬಕ್ಕೆ ₹10 ಲಕ್ಷ ಆರ್ಥಿಕ ನೆರವು ನೀಡುವುದಾಗಿ ರೈಲ್ವೆ ಸಚಿವರು ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ₹2.5 ಲಕ್ಷ ಮತ್ತು ಸಣ್ಣಪುಟ್ಟ ಗಾಯಗಳಾಗಿರುವ ಪ್ರಯಾಣಿಕರಿಗೆ ₹50 ಸಾವಿರ ನೀಡಲಾಗುವುದು ಎಂದರು.
7. ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ನೆರವು ನೀಡುವುದಾಗಿ ಘೋಷಿಸಿದ್ದಾರೆ.
8. ರೈಲ್ವೆ ಸಚಿವ ವೈಷ್ಣವ್ ಅವರು ಮುಖ್ಯಮಂತ್ರಿ YSR ಜಗನ್ ಮೋಹನ್ ರೆಡ್ಡಿ ಅವರೊಂದಿಗೂ ಮಾತನಾಡಿದ್ದಾರೆ. ಅಪಘಾತದ ಬಗ್ಗೆ ಸಿಎಂ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಆದೇಶಿಸಿದ್ದಾರೆ. ಘಟನೆ ಬಗ್ಗೆ ಅಪ್ಡೇಟ್ ನೀಡುವಂತೆ ಕೇಳಿದ್ದಾರೆ.
9. ಭಾರತೀಯ ರೈಲ್ವೆಯು ನವದೆಹಲಿಯ ವಾರ್ ರೂಮ್ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಪೂರ್ವ ಕರಾವಳಿ ರೈಲ್ವೆಯು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. (ಭುವನೇಶ್ವರ - 0674-2301625, 2301525, 2303069, ಮತ್ತು ವಾಲ್ಟೇರ್ 0891-2885914) ಈ ಸಹಾಯವಾಣಿಗೆ ಕರೆ ಮಾಡುವಂತೆ ತಿಳಿಸಲಾಗಿದೆ.
10. ಒಡಿಶಾದಲ್ಲಿ ಐದು ತಿಂಗಳ ಹಿಂದೆ ಬಹುದೊಡ್ಡ ರೈಲು ದುರಂತ ನಡೆದಿತ್ತು. ಒಟ್ಟು ಮೂರು ರೈಲುಗಳ ಅನೇಕ ಪ್ರಮಾಣಿಕರು ಪ್ರಾಣ ಬಿಟ್ಟಿದ್ದಾರೆ. ಅಪಘಾತದಲ್ಲಿ 280 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದರು. ಜೂನ್ 2 ರಂದುಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್, ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತಕ್ಕೀಡಾಗಿತ್ತು. ಈ ದುರಂತ ಇತ್ತೀಚಿನ ವರ್ಷಗಳಲ್ಲಿ ನಡೆದ ಬಹುದೊಡ್ಡ ದುರಂತ ಎನ್ನಲಾಗಿದೆ.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain











Click it and Unblock the Notifications