ಜರ್ಮನಿ ಚಾನ್ಸಲರ್ ಜತೆ ನವರಾತ್ರಿಗೆ ಬಂದ ದುರ್ಗಾಮಾತೆ
ನವದೆಹಲಿ, ಅಕ್ಟೋಬರ್. 06: ಮಹಿಷಾಸುರ ಮರ್ದಿನಿ ಅವತಾರದಲ್ಲಿರುವ ದುರ್ಗೆಯ ಪುರಾತನ ವಿಗ್ರಹವನ್ನು ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್, ಪ್ರಧಾನಿ ನರೇಂದ್ರ ಮೋದಿಗೆ ಹಸ್ತಾಂತರ ಮಾಡಿದ್ದಾರೆ.
ಜಮ್ಮು-ಕಾಶ್ಮೀರದ ಪುಲುವಾಮಾದ ದೇವಾಲಯವೊಂದರಲ್ಲಿದ್ದ 10ನೇ ಶತಮಾನದ ಮೂರ್ತಿ ಸುಮಾರು ಎರಡು ದಶಕಗಳ ಹಿಂದೆ ಕಾಣೆಯಾಗಿತ್ತು. ಜರ್ಮನಿಯ ಮ್ಯೂಸಿಯಂ ಒಂದರಲ್ಲಿ ವಿಗ್ರಹ ಇರುವ ಬಗ್ಗೆ ಪುರಾತತ್ವ ಇಲಾಖೆಗೆ ಮಾಹಿತಿ ಲಭಿಸಿತ್ತು. ವಿಗ್ರಹ ಹಿಂತಿರುಗಿಸುವಂತೆ ಭಾರತೀಯ ಪುರಾತತ್ವ ಇಲಾಖೆ ಜರ್ಮನಿ ಸರ್ಕಾರಕ್ಕೆ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿರುವ ಜರ್ಮನಿ ವಿಗ್ರಹವನ್ನು ಭಾರತಕ್ಕೆ ವಾಪಸ್ ಮಾಡಿದೆ.[ಮೋದಿ, ಏಂಜೆಲಾ ಮರ್ಕೆಲ್ ಬೆಂಗಳೂರು ಭೇಟಿ, ಕ್ಷಣ ಕ್ಷಣದ ಮಾಹಿತಿ]

ಸುಭಾಷ್ ಕಪೂರ್ ಕದ್ದ ವಿಗ್ರಹ
ಕಲೆ ಮತ್ತು ಇತಿಹಾಸಕ್ಕೆ ಸಂಬಂಧಿಸಿದ ವಸ್ತುಗಳ ಅಪಹರಣಕಾರ ಸುಭಾಷ್ ಕಪೂರ್ ಭಾರತದಿಂದ ವಿಗ್ರಹಗಳನ್ನು ಕದ್ದು ಯುಎಸ್ ಗೆ, ಜರ್ಮನಿ, ಆಸ್ಟ್ರೇಲಿಯಾ ಸೇರಿದಂತೆ ವಿದೇಶಗಳಿಗೆ ಸಾಗಿಸುತ್ತಿದ್ದ. ಈತ ಅಪಹರಣ ಮಾಡಿದ್ದ ಹರಳುಗಳು ಯುಎಸ್ ನಲ್ಲೂ ಹಿಂದೆ ಪತ್ತೆಯಾಗಿತ್ತು. ಅಲ್ಲದೇ ಆಸ್ಟ್ರೇಲಿಯಾದ ಮ್ಯೂಸಿಯಂ ಒಂದಕ್ಕೆ 115ಕ್ಕೂ ಹೆಚ್ಚು ವಿಗ್ರಹಗಳನ್ನು ಈತ ನೀಡಿದ್ದಾನೆ ಎಂಬ ಮಾಹಿತಿಯೂ ಇದೆ.[ಚಿನ್ನ ಕಳ್ಳ ಸಾಗಣೆಯ ಹೊಸ ಮಾರ್ಗಗಳು ಯಾವವು!]
ತಮಿಳುನಾಡು ಪೊಲೀಸರು ಕಪೂರ್ ನನ್ನು ಬಂಧಿಸಿದಾಗ ಅವನು ಅಮೆರಿಕದ ಮ್ಯಾನ್ ಹಟನ್ನಲ್ಲಿ ಆರ್ಟ್ ಗ್ಯಾಲರಿಯೊಂದನ್ನು ನಡೆಸುತ್ತಿರುವುದು ಪತ್ತೆಯಾಗಿತ್ತು. ಇದರ ಜಾಡು ಹಿಡಿದ ಪೊಲೀಸರು ಮಹಿಷಾಸುರ ಮರ್ದಿನಿಯ ವಿಗ್ರಹ ಜರ್ಮನಿಯಲ್ಲಿರುವುದನ್ನು ಪತ್ತೆ ಹಚ್ಚಿದರು. ಜರ್ಮನಿ, ಸಿಂಗಾಪುರ ಸೇರಿದಂತೆ ಹಲವು ದೇಶಗಳಲ್ಲಿ ಭಾರತದ ಇನ್ನೂ ಹಲವು ಇಂತಹ ವಿಗ್ರಹಗಳಿದ್ದು ಅವುಗಳನ್ನೆಲ್ಲಾ ವಾಪಸು ತರುವ ಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications