ಆಂಧ್ರ -ತಮಿಳುನಾಡು ಸಂಬಂಧಕ್ಕೆ ಬೆಂಕಿ ಹಚ್ಚಿದ ರಕ್ತ ಚಂದನ
ಚೆನ್ನೈ, ಏ.8: ಆಂಧ್ರಪ್ರದೇಶ ಹಾಗೂ ತಮಿಳುನಾಡು ನಡುವಿನ ಸೌಹಾರ್ದ ಸಂಬಂಧಕ್ಕೆ ರಕ್ತಚಂದನ ಪ್ರಕರಣ ಬೆಂಕಿ ಹಚ್ಚಿದೆ. ಮಂಗಳವಾರ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ಎನ್ ಕೌಂಟರ್ ಹೆಸರಿನಲ್ಲಿ ಬಲಿಯಾದ ಕೂಲಿ ಕಾರ್ಮಿಕರಿಗೆ ನ್ಯಾಯ ಸಿಗಬೇಕು ಎಂದು ತಮಿಳುನಾಡಿನ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ನಡುವೆ ಬಸ್ ಸಂಚಾರ ವ್ಯತ್ಯಯಗೊಂಡಿದೆ. ಎನ್ ಕೌಂಟರ್ ಹೆಸರಿನಲ್ಲಿ ಅಮಾಯಕ ಕೂಲಿ ಕಾರ್ಮಿಕರನ್ನು ಆಂಧ್ರ ಪೊಲೀಸರು ಸಾಯಿಸಿದ್ದಾರೆ ಎಂಬ ಕೂಗೆದ್ದಿರುವ ಹಿನ್ನಲೆಯಲ್ಲಿ ಈ ಬಗ್ಗೆ ಕೂಡಲೇ ಗಮನ ಹರಿಸುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ತಮಿಳುನಾಡು ಸಿಎಂ ಪನ್ನೀರ್ ಸೆಲ್ವಂ ಮನವಿ ಮಾಡಿಕೊಂಡಿದ್ದಾರೆ. [ಚಿತ್ತೂರಿನಲ್ಲಿ ಎನ್ ಕೌಂಟರ್ 20 ಸ್ಮಗ್ಲರ್ಸ್ ಬಲಿ]
ರಕ್ತಚಂದನ ಮರಗಳ್ಳರ ಮೇಲೆ ಆಂಧ್ರಪ್ರದೇಶದ ಸ್ಪೆಷಲ್ ಟಾಸ್ಕ್ ಫೋರ್ಸ್ ಹಾಗೂ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಸಾಮೂಹಿಕ ಹತ್ಯೆ ಮಾಡಿದ್ದರು. ಈ ಘಟನೆಯನ್ನು ಮಾನವ ಹಕ್ಕುಗಳ ಆಯೋಗ ಖಂಡಿಸಿತ್ತು. ಮೃತರ ಪೈಕಿ 12ಜನ ತಿರುನಲ್ವೇಲಿ ಹಾಗೂ ವೆಲ್ಲೂರು ಜಿಲ್ಲೆಯವರಾಗಿದ್ದಾರೆ. ಕೂಲಿ ಕಾರ್ಮಿಕರನ್ನು ಹತ್ಯೆ ಮಾಡುವ ಬದಲು ಬಂಧಿಸಿ ವಿಚಾರಣೆ ನಡೆಸಬಹುದಾಗಿತ್ತು ಎಂದು ತಮಿಳುನಾಡಿನ ಜನ ವಾದಿಸುತ್ತಿದ್ದಾರೆ.

ಬಿಗಿ ಭದ್ರತೆ : ತಮಿಳುನಾಡಿನಿಂದ ಕಡಪ, ಚಿತ್ತೂರು, ಕರ್ನೂಲು ಹಾಗೂ ನೆಲ್ಲೂರು ಭಾಗಕ್ಕೆ ಸಂಚರಿಸುವ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಪ್ರತಿನಿತ್ಯ 60-80ಬಸ್ ಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ.ಚೆನ್ನೈನಲ್ಲಿರುವ ಆಂಧ್ರಮೂಲದ ಬ್ಯಾಂಕ್, ಉದ್ಯಮ ಸಂಸ್ಥೆಗಳಿಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.
ಘಟನೆ ಖಂಡಿಸಿದ ತಮಿಳುನಾಡಿನ ಪಕ್ಷಗಳು: ಕಾಂಗ್ರೆಸ್ಸಿನ ಎಳಂಗೋವನ್, ಡಿಎಂಕೆ ಕರುಣಾನಿಧಿ, ಪಿಎಂಕೆ ರಾಮದಾಸ್, ಎಂಡಿಎಂಕೆ ವೈಕೋ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖ ಮುಖಂಡರು ಆಂಧ್ರಪೊಲೀಸರ ಕೃತ್ಯವನ್ನು ಖಂಡಿಸಿದ್ದಾರೆ.

ಘಟನೆಗೂ ಮುನ್ನ: 2014ರ ಮೇ ತಿಂಗಳಿನಲ್ಲಿ ಮೂವರು ಸ್ಮಗ್ಲರ್ ಗಳನ್ನು ಪೊಲೀಸರು ಕೊಂದು ಹಾಕಿದ್ದರು. 2013ರಲ್ಲಿ ಸುಮಾರು 3,000 ಸ್ಮಗ್ಲರ್ಸ್ ಬಂಧಿಸಿ 2,025 ಟನ್ ರಕ್ತ ಚಂದನ ವಶಪಡಿಸಿಕೊಂಡಿದ್ದರು.
ವಿದೇಶದಲ್ಲಿ ರಕ್ತಚಂದನದ ಬೆಲೆ ಪ್ರತಿ ಟನ್ನಿಗೆ 25 ಲಕ್ಷದಿಂದ 1 ಕೋಟಿ ರು ತನಕ ರೇಟ್ ಇದೆ. ಕಳೆದ ವರ್ಷ ರಕ್ತಚಂದನದ ಜಾಗತಿಕ ಹರಾಜಿನಲ್ಲಿ ಆಂಧ್ರಪ್ರದೇಶಕ್ಕೆ 1,000 ಕೋಟಿ ರು ಆದಾಯ ಬಂದಿತ್ತು. (ಐಎಎನ್ ಎಸ್)
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications