ಸಿಬಿಐ ಹೊಸ ನಿರ್ದೇಶಕ ಅನಿಲ್ ಕುಮಾರ್ ಸಿನ್ಹಾ
ನವದೆಹಲಿ, ಡಿ.3: ಸಿಬಿಐನ ನೂತನ ನಿರ್ದೇಶಕರಾಗಿ ಅನಿಲ್ ಕುಮಾರ್ ಸಿನ್ಹಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ಮಂಗಳವಾರ ರಾತ್ರಿ ಆಯ್ಕೆ ಮಾಡಿದೆ. ಸಿಬಿಐ ನಿರ್ದೇಶಕರಾಗಿದ್ದ ರಂಜಿತ್ ಸಿನ್ಹಾ ಅವರ ಅಧಿಕಾರ ಅವಧಿ ಡಿ.2ಕ್ಕೆ ಕೊನೆಗೊಂಡಿತ್ತು. ಸಿಬಿಐನ ತನಿಖಾ ತಂಡವೊಂದರ ವಿಶೇಷ ನಿರ್ದೇಶಕರಾಗಿರುವ ಅನಿಲ್ ಕುಮಾರ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಮಂಗಳವಾರ ರಾತ್ರಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಉಪಸ್ಥಿತರಿದ್ದರು. [ಸಿಬಿಐ ನಿರ್ದೇಶಕ ಸಿನ್ಹಾ ನಿವೃತ್ತಿ]
ಸಿನ್ಹಾ ಪರಿಚಯ: 1979ರ ಬಿಹಾರ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಸಿನ್ಹಾ ಅವರು ಕೇಂದ್ರ ತನಿಖಾ ದಳದಲ್ಲಿ ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಮನಃಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಎಂಫಿಲ್ ಪಡೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಸಮಿತಿ ಮುಂದೆ ಐಪಿಎಸ್ ಅಧಿಕಾರಿಗಳಾದ ಅನಿಲ್ಕುಮಾರ್ ಸಿನ್ಹಾ ಮತ್ತು ಶರತ್ಕುಮಾರ್ ಹಾಗೂ ಆಂತರಿಕ ಭದ್ರತಾ ಪಡೆ ವಿಶೇಷ ಕಾರ್ಯದರ್ಶಿ ಪ್ರಕಾಶ್ ಮಿಶ್ರಾ, ರೈಲ್ವೆ ರಕ್ಷಣಾ ಪಡೆ ಪ್ರಧಾನ ನಿರ್ದೇಶಕ ಕೃಷ್ಣ ಚೌಧರಿ ಅವರ ಹೆಸರುಗಳು ಚರ್ಚೆಗೊಳಲ್ಪಟ್ಟಿತ್ತು. [2ಜಿ ಹಗರಣ ತನಿಖೆ]
ಸುಮಾರು 40 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರುಗಳನ್ನು ಪರಿಶೀಲಿಸಲಾಗಿತ್ತು. ಅಂತಿಮವಾಗಿ ಅನಿಲ್ ಕುಮಾರ್ ಸಿನ್ಹಾ ಮತ್ತು ಹರ್ಯಾಣದ ಐಪಿಎಸ್ ಅಧಿಕಾರಿ ಶರತ್ ಕುಮಾರ್ ನಡುವೆ ಪೈಪೋಟಿ ಇತ್ತು. ಕೊನೆಗೆ ಅನಿಲ್ ಸಿನ್ಹಾ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.
ಅನಿಲ್ ಕುಮಾರ್ ಸಿನ್ಹಾ ಹಾಗೂ ಅವರ ತಂಡ ಈಗ ಬಹುಕೋಟಿ 2ಜಿ ತರಂಗಗುಚ್ಛ ಹಂಚಿಕೆ ಹಗರಣ, ಕಲ್ಲಿದ್ದಲು ಹಗರಣ, ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ಮುಂದುವರೆಸಲಿದೆ. ಕಪ್ಪು ಹಣ ವಾಪಸ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷಾ ತನಿಖಾ ದಳಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಲಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications