ಸಿಬಿಐ ಹೊಸ ನಿರ್ದೇಶಕ ಅನಿಲ್ ಕುಮಾರ್ ಸಿನ್ಹಾ
ನವದೆಹಲಿ, ಡಿ.3: ಸಿಬಿಐನ ನೂತನ ನಿರ್ದೇಶಕರಾಗಿ ಅನಿಲ್ ಕುಮಾರ್ ಸಿನ್ಹಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ಮಂಗಳವಾರ ರಾತ್ರಿ ಆಯ್ಕೆ ಮಾಡಿದೆ. ಸಿಬಿಐ ನಿರ್ದೇಶಕರಾಗಿದ್ದ ರಂಜಿತ್ ಸಿನ್ಹಾ ಅವರ ಅಧಿಕಾರ ಅವಧಿ ಡಿ.2ಕ್ಕೆ ಕೊನೆಗೊಂಡಿತ್ತು. ಸಿಬಿಐನ ತನಿಖಾ ತಂಡವೊಂದರ ವಿಶೇಷ ನಿರ್ದೇಶಕರಾಗಿರುವ ಅನಿಲ್ ಕುಮಾರ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಮಂಗಳವಾರ ರಾತ್ರಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಉಪಸ್ಥಿತರಿದ್ದರು. [ಸಿಬಿಐ ನಿರ್ದೇಶಕ ಸಿನ್ಹಾ ನಿವೃತ್ತಿ]
ಸಿನ್ಹಾ ಪರಿಚಯ: 1979ರ ಬಿಹಾರ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಸಿನ್ಹಾ ಅವರು ಕೇಂದ್ರ ತನಿಖಾ ದಳದಲ್ಲಿ ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಮನಃಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಎಂಫಿಲ್ ಪಡೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಸಮಿತಿ ಮುಂದೆ ಐಪಿಎಸ್ ಅಧಿಕಾರಿಗಳಾದ ಅನಿಲ್ಕುಮಾರ್ ಸಿನ್ಹಾ ಮತ್ತು ಶರತ್ಕುಮಾರ್ ಹಾಗೂ ಆಂತರಿಕ ಭದ್ರತಾ ಪಡೆ ವಿಶೇಷ ಕಾರ್ಯದರ್ಶಿ ಪ್ರಕಾಶ್ ಮಿಶ್ರಾ, ರೈಲ್ವೆ ರಕ್ಷಣಾ ಪಡೆ ಪ್ರಧಾನ ನಿರ್ದೇಶಕ ಕೃಷ್ಣ ಚೌಧರಿ ಅವರ ಹೆಸರುಗಳು ಚರ್ಚೆಗೊಳಲ್ಪಟ್ಟಿತ್ತು. [2ಜಿ ಹಗರಣ ತನಿಖೆ]
ಸುಮಾರು 40 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರುಗಳನ್ನು ಪರಿಶೀಲಿಸಲಾಗಿತ್ತು. ಅಂತಿಮವಾಗಿ ಅನಿಲ್ ಕುಮಾರ್ ಸಿನ್ಹಾ ಮತ್ತು ಹರ್ಯಾಣದ ಐಪಿಎಸ್ ಅಧಿಕಾರಿ ಶರತ್ ಕುಮಾರ್ ನಡುವೆ ಪೈಪೋಟಿ ಇತ್ತು. ಕೊನೆಗೆ ಅನಿಲ್ ಸಿನ್ಹಾ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.
ಅನಿಲ್ ಕುಮಾರ್ ಸಿನ್ಹಾ ಹಾಗೂ ಅವರ ತಂಡ ಈಗ ಬಹುಕೋಟಿ 2ಜಿ ತರಂಗಗುಚ್ಛ ಹಂಚಿಕೆ ಹಗರಣ, ಕಲ್ಲಿದ್ದಲು ಹಗರಣ, ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ಮುಂದುವರೆಸಲಿದೆ. ಕಪ್ಪು ಹಣ ವಾಪಸ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷಾ ತನಿಖಾ ದಳಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಲಿದೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications