ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕ್ ಪಾಲ್ ವಿಳಂಬ, ಹೋರಾಟದ ಎಚ್ಚರಿಕೆ ನೀಡಿದ ಅಣ್ಣ ಹಜಾರೆ

|
Google Oneindia Kannada News

ನವದೆಹಲಿ, ಆಗಸ್ಟ್ 30 : ಜನಲೋಕ್ ಪಾಲ್ ಮಸೂದೆಯನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮತ್ತೆ ಹೋರಾಟದ ಹಾದಿ ತುಳಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೇಜ್ರಿ ಭ್ರಷ್ಟಾಚಾರ ಸಾಬೀತಾದರೆ ರಾಜಿನಾಮೆಗೆ ಒತ್ತಾಯಿಸಿ ಧರಣಿ: ಅಣ್ಣಾಕೇಜ್ರಿ ಭ್ರಷ್ಟಾಚಾರ ಸಾಬೀತಾದರೆ ರಾಜಿನಾಮೆಗೆ ಒತ್ತಾಯಿಸಿ ಧರಣಿ: ಅಣ್ಣಾ

ಲೋಕ್ ಪಾಲ್‌ ಮಸೂದೆ ಜಾರಿ ಮಾಡುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಜಾರಿ ಮಾಡದೇ ಇದ್ದರೇ ಮತ್ತೆ ದೆಹಲಿಯಲ್ಲಿ ಬೃಹತ್‌ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Anna Hazare Writes Letter to PM Narendra Modi, for delay in appointing a Lokpal

ಅಧಿಕಾರಕ್ಕೆ ಬಂದು ಮೂರು ವರ್ಷವಾದರೂ ಲೋಕಪಾಲ್ ನೇಮಕ ವಿಚಾರದಲ್ಲಿ ನಿರಾಸಕ್ತಿ ತೋರಿರುವ ಮೋದಿ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಪತ್ರದಲ್ಲಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಭಷ್ಟ್ರಾಚಾರ ಮುಕ್ತ ಭಾರತ ನಿರ್ಮಿಸುವ ಉದ್ದೇಶದಿಂದ ಐತಿಹಾಸಿಕ ಚಳವಳಿ ನಡೆದು 6 ವರ್ಷ ಕಳೆದಿವೆ. ಆದರೆ, ಭಷ್ಟ್ರಾಚಾರಕ್ಕೆ ಮುಕ್ತಿಗೆ ಒಂದು ನಿರ್ದಿಷ್ಟವಾದ ಕಾನೂನಿನ ಕರಡು ಸಿದ್ಧಪಡಿಸಿಲ್ಲ ಎಂದು ಪತ್ರದಲ್ಲಿ ಅಣ್ಣಾ ಹಜಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕ್ ಪಾಲ್ ಹಾಗೂ ಲೋಕಾಯುಕ್ತ ನೇಮಕದ ಬಗ್ಗೆ 3 ವರ್ಷಗಳಿಂದ ನಾನು ನಿಮ್ಮ ಸರ್ಕಾರಕ್ಕೆ ನೆನಪಿಸುತ್ತಲೇ ಇದ್ದೇನೆ. ಆದರೆ, ನೀವು ನನ್ನ ಪತ್ರಗಳಿಗೆ ಸ್ಪಂಧಿಸಿಲ್ಲವವೆಂದು ಅಣ್ಣ ಹಜಾರೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

English summary
In a stinging letter addressed to Prime Minister Narendra Modi, veteran social activist Anna Hazare today slammed the government for its delay in appointing a Lokpal even after three years in power and threatened another round of agitation in New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X