Annamalai: ಅಣ್ಣಾಮಲೈ ತಂತ್ರಕ್ಕೆ ತಮಿಳುನಾಡಿನಲ್ಲಿ ಬಿಜೆಪಿಗೆ ಮೊದಲ ಗೆಲುವು?
ಅಣ್ಣಾಮಲೈ ಈಗ, ತಮಿಳುನಾಡು ಚುನಾವಣೆ ಅಖಾಡದಲ್ಲಿ ಜಾದೂ ಮಾಡಿದ್ದಾರೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ. ಅದರಲ್ಲೂ ನಿನ್ನೆ ಎಕ್ಸಿಟ್ ಪೋಲ್ ಅಂದ್ರೆ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿತ್ತು. ಈ ಪೈಕಿ ತಮಿಳುನಾಡು ರಾಜ್ಯದಲ್ಲಿ ಕೂಡ ಬಿಜೆಪಿ ಮೊದಲ ಬಾರಿಗೆ ಬಂಪರ್ ಬೆಳೆ ತೆಗೆಯುವ ಮುನ್ಸೂಚನೆ ಸಿಕ್ಕಿತ್ತು. ಹೀಗಾಗಿ ಅಣ್ಣಾಮಲೈ ವಿಚಾರ ಈಗ ಮತ್ತೆ ಟ್ರೆಂಡ್ನಲ್ಲಿದೆ.
ಅಣ್ಣಾಮಲೈ ಅಂದ್ರೆ ತಮಿಳುನಾಡಿನ ಮೂಲೆ ಮೂಲೆಯಲ್ಲೂ ಹವಾ ಇದೆ. ಇನ್ನು ಕರ್ನಾಟಕ ರಾಜ್ಯದಲ್ಲೂ ಅಣ್ಣಾಮಲೈ ಅವರು ದೊಡ್ಡ ಹೆಸರು ಸಂಪಾದಿಸಿದ್ರು. ಯಾಕಂದ್ರೆ ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಚಿಕ್ಕಮಗಳೂರು ಭಾಗದಲ್ಲಿ ಇವರ ಹೆಸರಿನ ಬದಲು 'ಸಿಂಗಂ ಅಣ್ಣಾಮಲೈ' ಅಂತಾನೆ ಜನರು ಕರೆಯುತ್ತಿದ್ದರು. ಈಗ ಇದೆ ಅಣ್ಣಾಮಲೈ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದಾರೆ. ಅದರಲ್ಲೂ ಇದೇ ಮೊದಲ ಬಾರಿಗೆ ತಮಿಳುನಾಡು ರಾಜ್ಯದಲ್ಲಿ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ.
ಬಿಜೆಪಿ ಭರ್ಜರಿ ಲಾಭ?
ಅಂದಹಾಗೆ ನಿನ್ನೆ ಹೊರಬಿದ್ದಿರುವ ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, ತಮಿಳುನಾಡು ರಾಜ್ಯದಲ್ಲಿ ಒಟ್ಟು 39 ಸ್ಥಾನಗಳು ಇವೆ. ಈ ಪೈಕಿ ಬಿಜೆಪಿ 1 ರಿಂದ 3 ಸ್ಥಾನದಲ್ಲಿ ಗೆಲ್ಲಬಹುದು ಎನ್ನಲಾಗಿದೆ. ಹಾಗೇ ಕಾಂಗ್ರೆಸ್ & ಡಿಎಂಕೆ 36 ರಿಂದ 39 ಸ್ಥಾನ ಗೆಲ್ಲಬಹುದು ಎಂಬ ನಿರೀಕ್ಷೆ ಇದ್ದು, ಇತರರು ಒಟ್ಟು 02 ಸ್ಥಾನದಲ್ಲಿ ಗೆಲ್ಲುವ ನಿರೀಕ್ಷೆಯನ್ನ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ವ್ಯಕ್ತಪಡಿಸಿವೆ.
ಹೀಗಿದ್ದಾಗ ತಮಿಳುನಾಡಿನ ಈ ಪ್ರಚಂಡ ಗೆಲುವಿನ ಕ್ರೆಡಿಟ್ ಸಂಪೂರ್ಣ ಕೆ. ಅಣ್ಣಾಮಲೈ ಅವರಿಗೆ ಸಲ್ಲುತ್ತದೆ. ಯಾಕಂದ್ರೆ, ತಮಿಳುನಾಡು ಅಖಾಡದಲ್ಲಿ ಬಿಜೆಪಿಯ ಬಲ ಹೆಚ್ಚಿಸಿದ್ದು ಅಣ್ಣಾಮಲೈ. ಅಕಸ್ಮಾತ್ ಬಿಜೆಪಿ ತಮಿಳುನಾಡಿನಲ್ಲಿ 1 ರಿಂದ 3 ಸ್ಥಾನದಲ್ಲಿ ಗೆದ್ದು ಬೀಗಿದರೆ ಅದು ಬಹುದೊಡ್ಡ ಸಾಧನೆ ಆಗಲಿದೆ.
ಪಕ್ಷದಲ್ಲಿ ಅಣ್ಣಾಮಲೈಗೆ ಭಾರಿ ಗೌರವ
ಕೆ. ಅಣ್ಣಾಮಲೈ ಕಂಡರೆ ಪ್ರಧಾನಿ ಮೋದಿ ಅವರಿಂದಲು ಹಿಡಿದು, ಆರ್ಎಸ್ಎಸ್ ಮುಖಂಡರ ತನಕ ಪ್ರತಿಯೊಬ್ಬರಿಗೂ ಭಾರಿ ಗೌರವ. ಬಿಜೆಪಿಗೆ ಬಂದು ಕೆಲ ವರ್ಷದಲ್ಲಿ ಅಣ್ಣಾಮಲೈ ಅವರು ದೊಡ್ಡ ಹೆಸರು ಸಂಪಾದಿಸಿದ್ದಾರೆ.
ಅದ್ರಲ್ಲೂ ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಅವರು ಅಣ್ಣಾಮಲೈ ಅವರನ್ನ ಹೊಗಳಿದ್ದರು. ಇದರ ಜೊತೆಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಗಿರುವ ಬಿ.ಎಲ್. ಸಂತೋಷ್ರ ಬೆಂಬಲ ಕೂಡ ಅಣ್ಣಾಮಲೈ ಅವರಿಗೆ ಇದೆ. ಹೀಗಿದ್ದಾಗ, ತಮಿಳುನಾಡು ರಾಜಕೀಯದಲ್ಲಿ ಬಿಜೆಪಿ ಕಮಾಲ್ ಮಾಡುತ್ತಿದೆ. ಜೂನ್ 4 ರ ಮಂಗಳವಾರ ಈ ಎಲ್ಲಾ ಕುತೂಹಲಕ್ಕೆ ತೆರೆ ಬೀಳಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications